ಕೊರೊನಾ ತಡೆಗೆ ಕಠಿಣ ಕ್ರಮ


Team Udayavani, Apr 23, 2021, 7:01 PM IST

23-10

ಹರಪನಹಳ್ಳಿ: ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಹರಪನಹಳ್ಳಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ನೈಟ್‌ ಕರ್ಫ್ಯೂ ಕ್ರಮಕೈಗೊಳ್ಳಲು ತೀರ್ಮಾನಿಸಲಾಯಿತು. ಪಟ್ಟಣದ ಸರಕಾರಿ ಪಪೂ ಕಾಲೇಜಿನ ಆವರಣದಲ್ಲಿ ತಾಲೂಕು ಆಡಳಿತ ಮತ್ತು ಪೊಲೀಸ್‌ ಇಲಾಖೆ ಏರ್ಪಡಿಸಿದ್ದ ಜಾಗೃತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ತಹಶೀಲ್ದಾರ್‌ ಎಲ್‌.ಎಂ. ನಂದೀಶ್‌ ಮಾತನಾಡಿ, ಎಲ್ಲ ಧಾರ್ಮಿಕ ಕೇಂದ್ರಗಳು ಬಂದ್‌ ಆಗಲಿವೆ. ಕಲ್ಯಾಣ ಮಂಟಪಕ್ಕೆ ಇಲಾಖೆಯ ಅನುಮತಿ ಪಡೆಯಬೇಕು. 50 ಜನರಿಗೆ ಮಾತ್ರ ಸೀಮಿತವಿರಬೇಕು.

ಗುರುವಾರ ಹಾಗೂ ಭಾನುವಾರ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು. ಈ ಆದೇಶವನ್ನು ಸಾರ್ವಜನಿಕರು ಮುಂದಿನ ಆದೇಶದವರೆಗೆ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕೋರಿದರು.

ಡಿವೈಎಸ್ಪಿ ಹಾಲಮೂರ್ತಿರಾವ್‌ ಮಾತನಾಡಿ, ಮೇ 4ರ ವರೆಗೆ ಪ್ರತಿದಿನ ಬಟ್ಟೆ ಅಂಗಡಿ, ಜ್ಯುಯಲರಿ ಶಾಪ್‌ ಗಳು ಬಂದ್‌ ಆಗಲಿವೆ. ಹೋಟೆಲ್‌ಗ‌ಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶವಿದೆ. ಬೀದಿಬದಿ ಅಂಗಡಿಗಳು ಬಂದ್‌ ಆಗಲಿವೆ. ಕೃಷಿ ಚಟುವಟಿಕೆಗಳಿಗೆ ಕಟ್ಟಡ ಕೆಲಸಗಳಿಗೆ ಅವಕಾಶವಿದೆ. ರಂಜಾನ್‌ ಹಬ್ಬ ಇರುವುದರಿಂದ ಮುಸ್ಲಿಂ ಸಮುದಾಯದವರು ರಾತ್ರಿ 9:00ರೊಳಗೆ ಪ್ರಾರ್ಥನೆ ಸಲ್ಲಿಸಿ ಮಸೀದಿಗಳನ್ನು ಬಂದ್‌ ಮಾಡಬೇಕು ಎಂದರು.

ವೃತ್ತ ನಿರೀಕ್ಷಕ ನಾಗರಾಜ್‌ ಎಂ. ಕಮ್ಮಾರ ಮಾತನಾಡಿ, ಹಬ್ಬಗಳನ್ನು ತಮ್ಮ ತಮ್ಮ ಮನೆಗಳಲ್ಲಿ ಆಚರಿಸಿ. ಕೋವಿಡ್‌ ನಿಯಂತ್ರಿಸಲು ಸಹಕಾರ ನೀಡಬೇಕು ಎಂದರು. ಪುರಸಭೆ ಮುಖ್ಯಾ ಧಿಕಾರಿ ಬಿ.ಆರ್‌. ನಾಗರಾಜ  ನಾಯ್ಕ ಮಾತನಾಡಿ, ಪುರಸಭೆಯಿಂದ ಪ್ರತಿದಿನ ನಡೆಯುವ ದಿನವಹಿ ಸಂತೆ ಹಾಗೂ ಶನಿವಾರ ನಡೆಯುವ ವಾರದ ಸಂತೆಯನ್ನು ಹಡಗಲಿ ರಸ್ತೆಯ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾಗುವುದು. ಕಿರಾಣಿ ಅಂಗಡಿಯವರು ತಮ್ಮ ಅಂಗಡಿಗಳ ಮುಂದೆ ಸಾರ್ವಜನಿಕರಿಗೆ ಗುರುತು ಮಾಡಿ ಗ್ರಾಹಕರನ್ನು ಸಾಮಾಜಿಕ ಅಂತರದಿಂದ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಬೇಕು ಎಂದರು.

ಪುರಸಭೆ ಅಧ್ಯಕ್ಷ ಮಂಜುನಾಥ್‌ ಇಜಾಂತಕರ್‌, ಸದಸ್ಯರಾದ ಕಿರಣ್‌ ಕುಮಾರ್‌, ಪಿಎಸ್‌ಐಗಳಾದ ಸಿ.ಪ್ರಕಾಶ್‌, ಪ್ರಶಾಂತ್‌ ಕುಮಾರ್‌, ಕಿರಣ್‌ಕುಮಾರ್‌, ಚಿಗಟೇರಿ ಎಎಸ್‌ಐ ಕಲಾರಿ, ವಿವಿಧ ಸಮಾಜದ ಮುಖಂಡರು, ವ್ಯಾಪಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.