ಬಳ್ಳಾರಿಯಲ್ಲಿ ಮುಂದುವರಿದ ಕಾರ್ಯಾಚರಣೆ


Team Udayavani, Apr 19, 2021, 6:42 PM IST

19-17

ಬಳ್ಳಾರಿ: ಕೋವಿಡ್‌ ಸೋಂಕು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದಿದ್ದವರಿಗೆ ದಂಡ ವಿ ಧಿಸುವ ಕಾರ್ಯಾಚರಣೆಯನ್ನು ಅತ್ಯಂತ ಪರಿಣಾಮಕಾರಿ ಬಳ್ಳಾರಿಯಲ್ಲಿ ಭಾನುವಾರವೂ ಮುಂದುವರಿಯಿತು. ಡಿಸಿಯಂತೆಯೇ ಸ್ವತಃಫೀಲ್ಡಿಗಿಳಿದ ಎಸ್ಪಿ ಸೈದುಲು ಅಡಾವತ್‌, ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್, ಪೊಲೀಸ್‌ ಇಲಾಖೆ ಅ ಧಿಕಾರಿಗಳು ಮಾಸ್ಕ್ ಧರಿಸದ ಜನರಿಗೆ ಸ್ಥಳದಲ್ಲೇ ದಂಡ ವಿಧಿ ಸಿ ಬಿಸಿ ಮುಟ್ಟಿಸುವ ಮೂಲಕ ಕೋವಿಡ್‌ ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸಿದರು.

ನಗರದ ಬ್ರೂಸ್‌ಪೇಟೆ ಪೊಲೀಸ್‌ ಠಾಣೆ ಮಾರ್ಗ, ತೇರು ಬೀದಿ, ಜೈನ್‌ ಮಾರುಕಟ್ಟೆ, ಮೋತಿ ಸರ್ಕಲ್‌ ಸೇರಿದಂತೆ ವಿವಿಧೆಡೆ ಕಾಲ್ನಡಿಗೆಯಲ್ಲೇ ಸಂಚರಿಸಿದ ಎಸ್ಪಿ ಸೈದುಲು ಅಡಾವತ್‌, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಮಾಸ್ಕ್ ಧರಿಸದ ಜನರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸ್ಥಳದಲ್ಲಿಯೇ ಅನೇಕರಿಗೆ ದಂಡ ವಿಧಿ ಸಿದರು.

ಕೋವಿಡ್‌ ನಿಯಮಾವಳಿಗಳ ಉಲ್ಲಂಘನೆ ಆಧಾರದ ಮೇರೆಗೆ ಕೆಲ ಅಂಗಡಿಗಳ ಮಾಲೀಕರಿಗೆ ಶೋಕಾಸ್‌ ನೋಟಿಸ್‌ ಕೂಡ ಇದೇ ಸಂದರ್ಭದಲ್ಲಿ ಜಾರಿ ಮಾಡಿದರು. ಕೆಲ ನಿರ್ಗತಿಕರಿಗೆ ಇದೇ ಸಂದರ್ಭದಲ್ಲಿ ಎಸ್ಪಿ ಸೈದುಲು ಅಡಾವತ್‌ ಅವರು ಮಾಸ್ಕ್ಗಳನ್ನು ನೀಡಿ, ಇನ್ಮುಂದೆ ಕಡ್ಡಾಯವಾಗಿ ಧರಿಸುವಂತೆ ಸೂಚಿಸಿದರು. ಎಸ್ಪಿ ಸೈದುಲು ಅಡಾವತ್‌ ಅವರು ಅಂಗಡಿಗಳ ಮಾಲೀಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ ದೃಷ್ಟಿಯಿಂದ ಮಾಕಿಂಗ್‌ ಮಾಡಬೇಕು. ಮಾಸ್ಕ್ ಧರಿಸದವರನ್ನು ಯಾವುದೇ ಕಾರಣಕ್ಕೂ ಅಂಗಡಿಗಳ ಒಳಗಡೆ ಬಿಟ್ಟುಕೊಳ್ಳಬಾರದು. ಅಂಗಡಿಗಳಲ್ಲಿ ಥರ್ಮಲ್‌ ಸ್ಕಾನರ್‌, ಸ್ಯಾನಿಟೈಸರ್‌ ಕಡ್ಡಾಯವಾಗಿರಬೇಕು ಮತ್ತು ಗ್ರಾಹಕರಿಗೆ ತಪಾಸಣೆ ಮಾಡಿಯೇ ಒಳಬಿಡಬೇಕು. ಸಾಮಾಜಿಕ ಅಂತರ ಪಾಲಿಸಬೇಕು.

