ಜೀವನದಲ್ಲಿ ನೋವಿದ್ದರೂ ನಗಿಸುತ್ತಿದ್ದ ಚಾರ್ಲಿ ಚಾಪ್ಲಿನ್
Team Udayavani, Apr 20, 2021, 5:46 PM IST
ಬಳ್ಳಾರಿ: ನಟ ಚಾರ್ಲಿ ಚಾಪ್ಲಿನ್ ತನ್ನ ನಿಜ ಜೀವನದಲ್ಲಿ ಎಷ್ಟೇ ನೋವು ಸಂಕಟವಿದ್ದರೂ ನಟನೆಯಲ್ಲಿ ನಗೆಯನ್ನು ಚಿಮ್ಮಿಸುವ ಕಲೆಯನ್ನು ಕರಗತ ಮಾಡಿಕೊಂಡಿದ್ದರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ಕೆ. ರಂಗಣ್ಣನವರ ಹೇಳಿದರು.
ನಗರದ ಕನ್ನಡ ಭವನದಲ್ಲಿ ಬಳ್ಳಾರಿ, ವಿಜಯನಗರ ಜಿಲ್ಲೆಗಳ ಚಿತ್ರಕಲಾ ಶಿಕ್ಷಕರು ಚಿತ್ರಿಸಿದ್ದ ಚಿತ್ರಗಳ ಚಿತ್ರಕಲಾ ಪ್ರದರ್ಶನವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ವ್ಯಕ್ತಿ ಸದಾ ಕ್ರಿಯಾಶೀಲನಾಗಿದ್ದರೆ ಏನೆಲ್ಲಾ ಸೃಜಿಸಬಲ್ಲ ಎಂಬುದಕ್ಕೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲಾ ಚಿತ್ರಕಲಾ ಶಿಕ್ಷಕರು ಚಿತ್ರಿಸಿದ ಈ ವಿಭಿನ್ನ ರೀತಿಯ ಚಿತ್ರಗಳೇ ತಾಜಾ ಉದಾಹರಣೆಯಾಗಿದೆ ಎಂದರು.
ಕಸಾಪ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ ಮಾತನಾಡಿ, ಅರವತ್ನಾಲ್ಕು ಕಲೆಗಳಲ್ಲಿ ಅತಿ ಪ್ರಮುಖವಾದುವು ಸಾಹಿತ್ಯ, ಸಂಗೀತ, ಚಿತ್ರಕಲೆ, ನೃತ್ಯ, ಭಾರತೀಯ ಸಂಪ್ರದಾಯಗಳಲ್ಲಿ ಲಲಿತ ಕಲೆಗಳು ಪ್ರಮುಖವಾಗಿವೆ. ಕಲೆಯು ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ಅದರೆ ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ ಎಂದ ಅವರು, ಬಳ್ಳಾರಿ ಜಿಲ್ಲೆ ಸಾಂಸ್ಕೃತಿಕ ಕಲೆಗಳ ನೆಲೆವೀಡು. ಕಲೆ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯ ಪರಿಷತ್ ಸದಾ ಕಾಲ ಬೆಂಬಲ ನೀಡುತ್ತದೆ ಎಂದರು.
ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯ ಯು.ಅಶೋಕ್ ಮಾತನಾಡಿ, ಕಲಾವಿದರು ಹಳೆಯ ಸಂಪ್ರದಾಯಗಳಿಗೆ ಜೋತು ಬೀಳದೆ ಕಲೆಯಲ್ಲಿ ಹೊಸತನ ಹೊಸ ಆವಿಷ್ಕಾರಗಳನ್ನು ಮಾಡಬೇಕು .ಹೊಸ ಹೊಸ ರೀತಿಯ ಮಾಧ್ಯಮಗಳನ್ನು ಆಯ್ಕೆ ಮಾಡಿಕೊಂಡಾಗ ಇಡೀ ವಿಶ್ವವೇ ನಿಮ್ಮ ಕಲಾ ಪ್ರೌಢಿಮೆಯನ್ನು ಗಮನಿಸಿ ಗೌರವ ನೀಡುತ್ತದೆ ಎಂದರು. ಭವಾನಿ ಲಲಿತಕಲಾ ಮಂದಿರದ ಸಂಸ್ಥಾಪಕ ಆರ್.ಎಲ್.ಜಾಧವ್ ಮಾತನಾಡಿ, ಚಿತ್ರಕಲಾ ಶಿಕ್ಷಕರಲ್ಲಿ ನವಚೈತನ್ಯ ಮೂಡಿಸುವಂತಹ ಇಂಥ ಪ್ರದರ್ಶನಗಳು ಪ್ರತಿವರ್ಷ ನಡೆಯುವಂತಾಗಬೇಕು. ಬಳ್ಳಾರಿ ಜನತೆಯೂ ಕೂಡ ಇಂಥ ಪ್ರದರ್ಶನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವೀಕ್ಷಿಸಿ ನೋಡುವಂತಾಗಬೇಕು ಎಂದು ಆಶಿಸಿದರು.
ಶಿಲ್ಪ ಮತ್ತು ಚಿತ್ರಕಲಾ ಸಂಘದ ಚಿಕ್ಕಬಳ್ಳಾಪುರದ ಅಧ್ಯಕ್ಷ ಎನ್.ಎಂ. ಶಿವರಾಜ್ ಮಾತನಾಡಿ, ಕಲಾಕೃತಿಗಳಲ್ಲಿ ಟೂಡಿ ತ್ರಿಡಿ ಫೂರ್ ಕೆ ಹಂತಗಳನ್ನು ಬಣ್ಣಗಳಲ್ಲಿ ಯಾವ ರೀತಿಯಲ್ಲಿ ಮಾಡಬಹುದು ಎಂಬುದನ್ನು ವಿವರಿಸಿದರಲ್ಲದೆ ಪ್ರತಿವಾರವೂ ಬಳ್ಳಾರಿಯಲ್ಲಿ ಕಲಾವಿದರಿಗೆ ಉಚಿತವಾಗಿ ಹೊಸ ಹೊಸ ರೀತಿಯ ಕಲಾ ಪ್ರಕಾರಗಳ ಪ್ರಾತ್ಯಕ್ಷಿಕೆ ನೀಡುವದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳ್ಳಾರಿ ವಿಜಯನಗರ ಜಿಲ್ಲೆಗಳ ಅಧ್ಯಕ್ಷ ಯು.ರಮೇಶ್ ವಹಿಸಿದದ್ದರು. ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ.ಸಿದ್ದಲಿಂಗಪ್ಪ ನಿರೂಪಿಸಿದರು. ಒಟ್ಟು 56 ಕಲಾಕೃತಿಗಳು ಪ್ರದರ್ಶಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