ಸೂಗನಗೌಡಗೆ ಶೌರ್ಯ, ಕೃಷ್ಣೋಜಿಗೆ ವಿಶಿಷ್ಟ ಸೇವಾ ಪ್ರಶಸ್ತಿ

 ಅತ್ಯುತ್ತಮ ಕರ್ತವ್ಯಕ್ಕೆ ಅರಸಿ ಬಂದ ಪ್ರಶಸ್ತಿ

Team Udayavani, Jan 26, 2021, 4:14 PM IST

26-17-1

ಬಳ್ಳಾರಿ: ನಗರದ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿಶಾಮಕ ವಾಹನ ಚಾಲ ಸೂಗನಗೌಡರಿಗೆ ರಾಷ್ಟ್ರಪತಿಗಳ ಶೌರ್ಯ ಪ್ರಶಸ್ತಿ ಲಭಿಸಿದೆ.

ಕಳೆದ 2018 ಆಗಸ್ಟ್‌ 29 ರಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಬಳಿಯ ಕೃಷ್ಣಾ ನದಿಯಲ್ಲಿ 5 ಲಕ್ಷ ಕ್ಯೂಸೆಕ್‌ ನೀರು ಬಿಟ್ಟಾಗ ಉಂಟಾದ ಪ್ರವಾಹದಲ್ಲಿ 6 ಜನ ಕುರಿಗಾಹಿಗಳೊಂದಿಗೆ 165 ಕುರಿಗಳನ್ನು ರಕ್ಷಣೆ ಮಾಡುವ ಮೂಲಕ ಸೂಗನಗೌಡ ನಾಡಿನ ಗಮನಸಳೆದಿದ್ದರು.

ಸೇವೆಗೆ ಸೇರಿದ ನಾಲ್ಕೂವರೆ ವರ್ಷಗಳಲ್ಲಿ ಮೇಲಧಿಕಾರಿಗಳು ಸೂಚಿಸಿದ ಜವಾಬ್ದಾರಿಗಳನ್ನು ಹಾಗೂ ನನ್ನ ಕರ್ತವ್ಯವನ್ನು ಸಮರ್ಪಕವಾಗಿ ಮತ್ತು ಶ್ರದ್ಧೆಯಿಂದ ನಿರ್ವಹಿಸಿರುವುದು 72ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ 2021 ನೇ ಸಾಲಿನ ರಾಷ್ಟ್ರಪತಿಯವರ ಶೌರ್ಯ ಪ್ರಶಸ್ತಿ ಪದಕ ಘೋಷಣೆಗೆ ಕಾರಣವಾಗಿದೆ.
ಪ್ರಶಸ್ತಿ ಸಂದಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದ ಅಗ್ನಿಶಾಮಕ ಚಾಲಕ ಸೂಗನಗೌಡ, ನನ್ನ ಕರ್ತವ್ಯವನ್ನು ಮತ್ತಷ್ಟು ಶ್ರದ್ಧೆಯಿಂದ ಹಾಗೂ
ಉತ್ಸಾಹದಿಂದ ಮಾಡಲು ನೆರವಾಗಿದೆ ಎಂದರು.

ಭಾರತ ಅತ್ಯುನ್ನತ ಪ್ರಶಸ್ತಿ ದೊರೆತಿರುವುದು ತುಂಬಾ ಸಂತೋಷದ ಸಂಗತಿ. ಕರ್ತವ್ಯದ ಸಮಯದಲ್ಲಿ ಸದಾ ನೆರವು ನೀಡಿದ ಎಲ್ಲ ಮೇಲಧಿ ಕಾರಿಗಳಿಗೆ, ಸಿಬ್ಬಂದಿ ವರ್ಗಕ್ಕೆ ಅಭಾರಿ ಎಂದು ತಿಳಿಸಿದರು.
2019ರ ಮಾ.19ರಂದು ಧಾರವಾಡ ನಗರದಲ್ಲಿ ಬಹುಮಹಡಿ ಕಟ್ಟಡ ಕುಸಿತದ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಶ್ರೇಯಸ್ಸು ಇವರದ್ದು. ಸೂಗನಗೌಡ ಅವರು 2019 ಆ. 11ರಂದು ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿ ತುಂಗಭದ್ರ ನದಿ ಪ್ರವಾಹದಲ್ಲಿ ಸಿಲುಕಿದ ಜನರ ಪ್ರಾಣರಕ್ಷಣೆ ಮಾಡಲು ತಮ್ಮ ಜೀವದ ಹಂಗುತೊರೆದು ರಕ್ಷಣೆ ಮಾಡುವಾಗ ರಬ್ಬರ್‌ ಬೋಟ್‌ ಮುಳಗಿ
ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿ ಸುಮಾರು 2ಕಿಮೀ ದೂರದಲ್ಲಿ ನೀರಿನ ಪ್ರವಾಹದಿಂದ ಮೇಲೆ
ಎದ್ದುದಡ ಸೇರಿದ್ದನ್ನು ಸ್ಮರಿಸಬಹುದು.