ಇದು ಎಲ್ಲರ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ. ಒಂದು ವೇಳೆ ಉಲ್ಲಂಘಿಸಿದಲ್ಲಿ ನಿಯಮಾನುಸಾರ ದಂಡ ವಿಧಿ ಸಲಾಗುವುದು ಮತ್ತು ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ಕೋವಿಡ್‌ ನಿಯಮ ಉಲ್ಲಂಘಿಸುವ ಅಂಗಡಿಗಳಿಗೆ ನಾನ್‌ ಎಸಿ ಅಂಗಡಿಗಳಿಗೆ 5 ಸಾವಿರ ದಂಡ, ಎಸಿ ಸೌಲಭ್ಯವಿರುವ ಅಂಗಡಿಗಳಿಗೆ 10 ಸಾವಿರ ಮತ್ತು ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದರು.

ಮಲಬಾರ್‌ ಗೋಲ್ಡ್‌ ಮಳಿಗೆಗೆ ಭೇಟಿ ನೀಡಿ ಪರಿಶೀಲಿಸಿದ ಎಸ್ಪಿ ಸೈದುಲು ಅಡಾವತ್‌ ಹಾಗೂ ಆಯುಕ್ತೆ ಪ್ರೀತಿ ಗೆಹೊÉàಟ್‌ ಅವರು ಕೋವಿಡ್‌ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದಿರುವುದಕ್ಕೆ ಮಳಿಗೆಯಲ್ಲಿನ ವ್ಯವಸ್ಥಾಪಕರಿಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಅಲ್ಲಿಗೆ ಬಂದಿದ್ದ ಗ್ರಾಹಕರಿಗೂ ಕೋವಿಡ್‌ ಬಿಸಿ ಮುಟ್ಟಿಸಿದರು.

ದಂಡ ವಿ ಧಿಸಲು ಪೊಲೀಸ್‌ ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿಗೆ ಸೂಚಿಸಿದರು. ನಂತರ ಅದೇ ರಸ್ತೆಯಲ್ಲಿ ಯಾವುದೇ ರೀತಿಯ ಅನುಮತಿ ಪಡೆದುಕೊಳ್ಳದೇ ನಡೆಸುತ್ತಿದ್ದ ಸ್ನೂಕರ್‌ ಶಾಪ್‌ಗೆ ಭೇಟಿ ನೀಡಿ ಪರಿಶೀಲಿಸಿದ ಎಸ್ಪಿ ಮತ್ತು ಪಾಲಿಕೆ ಆಯುಕ್ತರು ಅನುಮತಿ ಪಡೆಯದಿರುವುದನ್ನು ಖಚಿತಪಡಿಸಿಕೊಂಡು ಅಂಗಡಿಯನ್ನು ಸೀಜ್‌ ಮಾಡಿ ಕ್ಲೋಸ್‌ ಮಾಡಿದರು.

ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸಿದೇ ಓಡಾಡುತ್ತಿದ್ದಲ್ಲಿ 250 ರೂ. ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ 100 ರೂ. ದಂಡ ವಿಧಿ ಸಲಾಗುತ್ತಿದೆ. ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದಿರುವುದಕ್ಕೆ ದಂಡ ವಿ ಧಿಸುವ ಕಾರ್ಯಾಚರಣೆ ಶುರು ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ರಮೇಶ, ಪೊಲೀಸ್‌ ಅಧಿ  ಕಾರಿಗಳಾದ ನಾಗರಾಜ, ಹಾಲೇಶ ಹಾಗೂ ಪೊಲೀಸ್‌ ಸಿಬ್ಬಂದಿ, ಮಹಾನಗರ ಪಾಲಿಕೆ ಅ ಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.