Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ


Team Udayavani, Apr 10, 2024, 1:28 PM IST

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

■ ಉದಯವಾಣಿ ಸಮಾಚಾರ
ಬಳ್ಳಾರಿ: ದೇಶ ವೀದೇಶಗಳಲ್ಲಿ ಬಳ್ಳಾರಿಯನ್ನು ಸುವಿಖ್ಯಾತಗೊಳಿಸಿದ್ದ ರಾಘವರ ಶಿಷ್ಯ ಜೋಳದರಾಶಿ ದೊಡ್ಡನಗೌಡರು, ಮತ್ತವರ ಶಿಷ್ಯ ಸಿಡಿಗಿನಮೊಳೆ ಚಂದ್ರಯ್ಯ, ಇವರ ಶಿಷ್ಯರೇ ಬೆಳಗಲ್ಲು ವೀರಣ್ಣನವರಾಗಿದ್ದು, ಇಂದಿನ ಆಧುನಿಕ ಯುಗದಲ್ಲಿ ಗುರು-ಶಿಷ್ಯ ಪರಂಪರೆಗೆ ಜೀವಂತ ಸಾಕ್ಷಿಯಾಗಿದ್ದರು ಎಂದು ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ| ಕೆ.ಆರ್‌
.ದುರ್ಗಾದಾಸ ಹೇಳಿದರು.

ನಗರದ ರಾಘವಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಬೆಳಗಲ್ಲು ವೀರಣ್ಣ “ಆತ್ಮಕಥನ ನಾಟಕದ ಗೊಂಬೆ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ನಾಟಕ ರಂಗದಲ್ಲಿ ಸಾಕಷ್ಟು ಪಡಿಪಾಟಲು ಪಟ್ಟಿದ್ದ ಬೆಳಗಲ್ಲು ವೀರಣ್ಣನವರು, ಮನೆತನದ ಕುಲಕಸುಬು “ತೊಗಲುಗೊಂಬೆ’ ಆಟವನ್ನು ಕೈಗೆತ್ತಿಕೊಂಡು ಅದರಲ್ಲೇ ದೇಶ ವಿದೇಶಗಳಲ್ಲಿ ಪ್ರಖ್ಯಾತರಾದರು. ಅತ್ಯಂತ ಸೌಮ್ಯ, ವಿನಯವಂತರಾಗಿದ್ದರೂ ಅನ್ಯಾಯವನ್ನು ವಿರೋಧಿ ಸುವ ಮನಸ್ಥಿತಿ ಅವರಿಗಿತ್ತು ಎಂದರು.

ಪ್ರಾಧ್ಯಾಪಕ ಡಾ|ರಾಜಪ್ಪ ದಳವಾಯಿ ಮಾತನಾಡಿ, ನಾಟಕ ರಂಗದಲ್ಲೂ ಸೈ ಎನಿಸಿಕೊಂಡಿದ್ದ ಬೆಳಗಲ್ಲು ವೀರಣ್ಣನವರು,
ನಂತರ ತೊಗಲುಗೊಂಬೆ ಆಟಕ್ಕೆ ಬಂದಿದ್ದರ ನೆನಪಿನಲಿ ನಾನೇ ನಿರೂಪಿಸಿದ ಅವರ ಆತ್ಮಕಥನಕ್ಕೆ “ನಾಟಕ ಗೊಂಬೆ’ ಶೀರ್ಷಿಕೆ ನೀಡಿದೆ ಎಂದು ಹೇಳಿದರು. ಬಳ್ಳಾರಿಯಲ್ಲಿರುವ ಅದ್ಭುತ ಕಲಾವಿದರ ಜೀವನ ಗಾಥೆಯನ್ನು ಸಾಹಿತಿ ಬರಹಗಾರರು ಅವರೊಂದಿಗೆ ಅನುಸಂಧಾನ ನಡೆಸಿ ಬರೆದು ಪ್ರಕಟಿಸಬೇಕು ಎಂದ ಅವರು, ಬೆಳಗಲ್ಲು ವೀರಣ್ಣ ಸ್ಮರಣೆ ಎಂದರೆ ರಕ್ತರಾತ್ರಿ,
ತೊಗಲುಗೊಂಬೆ ಆಟ, ರಂಗಗೀತೆ ಇದ್ದಾಗಲೇ ಅದು ನಿಜವಾದ ಸ್ಮರಣೆ ಎಂದು ಗುಣಗಾನ  ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಎಂಜಿನಿಯರ್‌ ಎಂ.ಜಿ.ಗೌಡ ಮಾತನಾಡಿ, ಬೆಳಗಲ್ಲು ವೀರಣ್ಣನವರು ಅದ್ಭುತ ಜೀವನೋತ್ಸಾಹಿ. ದೇಶ ವಿದೇಶಗಳಲ್ಲಿ ಪ್ರದರ್ಶನ ನೀಡಿ ಬಂದಾಗ ತಮ್ಮ ಅನುಭವಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದರು. ಇಂಡೋನೇಷಿಯಾ ಮುಸ್ಲಿಂ ರಾಷ್ಟ್ರ ವಾದರೂ ಅಲ್ಲಿಯ ರಾಮಾಯಣ ಅಭಿಮಾನ ಅವರ ಮನಸೂರೆಗೊಂಡಿತ್ತು ಎಂದು
ಹೇಳಿದರು.

