ವಾಯು ಮಾಲಿನ್ಯ ತಡೆಗೆ ಒತ್ತಾಯಿಸಿ ಮನವಿ
ತೋರಣಗಲ್ಲು ಜನಪರ ಸಂಘಟನೆಗಳ ಜಂಟಿ ಸಮಿತಿಯಿಂದ ಎಡಿಸಿ ಪಿ.ಎಸ್. ಮಂಜುನಾಥ್ರಿಗೆ ಮನವಿ ಸಲ್ಲಿಸಲಾಯಿತು.
Team Udayavani, Jan 25, 2021, 5:46 PM IST
ಬಳ್ಳಾರಿ: ಜಿಲ್ಲೆಯ ಸಂಡೂರು ಮತ್ತು ಕುರುಗೋಡು ತಾಲೂಕಿನ ಕುಡಿತಿನಿ ಸುತ್ತಮುತ್ತಲ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಂದ ಉಂಟಾಗುತ್ತಿರುವ ಜಲ, ವಾಯು ಮಾಲಿನ್ಯ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೋರಣಗಲ್ಲು ಜನಪರ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ಸಂಡೂರು, ಕುರುಗೋಡು ತಾಲೂಕಿನ ತೋರಣಗಲ್ಲು ಮತ್ತು ಕುಡತಿನಿ ಸುತ್ತಮುತ್ತಲು ಇರುವ ಕೈಗಾರಿಕೆಗಳಿಂದ ಹೊರಹೊಮ್ಮುವ ತ್ಯಾಜ್ಯ ಮತ್ತು ಧೂಳಿನ ಕಣಗಳಿಂದ ತೋರಣಗಲ್ಲು, ಸುಲ್ತಾನಪುರ ಗ್ರಾಮದ ಸುತ್ತಾಮುತ್ತ ಜಲ-ವಾಯು ವಿಷಪೂರಿತವಾಗಿವೆ. ದಿನದಿಂದ ದಿನಕ್ಕೆ ವಾಯು ಗುಣಮಟ್ಟದ ಸೂಚ್ಯಂಕ ಎಸ್ 1950 ಎಕ್ಯೂಎ ಹೆಚ್ಚಾಗಿದೆ. ನಾರಿಹಳ್ಳ ಮುಂತಾದ ನಾಲೆಗಳ ಮೂಲಕ ದರೋಜಿ ಕರೆಗೆ ವಿಷ ಪೂರಿತ ತ್ಯಾಜ್ಯ ಹರಿದು ಜಲ ಮಾಲಿನ್ಯವಾಗುತ್ತಿದೆ. ಕುಡಿತಿನಿ ಪಟ್ಟಣದಲ್ಲಿ ಧೂಳಿನಿಂದಾಗಿ ವಾಯು ಮತ್ತು ಕುಡಿಯುವ ನೀರಿನ ಮಾಲಿನ್ಯ ಉಂಟಾಗಿದೆ. ಪರಿಸರ ಮಾಲಿನ್ಯದ ಬಗ್ಗೆ ಕೈಗಾರಿಕೆಗಳ ಮೇಲೆ ಕಾನೂನು ರೀತಿ ಕೇಸು ದಾಖಲಿಸಿ ದಂಡ ವಿಧಿ ಸಿ, ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಆನ್ಲೈನ್ ಎಮಿಷನ್ ಮಾನಿಟರಿಂಗ್ ಸಿಸ್ಟಂನ್ನು ಪ್ರಮುಖ ಪರಿಸರ ಮಾಲಿನ್ಯ ಹಾಟ್ಸ್ಪಾಟ್ ಸ್ಥಳಗಳಲ್ಲಿ ಅಳವಡಿಸಬೇಕು. ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದು ಸಮಿತಿಯ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಸುಲ್ತಾನಪುರ ಗ್ರಾಮವನ್ನು ಶೀಘ್ರ ಸ್ಥಳಾಂತರ ಮಾಡಬೇಕು. ಸ್ಥಳಾಂತರಗೊಳ್ಳುವರಿಗೆ ಹತ್ತಿರದ ಕೈಗಾರಿಕೆಗಳನ್ನು ಮುಚ್ಚಿಸಬೇಕು. ಕಲ್ಲಿದ್ದಲು ಬಳಸುವ ಕೈಗಾರಿಕೆಗಳು ಹೆಚ್ಚಾಗಿದ್ದು ಫಲವತ್ತಾದ ಮಣ್ಣು ಕೂಡ ಕಲುಷಿತಗೊಂಡು ಕೃಷಿ ಉತ್ಪಾದನೆ ಕುಂಠಿತಗೊಂಡಿದೆ. ಕೃಷಿಗೆ ಪರಿಹಾರ ನೀಡಬೇಕು. ಉತ್ತಮ ತಂತ್ರಜ್ಞಾನವನ್ನು ಬಳಿಸಿ ಗಾಳಿಯಿಂದ ಧೂಳಿನ ಕಣ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದವರು ಕೋರಿದ್ದಾರೆ. ಈ ಸಂದರ್ಭದಲ್ಲಿ ಸಮಿತಿ ಮುಖಂಡರುಗಳಾದ ಕೆ.ಜಂಬಯ್ಯ, ಜಂಗ್ಲಿ ಸಾಬ್, ಜೆ.ಎಂ. ಚೆನ್ನಬಸಯ್ಯ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