ಪಾಲಿಕೆ ಅಖಾಡದಲ್ಲಿ 186 ಹುರಿಯಾಳುಗಳು


Team Udayavani, Apr 21, 2021, 6:18 PM IST

21-19

ಬಳ್ಳಾರಿ: ದಿನೇದಿನೆ ರಂಗೇರುತ್ತಿರುವ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 39 ವಾರ್ಡ್‌ಗಳಿಗೆ ಅಂತಿಮವಾಗಿ 65 ಪಕ್ಷೇತರರು ಸೇರಿ ಒಟ್ಟು 186 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. 19 ನಾಮಪತ್ರ ತಿರಸ್ಕೃತ, 39 ಜನರು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದು, ಬಹುತೇಕ ವಾರ್ಡ್‌ಗಳಲ್ಲಿ ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಫೈಟ್‌ ನಡೆಯಲಿದ್ದು, ಸ್ವತಂತ್ರ, ಬಂಡಾಯ ಅಭ್ಯರ್ಥಿಗಳಿರುವ ವಾಡ್‌ ಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡ್‌ಗಳಿಗೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌, ಎಎಪಿ, ಎನ್‌ಸಿಪಿ ಸೇರಿ ವಿವಿಧ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಗಳು ಸೇರಿ ಒಟ್ಟು 244 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ವಿವಿಧ ಕಾರಣಗಳಿಂದ 19 ಜನರ ನಾಮಪತ್ರಗಳು ತಿರಸ್ಕೃತಗೊಂಡಿದ್ದವು. ಕಣದಲ್ಲಿ 225 ಜನರು ಉಳಿದಿದ್ದರಾದರೂ, ಕಾಂಗ್ರೆಸ್‌ -ಬಿಜೆಪಿ ಪಕ್ಷಗಳಿಂದ ಟಿಕೇಟ್‌ ಸಿಗದೇ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಹಲವರು ಸೇರಿ ಒಟ್ಟು 39 ಅಭ್ಯರ್ಥಿಗಳು ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದು, ಅಂತಿಮವಾಗಿ 186 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು, ಚುನಾವಣಾ ಕಣ ನಿಧಾನವಾಗಿ ರಂಗೇರುತ್ತಿದೆ. ಚುನಾವಣೆಯಲ್ಲಿ 39 ವಾರ್ಡ್‌ಗಳಿಗೂ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. 5 ವಾಡ್‌ ìಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಜನಹಿತ ಪಕ್ಷ 5, ಎನ್‌ಸಿಪಿ 9, ಕೆಜೆಪಿ 2, ಶಿವಸೇನೆ 2, ಕರ್ನಾಟಕ ರಾಷ್ಟ್ರ ಸಮಿತಿ 2, ಆಮ್‌ ಆದ್ಮಿ ಪಾರ್ಟಿ 6, ಸಮಾಜ ವಾದಿ ಪಕ್ಷ 4, ಕೆಆರ್‌ಎಸ್‌ 4, ಎಐಎಂಐಎಂ 4 ವಾರ್ಡ್‌ಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. 39 ವಾಡ್‌ ìಗಳ ಪೈಕಿ ಬಹುತೇಕ ವಾರ್ಡ್‌ಗಳಲ್ಲಿ ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ಕೆಲವೊಂದು ವಾರ್ಡ್‌ಗಳಲ್ಲಿ ಟಿಕೆಟ್‌ ವಂಚಿತ ಬಂಡಾಯ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳಿಗೆ ಮುಳುವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಹೆಚ್ಚಿದ ಬಂಡಾಯ: ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕಿಂತ ಕಾಂಗ್ರೆಸ್‌ ಪಕ್ಷದಲ್ಲೇ ಬಂಡಾಯದ ಬಿಸಿ ಹೆಚ್ಚಾಗಿ ಕೇಳಿಬರುತ್ತಿದೆ. 3ನೇ ವಾರ್ಡ್‌ನ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ಎಂ.ಪ್ರಭಂಜನ್‌ ಕುಮಾರ್‌, ಅಲಿವೇಲು ಸುರೇಶ್‌, 9ನೇ ವಾರ್ಡ್‌ನ ಕಣೇಕಲ್‌ ಮಾಬುಸಾಬ್‌, 35ನೇ ವಾರ್ಡ್‌ನ ಮಿಂಚು ಶ್ರೀನಿವಾಸ್‌, 17ನೇ ವಾರ್ಡ್‌ನ ಹೊನ್ನಪ್ಪ, 21ನೇ ವಾಡ್‌ ನ ದಿವಾಕರಗೌಡ, 12ನೇ ವಾರ್ಡ್‌ನ ಜಿಲ್ಲೆ ಹನುಮಂತಪ್ಪ ಅವರು ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಅದೇ ರೀತಿ ಕೆಲವೊಂದು ವಾರ್ಡ್‌ಗಳಲ್ಲೂ ಬಿಜೆಪಿಯಿಂದಲೂ ಬಂಡಾಯ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಈ ವಾರ್ಡ್‌ಗಳಲ್ಲಿ ತ್ರಿಕೋಣ ಸ್ಪರ್ಧೆಗಳು ಏರ್ಪಡುವ ಸಾಧ್ಯತೆಯಿದೆ.

