ವಾರಾಂತ್ಯ ಕರ್ಫ್ಯೂ: ಎಲ್ಲವೂ ಬಂದ್‌


Team Udayavani, Apr 26, 2021, 5:47 PM IST

26-11

ಬಳ್ಳಾರಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ ಸೋಂಕು ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಿಧಿ ಸಿದ್ದ ವಾರಾಂತ್ಯದ ಕರ್ಫ್ಯೂ ಭಾನುವಾರವೂ ಮುಂದುವರೆದಿದ್ದು, ಬೆಳಗ್ಗೆ ನಿಗ ದಿತ ಅವಧಿ ಯಲ್ಲಿ ಅಗತ್ಯ ವಸ್ತುಗಳ ಮಳಿಗೆಗಳು, ಮದುವೆ, ಆಸ್ಪತ್ರೆಗೆ ತೆರಳುವವರನ್ನು ಹೊರತುಪಡಿಸಿದರೆ ಉಳಿದಂತೆ ಎಲ್ಲವೂ ಬಂದ್‌ ಆಗಿದ್ದವು. ನಗರದ ಎಪಿಎಂಸಿ ಆವರಣದಲ್ಲಿನ ತರಕಾರಿ ಸಗಟು ಮಾರುಕಟ್ಟೆ ಮಧ್ಯರಾತ್ರಿ 1 ಗಂಟೆಗೆ ಆರಂಭವಾಗಿ ಬೆಳಗ್ಗೆ 7 ಗಂಟೆಗೆ ಮುಕ್ತಾಯವಾಗಿದ್ದು, ನಂತರ ಬೆಳಗ್ಗೆ 6 ಗಂಟೆಗೆ ಆರಂಭವಾದ ತರಕಾರಿ ಚಿಲ್ಲರೆ ಮಾರುಕಟ್ಟೆ, ಅಗತ್ಯ ವಸ್ತುಗಳುಳ್ಳ ಕಿರಾಣಿ ಅಂಗಡಿ, ಫುಟ್‌ವೇರ್‌ಶಾಪ್‌, ಹಣ್ಣಿನ ಮಳಿಗೆಗಳು, ಬೀದಿಬದಿಯ ಹಣ್ಣು ಮಾರಾಟಗಾರರು 10 ಗಂಟೆವರೆಗೆ ತಮ್ಮ ವ್ಯಾಪಾರ ವಹಿವಾಟವನ್ನು ಮುಂದುವರೆಸಿದ್ದು, ನಂತರ ಬಂದ್‌ ಮಾಡಿದರು.

ಈ ಮಳಿಗೆಗಳನ್ನು ಹೊರತುಪಡಿಸಿ, ನಗರದಲ್ಲಿನ ಬಹುತೇಕ ಮಳಿಗೆಗಳು ಸ್ವಯಂಪ್ರೇರಣೆಯಿಂದ ಬಂದ್‌ ಮಾಡಿ, ವೀಕೆಂಡ್‌ ಲಾಕ್‌ಡೌನ್‌ಗೆ ಸಹಕಾರ ನೀಡಿದಂತಿತ್ತು. ಇನ್ನು ನಿಗದಿತ ಅವ ಧಿವರೆಗೆ ಹೋಟೆಲ್‌ಗ‌ಳು ತೆರೆದಿದ್ದವಾದರೂ, ಕೆಲವೊಬ್ಬರು ಅಲ್ಲಿಯೇ ಉಪಾಹಾರ ಸೇವಿಸಿದರೆ, ಬಹುತೇಕರು ಪಾರ್ಸೆಲ್‌ ತಗೊಂಡು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪೆಟ್ರೋಲ್‌ ಬಂಕ್‌, ಎಟಿಎಂ, ಔಷಧ ಮಳಿಗೆಗಳು, ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಮುಂದುವರೆದಿತ್ತು.