ಅಗ್ನಿಶಾಮಕ ಚಾಲಕ ಸೂಗನಗೌಡ ಅವರ ಈ ಒಂದು ಉತ್ತಮ ಕಾರ್ಯಕ್ಕಾಗಿ ರಾಷ್ಟ್ರಪತಿಗಳು 2021ನೇ ಸಾಲಿನ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶೌರ್ಯ ಪ್ರಶಸ್ತಿ ಪದಕವನ್ನು ಘೊಷಿಸಿದ್ದಾರೆ.

ಎಂದು ಬಳ್ಳಾರಿ ಪ್ರಾದೇಶಿಕ ಅಗ್ನಿಶಾಮಕ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಚಾಲಕ ಸೂಗನಗೌಡ ಅವರು ರಾಯಚೂರು ತಾಲೂಕಿನ ನಾಗಲಾಪುರ ಗ್ರಾಮದವರಾಗಿದ್ದು, ಇವರು 2016 ಮೇ 18ರಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಅಗ್ನಿಶಾಮಕ ಚಾಲಕರಾಗಿ ನೇಮಕಗೊಂಡು ಬಳ್ಳಾರಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕೊಪ್ಪಳದ ಅಗ್ನಿಶಾಮಕ ಠಾಣಾಧಿ ಕಾರಿ ಜಿ. ಕೃಷ್ಣೋಜಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ: ಕೊಪ್ಪಳದ ಅಗ್ನಿಶಾಮಕ ಠಾಣಾ ಧಿಕಾರಿಗಳಾಗಿ
ಸೇವೆ ಸಲ್ಲಿಸುತ್ತಿರುವ ಜಿ. ಕೃಷ್ಣೋಜಿ ಅವರು ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ
ಪಾತ್ರರಾಗಿದ್ದಾರೆ.

ಕೃಷ್ಣೋಜಿ ಅವರು ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದವರಾಗಿದ್ದು ಇವರ ಸೇವಾ ಅವ ಧಿಯಲ್ಲಿ 17 ಬಾರಿ ಉತ್ತಮ ಕಾರ್ಯಕ್ಕಾಗಿ ನಗದು ಬಹುಮಾನ ಇಲಾಖೆಯಿಂದ ಪಡೆದಿರುತ್ತಾರೆ. ಬಳ್ಳಾರಿ ವಲಯದ ಪ್ರಾದೇಶಿಕ ಅಗ್ನಿಶಾಮಕ ಅಧಿ ಕಾರಿ ಎಸ್‌. ರವಿಪ್ರಸಾದ್‌ ಅವರು ದೇಶದ ಪರಮೋಚ್ಚ ಪ್ರಶಸ್ತಿ ದೊರೆತಿದೆ. ಇವರ ಈ ಕಾರ್ಯ, ಸಾಹಸ ಇತರರಿಗೆ ಮಾದರಿ. ಈ ಸಾಲಿನಲ್ಲಿ ಅಗ್ನಿ ಶಾಮಕ ಮತ್ತು ತುರ್ತು ಸೇವೆ ಇಲಾಖೆ ರಾಜ್ಯಾದ್ಯಂತ 7 ಜನರಿಗೆ ರಾಷ್ಟ್ರಪತಿಗಳ ಪ್ರಶಸ್ತಿ ದೊರೆತಿದೆ.

ನಮ್ಮ ವಲಯದ ಇಬ್ಬರಿಗೆ ಶೌರ್ಯ ಪ್ರಶಸ್ತಿ ನೀಡಿರುವುದು ತುಂಬಾ ಖುಷಿ ಮತ್ತು ಹೆಮ್ಮೆಯ ಸಂಗತಿ ಎಂದರು.

ಓದಿ :  ಧಾರವಾಡ ಅಪಘಾತದಲ್ಲಿ ಮೃತಪಟ್ಟ ವೇದಾ ಅಂತ್ಯಕ್ರಿಯೆ

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.