ನಮ್ಮ ತಂದೆ ಹಾಗೂ ವೀರಣ್ಣನವರದು ಅವಿನಾಭಾವ ಸಂಬಂಧ. ಶಿವದುರಂಧರ ಬಯಲಾಟದಲ್ಲಿ ತಮ್ಮ ತಂದೆನೂ ಪಾತ್ರ
ಮಾಡಿದ್ದರು. ಅದರಲ್ಲಿ ವೀರಣ್ಣನವರದು ಸ್ತ್ರೀ ಪಾತ್ರ. ಒಮ್ಮೆ ವೀರಣ್ಣನವರು ನಮ್ಮ ಮನೆಗೇ ಬಂದು ತಂದೆಯವರನ್ನು ಸನ್ಮಾನಿಸಿದ್ದು ಅವರ ಹಿರಿಮೆಯ ಸದ್ಗುಣ ಎಂದು ಅಭಿಪ್ರಾಯಪಟ್ಟರು.

ಮೈಸೂರಿನ ರಂಗಕರ್ಮಿ ಬಿ.ಎಂ. ರಾಮಚಂದ್ರ ಮಾತನಾಡಿದರು. ಹೆಜ್ಜೆ ಗೆಜ್ಜೆ ಬಯಲಾಟ ಕಲಾ ಟ್ರಸ್ಟ್‌ ಕೊಡಮಾಡುತ್ತಿರುವ
“ನಾಡೋಜ ಬೆಳಗಲ್ಲು ವೀರಣ್ಣ’ ಪ್ರಥಮ ಪ್ರಶಸ್ತಿಯನ್ನು ತೊಗಲುಗೊಂಬೆ ಕಲಾವಿದ 91 ವರ್ಷದ “ನಾರಾಯಣಪ್ಪ ಕಾರಿಗನೂರು’ ಅವರಿಗೆ ನಟರಾಜ ವಿಗ್ರಹದೊಂದಿಗೆ 11 ಸಾವಿರ ರೂ.ಚೆಕ್‌ ನೀಡಿ ಗೌರವಿಸಲಾಯಿತು. ಬಳಿಕ ಡಾ|ರಾಜಪ್ಪ ದಳವಾಯಿ, ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ|ಕೆ.ಆರ್‌. ದುರ್ಗಾದಾಸ  ಅವರನ್ನು ಗೌರವಿಸಲಾಯಿತು.

ಕೆ.ವಸಂತಕುಮಾರ, ಕವಿತಾ ಗಂಗೂರ ಗೀತ ನಮನ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕ್ಯಾಷಿಯೋ ತಿಪ್ಪೇಸ್ವಾಮಿ ಹಾಗೂ ತಬಲಾ ವಿರುಪಾಕ್ಷಪ್ಪ ಸಾಥ್‌ ನೀಡಿದರು. ರಂಗತೋರಣ ಅಧ್ಯಕ್ಷ ಪ್ರೊ|ಆರ್‌ .ಭೀಮಸೇನ, ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು, ಟ್ರಸ್ಟ್‌ ಅಧ್ಯಕ್ಷ ಎಚ್‌.ತಿಪ್ಪೇಸ್ವಾಮಿ ಇದ್ದರು. ಉಪನ್ಯಾಸಕ ಎ.ಎಂ.ಪಿ. ವೀರೇಶಸ್ವಾಮಿ, ಬೆಳಗಲ್ಲು ವೀರಣ್ಣರ ಕುರಿತು ಬರೆದ ಕವನ ವಾಚಿಸಿದರು. ಎಚ್‌. ತಿಪ್ಪೇಸ್ವಾಮಿ ನಿರೂಪಿಸಿದರು. ಬಯಲಾಟ ಕಲಾವಿದ ಸುಬ್ಬಣ್ಣ ವಂದಿಸಿದರು. ಶ್ರೀರಾಮಾಂಜನೇಯ
ತೊಗಲುಗೊಂಬೆ ಟ್ರಸ್ಟ್‌ನಿಂದ “ಮಹಾತ್ಮಾಗಾಂಧಿ ’ ತೊಗಲುಗೊಂಬೆ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

3-hunsur

Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.