ದೂರದ ಊರುಗಳಿಗಿಲ್ಲ ಬಸ್‌ ಭಾಗ್ಯ


Team Udayavani, Apr 9, 2021, 6:43 PM IST

9-12

ಹೊಸಪೇಟೆ: ಸಾರಿಗೆ ನೌಕರರ ಮುಷ್ಕರ ಗುರುವಾರ ಕೂಡ ನಡೆದಿದ್ದು, ಬಸ್‌ ನಿಲ್ದಾಣದಿಂದಲೇ ಖಾಸಗಿ ಬಸ್‌ಗಳು ಕೂಡ ಈ ದಿನವೂ ಕಾರ್ಯಾಚರಿಸಿದವು. ನೌಕರರ ಮುಷ್ಕರದಿಂದ ದೂರದ ಊರುಗಳಿಗೆ ಬಸ್‌ಗಳನ್ನು ಓಡಿಸಲು ಆಗದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.

ನಗರದಲ್ಲಿ ಬಸ್‌ ಮುಷ್ಕರದ ಹಿನ್ನೆಲೆಯಲ್ಲಿ ದಾವಣಗೆರೆ, ಹುಬ್ಬಳ್ಳಿ ಕಡೆಗೆ ತೆರಳುವವರು ರೈಲು ಬಳಸಿ ಪ್ರಯಾಣಿಸುವ ತೆರಳುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬಹುತೇಕ ಪ್ರಯಾಣಿಕರು ರೈಲ್ವೆ ನಿಲ್ದಾಣದತ್ತ ದೌಡಾಯಿಸುತ್ತಿರುವುದು ಕಂಡು ಬಂದಿತು. 42 ಬಸ್‌ ಕಾರ್ಯಾಚರಣೆ: ಇಲ್ಲಿನ ಸಾರಿಗೆ ವಿಭಾಗದಿಂದ 42 ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಿದ್ದು, ತಲಾ ಒಂದು ಬಸ್‌ 4 ಟ್ರಿಪ್‌ಗ್ಳನ್ನು ಮಾಡಿದ್ದು, ಬಳ್ಳಾರಿ, ಕೊಪ್ಪಳ, ಗಂಗಾವತಿ, ಹುಲಿಗಿ, ಸಂಡೂರು, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು ಭಾಗಗಳಿಗೆ ಬಸ್‌ಗಳು ಸಂಚರಿಸಿವೆ.

ನಗರದ ಬಸ್‌ ನಿಲ್ದಾಣದಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು. ಏತನ್ಮಧ್ಯೆ, ಖಾಸಗಿ ಬಸ್‌ಗಳು ಕೂಡ 73 ಟ್ರಿಪ್‌ ಮಾಡಿವೆ. ಜತೆಗೆ ಟ್ರಾಕ್ಸ್‌, ಟಂಟಂಗಳು 328 ಟ್ರಿಪ್ಸ್‌ ಓಡಿವೆ. ಪ್ರಯಾಣಿಕರ ಹಿತಕ್ಕಾಗಿ ಖಾಸಗಿ ಬಸ್‌ಗಳನ್ನು ಬಸ್‌ ನಿಲ್ದಾಣದಿಂದಲೇ ಓಡಿಸಲಾಗುತ್ತಿದೆ.

ನಿವೃತ್ತ ನೌಕರರ ನಿಯೋಜನೆ: ಸಾರಿಗೆ ನೌಕರರು ಆರನೇ ವೇತನ ಆಯೋಗದ ಬೇಡಿಕೆ ಈಡೇರಿಕೆಗೆ ಮುಷ್ಕರನಿರತರಾಗಿರುವ ಹಿನ್ನೆಲೆಯಲ್ಲಿ ನಿವೃತ್ತ ನೌಕರರನ್ನು ನಿಯೋಜಿಸಿಕೊಳ್ಳಲು ಸಾರಿಗೆ ಇಲಾಖೆ ಮುಂದಾಗಿದೆ. ಹೀಗಾಗಿ ಮುಷ್ಕರ ಇನ್ನಷ್ಟು ದಿನ ನಡೆಯುವ ಮುನ್ಸೂಚನೆ ದೊರೆತಂತಾಗಿದೆ. ಸಾರಿಗೆ ಇಲಾಖೆ ಮುಷ್ಕರದ ಹಿನ್ನೆಲೆಯಲ್ಲಿ ಕಚೇರಿ ಸಿಬ್ಬಂದಿಯನ್ನು ಕೂಡ ಡ್ರೆçವರ್‌, ಕಂಡಕ್ಟರ್‌ಗಳನ್ನಾಗಿ ನಿಯೋಜಿಸಿ ಕೆಲಸ ಮಾಡಲಾಗುತ್ತಿದೆ. ವಿಭಾಗದಲ್ಲಿ ಈ ದಿನ 42 ಬಸ್‌ಗಳು ಸಂಚರಿಸಿದ್ದು, ಏ.9ರಂದು ಇನ್ನಷ್ಟು ಬಸ್‌ಗಳು ಸಂಚರಿಸಲು ಯೋಜನೆ ರೂಪಿಸಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ದೂರದ ಊರುಗಳಿಗೂ ಬಸ್‌ ಓಡಿಸಲು ಕ್ರಮವಹಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾ ಧಿಕಾರಿ ಜಿ. ಶೀನಯ್ಯ ತಿಳಿಸಿದರು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.