ಪರದಾಡಿದ ಪ್ರಯಾಣಿಕರು: ಮದುವೆ ಸಮಾರಂಭ, ಅನಾರೋಗ್ಯ ನಿಮಿತ್ತ ನಗರಕ್ಕೆ ಆಗಮಿಸಿದ್ದ ವಿವಿಧ ಊರುಗಳ ಜನರು ಕೆಎಸ್‌ಆರ್‌ಟಿಸಿ ಬಸ್‌, ಆಟೋಗಾಗಿ ಪರದಾಟ ನಡೆಸಿದರು. ಮದುವೆ, ಆರೋಗ್ಯ ಸಮಸ್ಯೆ ನಿಮಿತ್ತ ಕೆಎಸ್‌ಆರ್‌ಟಿಸಿ ಬಸ್‌ ಗಳಲ್ಲಿ ನಗರಕ್ಕೆ ಆಗಮಿಸಿದ್ದ ಹಲವರು, ಯಾವುದೇ ಆಟೋಗಳು ಸಿಗದೆ, ಮದುವೆ ಮಂಟಪಕ್ಕೆ ಮತ್ತು ಆಸ್ಪತ್ರೆಗೆ ತೆರಳಲು ಹರಸಾಹಸ ಪಟ್ಟರು.

ಹಸುಗೂಸು, ಚಿಕ್ಕ ಮಕ್ಕಳೊಂದಿಗೆ ಆಗಮಿಸಿದ್ದ ಪೋಷಕರ ಪಾಡು ಹೇಳತೀರದಾಗಿದ್ದು, ಬಿರುಬಿಸಿಲಲ್ಲಿ ಮಕ್ಕಳನ್ನು ಹೊತ್ತೂಯ್ಯುತ್ತಿದ್ದ ಪೋಷಕರು ನಿಲ್ದಾಣಕ್ಕೆ ತೆರಳಲು ಹರಸಾಹಸ ಪಟ್ಟರು.

ಬ್ಯಾರಿಕೇಡ್‌ ನಿರ್ಮಾಣ: ಪೊಲೀಸರು ನಗರದ ಪ್ರಮುಖ ವೃತ್ತಗಳಲ್ಲಿ ಮೊದಲದಿನ ನಿರ್ಮಿಸಿದ್ದ ಬ್ಯಾರಿಕೇಡ್‌ಗಳು ಎರಡನೇ ದಿನವೂ ಮುಂದುವರೆದವು. ವಿನಾಕಾರಣ ವಾಹನಗಳಲ್ಲಿ ಸಂಚರಿಸುತ್ತಿದ್ದ ಸವಾರರನ್ನು ತಡೆದು, ವಿಚಾರಿಸಿ, ದಾಖಲೆ ಪರಿಶೀಲಿಸಿ ಕಳುಹಿಸಿಕೊಡುತ್ತಿದ್ದರು. ಪಾಲಿಕೆ ಚುನಾವಣೆ ನಿಮಿತ್ತ ರಾಜಕೀಯ ಪಕ್ಷಗಳ ಮುಖಂಡರ ವಾಹನಗಳು ಮಾತ್ರ ಅಲ್ಲೊಂದು ಇಲ್ಲೊಂದು ಸಂಚರಿಸುತ್ತಿದ್ದರು.

ಮೂಲಂಗಿ ರಸ್ತೆಗೆ ಚೆಲ್ಲಿದ ವ್ಯಾಪಾರಿ: ವೀಕೆಂಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎಪಿಎಂಸಿ ಆವರಣದಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಸಗಟು ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಮಧ್ಯರಾತ್ರಿ 1 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲಿನ ಚಿಲ್ಲರೆ ವ್ಯಾಪಾರಿಗಳನ್ನು ವಿವಿಧೆಡೆ ಸ್ಥಳಾಂತರಿಸಲಾಗಿದ್ದು, ಗ್ರಾಹಕರ ಸಂಖ್ಯೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಸಗಟು ವ್ಯಾಪಾರಿಗಳಿಗೆ ಸಮರ್ಪಕವಾಗಿ ವ್ಯಾಪಾರವಾಗದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಮೂಲಂಗಿಯನ್ನು ರಸ್ತೆಗೆ ಚೆಲ್ಲಿದ್ದಾರೆ. ಈ ಕುರಿತು ಕೇಳಿದರೆ ಗ್ರಾಹಕರೇ ಬರದಿದ್ದಾಗ ಇವುಗಳನ್ನು ಇಟ್ಟುಕೊಂಡು ಏನು ಮಾಡಬೇಕು ಎಂದು ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.