3, 35ನೇ ವಾರ್ಡ್‌ಗಳಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳಿಗೆ ಪಕ್ಷೇತರ ಅಭ್ಯರ್ಥಿಗಳಾದ ಎಂ. ಪ್ರಭಂಜನ್‌ ಕುಮಾರ್‌, ಮಿಂಚು ಶ್ರೀನಿವಾಸ್‌ ಅವರು ಹೆಚ್ಚು ಪೈಪೋಟಿ ನೀಡುವ ಸಾಧ್ಯತೆಯಿದ್ದು, ಅದೃಷ್ಟ ಖುಲಾಯಿಸಿ ಅಲ್ಪ ಮತಗಳ ಅಂತರದಿಂದ ಗೆದ್ದರೂ ಅಚ್ಚರಿಪಡುವಂತಿಲ್ಲ. ಇನ್ನುಳಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ಕಣಕ್ಕಿಳಿದಿರುವ ಅಭ್ಯರ್ಥಿಗಳು ತಾವು ಸಹ ಗೆಲ್ಲಲೇಬೇಕೆಂಬ ಹಂಬಲ ಮತ್ತು ತಮಗೆಷ್ಟು ಜನಬೆಂಬಲವಿದೆ. ಎಷ್ಟು ಮತಗಳು ಲಭಿಸಲಿವೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲದಿಂದ ಕಣದಲ್ಲಿ ಉಳಿದಿದ್ದಾರೆ. ಇವರ ಕುತೂಹಲವೆಷ್ಟು ಎಂಬುದನ್ನು ಮತದಾರರು ಫಲಿತಾಂಶದಲ್ಲಿ ತಿಳಿಸಲಿದ್ದಾರೆ.

ಈಗಾಗಲೇ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳು ಅವರ ಮುಖಂಡರು ನಾಯಕರು ಕಳೆದ ಹಲವು ದಿನಗಳಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇದೀಗ ಪಕ್ಷೇತರ ಅಭ್ಯರ್ಥಿಗಳಿಗೆ ಸೋಮವಾರ ಸಂಜೆ ಚಿಹ್ನೆಗಳನ್ನು ನೀಡಿದ್ದು, ಅವರೆಲ್ಲರೂ ಕೂಡಲೇ ತಮ್ಮ ಚಿಹ್ನೆಯುಳ್ಳ ಕರಪತ್ರಗಳನ್ನು ಮುದ್ರಿಸಿ ಇಂದಿನಿಂದಲೇ ಮನೆಮನೆಗೆ ತೆರಳಿ ಪ್ರಚಾರ ಕೈಗೊಳ್ಳುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.