ಟೊಮೆಟೊ ಬೆಲೆ ಕುಸಿತ: ಕಂಗಾಲಾದ ರೈತ
Team Udayavani, Apr 14, 2021, 5:50 PM IST
ರವಿಕುಮಾರ್.ಎಂ.
ಕೊಟ್ಟೂರು: ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು, ಬೆಲೆ ಕುಸಿತದಿಂದ ಇದೀಗ ಹಾಕಿದ್ದ ಬಂಡವಾಳವೂ ಕೈಗೆಟುಕುತ್ತಿಲ್ಲ. ಮತ್ತೂಂದೆಡೆ ಬಿಸಿಲಿನ ಪ್ರಮಾಣ ಅಧಿಕವಾಗಿದ್ದರಿಂದ ಟೊಮೆಟೊ ಬೆಳೆಗೆ ಕೀಟಬಾಧೆ ಹೆಚ್ಚಿದೆ. ಇದರಿಂದ ಸಾಕಷ್ಟು ಟೊಮೆಟೊ ಬೆಳೆ ನಾಶವಾಗಿ ನಿರೀಕ್ಷಿತ ಪ್ರಮಾಣದ ಫಸಲು ಬಾರದ ಕಾರಣ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.
ಕಳೆದ ವರ್ಷ ಮಾರ್ಚ್ ಮತ್ತು ಮೇ ತಿಂಗಳಲ್ಲಿ ಬೆಲೆ ಹೆಚ್ಚಿತ್ತು. ಆದರೆ ಈ ವರ್ಷಪೂರ್ತಿ ದರ ಕುಸಿತವಾಗಿದೆ. ಬೆಲೆ ಕುಸಿತದಿಂದಾಗಿ ಕೊಯ್ಯಲು ಮತ್ತು ಸಾಗಣೆಗೆ ಮಾಡಿದ ವೆಚ್ಚ ಕೂಡ ರೈತರಿಗೆ ಸಿಗುತ್ತಿಲ್ಲ. ಹೀಗಾಗಿ ಹಲವು ರೈತರು ಟೊಮೆಟೊ ಕೊಯ್ಯದೆ ಗಿಡದಲ್ಲೇ ಬಿಟ್ಟಿದ್ದಾರೆ. ಮತ್ತೆ ಕೆಲವರು ನಾಶಪಡಿಸುತ್ತಿದ್ದಾರೆ.
ಟೊಮೆಟೊ ಬೆಳೆಯಲು ರೈತರು ನಾನಾ ಬಗೆಯ ಸರ್ಕಸ್ ಮಾಡಬೇಕು. ಹೀಗಾಗಿ ಖರ್ಚು ಹೆಚ್ಚು. ಟೊಮೆಟೊ ಕೀಳುವ ಕಾರ್ಮಿಕರಿಗೆ ದಿನದ ಕೂಲಿಯೂ ಹೆಚ್ಚು. ಇದೀಗ ಟೊಮೆಟೊ ಧಾರಣೆ ಹಾಕಿದ್ದ ಬಂಡವಾಳಕ್ಕೂ ಸಾಕಾಗುತ್ತಿಲ್ಲ ಎನ್ನುತ್ತಿದ್ದಾರೆ ರೈತರು. ಈ ರೀತಿಯಾದರೆ ನಾವು ಬದುಕುವುದಾದರೂ ಹೇಗೆ. ಬೇರೆ ಜಿಲ್ಲೆಗೆ ಹೋಲಿಸಿದರೆ ಕೊಟ್ಟೂರು ಮತ್ತು ಹರಪನಹಳ್ಳಿ ತಾಲೂಕಲ್ಲಿ 8,800 ಹೆಕ್ಟೇರ್ ಟೊಮೆಟೊ ಬೆಳೆಯಲಾಗುತ್ತಿದೆ.
ಸಾಮಾನ್ಯವಾಗಿ ಬೇಸಿಗೆ ಆರಂಭ ಮುನ್ನವೇ ಮಾರ್ಚ್ ತಿಂಗಳಿಂದ ಜೂನ್ ಅಂತ್ಯದವರೆಗೆ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆ ಬರುತ್ತದೆ. ಆದರೆ ಈ ವರ್ಷವೂ ಬೆಲೆ ಇಲ್ಲದೇ ಕಷ್ಟವಾಗಿದೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್