ನಾಳೆ ರಾಜ್ಯಮಟ್ಟದ ಸಮಾವೇಶ: ತಳವಾರ್‌

ರಾಜ್ಯಾದ್ಯಂತ 12 ಕಡೆ ಸಂವಿಧಾನ ಉಳಿಸಿ- ದೇಶ ಉಳಿಸಿ ಸಮಾವೇಶ ಆಯೋಜನೆ

Team Udayavani, Feb 19, 2021, 4:33 PM IST

19-17

ಬಳ್ಳಾರಿ: ನಗರದ ರಾಘವಕಲಾ ಮಂದಿರದಲ್ಲಿ ಫೆ. 20ರಂದು ಬೆಳಗ್ಗೆ 11 ಗಂಟೆಗೆ ಮಹಾತ್ಮ ಜ್ಯೋತಿಬಾ ಪುಲೆಯವರ ಜಯಂತಿ ನಿಮಿತ್ತ ಸಂವಿಧಾನ ಉಳಿಸಿ ದೇಶ ಉಳಿಸಿ ಎಂಬ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ರಾಜ್ಯ ಸಮಿತಿ ಸಂಘಟನಾ ಸಂಚಾಲಕ ರಾಜು ಎಂ.ತಳವಾರ್‌ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿನ ತಳಸಮುದಾಯದ ಜನರು,
ಯುವಕರು, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಒಗ್ಗೂಡಿಸುವ ಸಲುವಾಗಿ ರಾಜ್ಯಾದ್ಯಂತ 12 ಕಡೆ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗುತ್ತಿದೆ.

ಈಗಾಗಲೇ ಜನವರಿ 26ರಂದು ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಮೊದಲ ಸಮಾವೇಶವನ್ನು ಆಯೋಜಿಸಲಾಗಿದ್ದು, ಎರಡನೇ ಸಮಾವೇಶವನ್ನು ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜನರು ಭಾಗವಹಿಸಲಿದ್ದು, ರಾಜ್ಯಾದ್ಯಂತ ಇರುವ ಸಂಘಟನೆಯ ಕಾರ್ಯಕರ್ತರು, ಪದಾ ಧಿಕಾರಿಗಳು, ಅಭಿಮಾನಿಗಳು ಆಗಮಿಸಲಿದ್ದಾರೆ. ಮುಂದಿನ ಮಾರ್ಚ್‌ 20ಕ್ಕೆ ಕೊಪ್ಪಳ, ಮೇ 1ಕ್ಕೆ ಕೋಲಾರ, ಮೇ 20ಕ್ಕೆ ರಾಯಚೂರು ಜಿಲ್ಲೆಗಳಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತದೆ
ಎಂದವರು ವಿವರಿಸಿದರು.

ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಶಿವಕುಮಾರ್‌ ಗಂಗಪ್ಪ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ತಳ ಸಮುದಾಯದ ಜನರಿಗೆ ಈವರೆಗೂ ಸರ್ಕಾರಿ ಸೌಲಭ್ಯಗಳ ಬಗ್ಗೆ ಅರಿವಿನ ಕೊರತೆಯಿದೆ. ಈ ನಿಟ್ಟಿನಲ್ಲಿ ತಳಸಮುದಾಯದ ಯುವಕರು, ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಜಾಗೃತಿ ಮೂಡಿಸಬೇಕಾಗಿದೆ. ಇದಕ್ಕೆ ಪೂರಕವಾಗಿ ಸಮಾವೇಶದಲ್ಲಿ ದಲಿತ ಸಮುದಾಯದ ಅಭಿವೃದ್ಧಿ ಕುರಿತ ಚರ್ಚೆ ಮತ್ತು ಸರ್ಕಾರಗಳನ್ನು
ಎಚ್ಚರಿಸುವ ಕೆಲಸ ಆಗಲಿದೆ. ಈ ನಿಟ್ಟಿನಲ್ಲಿ ರಾಜ್ಯ 30 ಜಿಲ್ಲೆಗಳಲ್ಲೂ ನಮ್ಮ ಸಂಘಟನೆ ಸಕ್ರಿಯವಾಗಿದೆ ಎಂದವರು ಮಾಹಿತಿ ನೀಡಿದರು.

ನಗರದ ರಾಘವಕಲಾ ಮಂದಿರದಲ್ಲಿ ಫೆ. 20ರಂದು ನಡೆಯಲಿರುವ ರಾಜ್ಯಮಟ್ಟದ 2ನೇ ಸಮಾವೇಶವನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಮಾತಾ ಮಂಜಮ್ಮ ಜೋಗತಿ ಉದ್ಘಾಟಿಸುವರು. ಸಂಘಟನೆಯ ರಾಜ್ಯಾಧ್ಯಕ್ಷ ಡಾ| ಆರ್‌.ಮೋಹನ್‌ರಾಜ್‌ ಅಧ್ಯಕ್ಷತೆ ವಹಿಸುವರು. ಸಮಾವೇಶಕ್ಕೂ ಮುನ್ನ ನಗರದ ರೈಲು ನಿಲ್ದಾಣದ ಮುಂಭಾಗದಿಂದ ರಾಘವಕಲಾ ಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಸಮಾವೇಶಕ್ಕೆ ರಾಜ್ಯದಾದ್ಯಂತ ಆಹ್ವಾನಿತ ಗಣ್ಯರು, ರಾಜ್ಯ ಸಮಿತಿ, ಜಿಲ್ಲಾ ಸಮಿತಿ, ತಾಲೂಕು ಸಮಿತಿಗಳ ಪದಾಧಿ ಕಾರಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಸೋಮಪ್ಪ ಛಲವಾದಿ, ಜಿಲ್ಲಾ ಸಂಚಾಲಕ ಬೈಲೂರು
ಮಲ್ಲಿಕಾರ್ಜುನ, ಎಸ್‌.ಎಂ. ಶ್ರೀನಿವಾಸ್‌, ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಸುನಿತಾ ಇತರರಿದ್ದರು.

ಓದಿ : ಸರ್ಕಾರಿ  ಶಾಲೆಗಳಲ್ಲಿ ಮೂಲಸೌಕರ್ಯ: ಸಮಗ್ರ ವರದಿ ಕೇಳಿದ ಹೈಕೋರ್ಟ್‌

 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.