ತುರ್ತು ಪೊಲೀಸ್‌ ವಾಹನ-ಸಹಾಯವಾಣಿಗೆ ಚಾಲನೆ


Team Udayavani, May 2, 2021, 6:37 PM IST

25-11

ಬಳ್ಳಾರಿ: ಪೊಲೀಸ್‌ ಇಲಾಖೆ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು, ಜಿಲ್ಲೆಯ ಪೊಲೀಸರಿಗೆ ಈ ತುರ್ತು ವಾಹನಗಳು ಮತ್ತಷ್ಟು ಬಲ ತುಂಬುತ್ತವೆ. ಸಾರ್ವಜನಿಕರು ಸಹಾಯವಾಣಿಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ಹೇಳಿದರು. ಬಳ್ಳಾರಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ಶನಿವಾರ ನಡೆದ ಪೊಲೀಸ್‌, ಅಗ್ನಿ, ವಿಪತ್ತುಗೆ ಸಂಬಂಧಿ ಸಿದ ತುರ್ತು ಪರಿಸ್ಥಿತಿಯಲ್ಲಿ ಇಆರ್‌ಎಸ್‌ಎಸ್‌ ಸಹಾಯವಾಣಿ 112ಕ್ಕೆ ಚಾಲನೆ ಮತ್ತು 19 ಇಆರ್‌ಎಸ್‌ಎಸ್‌ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕರ ನೆರವಿಗೆ ನಿಲ್ಲಲು ಕೇಂದ್ರ ಸರ್ಕಾರ ರೂಪಿಸಿದ ಒಂದು ಅದ್ಭುತ ಯೋಜನೆ ಇದಾಗಿದೆ. ಇಡೀ ದೇಶದಲ್ಲಿ ರಾಜ್ಯಕ್ಕೆ ಹೆಚ್ಚಿನ ವಾಹನ ನೀಡಲಾಗಿದ್ದು, ನಮ್ಮ ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆಗೆ ಹೆಚ್ಚಿನ ವಾಹನಗಳನ್ನು ನೀಡಲಾಗಿದೆ .ಎಲ್ಲ ಸಾರ್ವಜನಿಕರು ಅಕ್ರಮ ಚಟುವಟಿಕೆಗಳ ಮುಕ್ತವಾಗಿ ಬದುಕು ಸಾಗಿಸಲು ಸಹಾಯವಾಣಿ ಮತ್ತು ವಾಹನಗಳ ಮೂಲಕ ಪೊಲೀಸ್‌ ಇಲಾಖೆ ನೆರವಿಗೆ ಬರಲಿದೆ ಎಂದರು. ದೇಶದಲ್ಲಿ ನಡೆಯುವ ಕೈÅಂ ತಡೆಯುವ ಉದ್ದೇಶದಿಂದ ಈ ಸಹಾಯವಾಣಿಯನ್ನು ಶುರು ಮಾಡಲಾಗಿದೆ. ದೇಶಾದ್ಯಂತ ಇದು ಕಾರ್ಯರೂಪಕ್ಕೆ ಬರಲಿದೆ. ಬಳ್ಳಾರಿ ಜನರಿಗೆ ಯಾವುದೇ ರೀತಿಯ ತೊಂದರೆಯಾದರೆ ತಕ್ಷಣ ಸ್ಪಂದಿಸುವ ಕೆಲಸ ಪೊಲೀಸ್‌ ಇಲಾಖೆಯಿಂದ ಆಗುತ್ತದೆ. ಈ ವಾಹನಗಳು ಬಳ್ಳಾರಿ ಜಿಲ್ಲೆಯಲ್ಲಿ ಮುಂದೆ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ತಡೆಯುವ ಕೆಲಸ ಮಾಡುತ್ತವೆ.

ಬಳ್ಳಾರಿ ಜಿಲ್ಲೆಯಾದ್ಯಂತ ಈ ವಾಹನಗಳು ಸಂಚಾರ ಮಾಡುತ್ತವೆ. ಎಲ್ಲ ಸಾರ್ವಜನಿಕರು ಪೊಲೀಸ್‌ ಇಲಾಖೆಯ ಸೇವೆಯನ್ನು ಪಡೆದುಕೊಳ್ಳಿ ಎಂದರು. ಎಸ್‌ಪಿ ಸೈದುಲು ಅಡಾವತ್‌ ಅವರು ಮಾತನಾಡಿ, ಒಳ್ಳೆಯ ಉದ್ದೇಶದಿಂದ ಈ ವಾಹನ ನೀಡಲಾಗಿದೆ. ಜನಸಂಖ್ಯೆ ಜಾಸ್ತಿ ಮತ್ತು ಹೆಚ್ಚಿನ ಪೊಲೀಸ್‌ ಸ್ಟೇಷನ್‌ ಹೆಚ್ಚು ಇರುವುದರಿಂದ ರಾಜ್ಯದಲ್ಲಿಯೇ ಬಳ್ಳಾರಿಗೆ ಹೆಚ್ಚಿನ ವಾಹನ ನೀಡಲಾಗಿದೆ. ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಿದರು.

112 ನಂಬರ್‌ಗೆ ಯಾವುದೇ ಫೋನ್‌ ಕಾಲ್‌ ಬಂದ 15 ನಿಮಿಷದೊಳಗೆ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತದೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಜನರಿಗೆ ನೆರವಾಗಿ ಎಂದರು. ನಗರ ಶಾಸಕ ಸೋಮಶೇಖರ್‌ ರೆಡ್ಡಿ, ಮಾತನಾಡಿ ತುರ್ತಾಗಿ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ವೇಗವಾಗಿ ವಾಹನ ಓಡಿಸಬೇಡಿ ಮತ್ತು ತಮ್ಮ ಇತಿಮಿತಿಯಲ್ಲಿಯೇ ಓಡಿಸಿ ಎಂದು ಸಲಹೆ ನೀಡಿದರು. ಜಿಲ್ಲೆಯ ಜನರಿಗೆ ಇದೊಂದು ಸುವರ್ಣ ಅವಕಾಶ. ಇದನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಎಎಸ್ಪಿ ಬಿ.ಎನ್‌. ಲಾವಣ್ಯ ಮಾತನಾಡಿ ಒಂದು ಆಪ್‌ ಮೂಲಕ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ಯಾವುದೇ ಒಬ್ಬ ವ್ಯಕ್ತಿ ಕರೆ ಮಾಡಿದ ತಕ್ಷಣ ಆ ವಾಹನದಲ್ಲಿರುವ ಪೊಲೀಸ್‌ ಅಧಿಕಾರಿ ಅವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಾರೆ. ದಿನದ 24 ಗಂಟೆಯೂ ಇದು ಕೆಲಸ ಮಾಡುತ್ತದೆ. ಎಲ್ಲ ಜನರು ಇದರಿಂದ ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ರಮೇಶ್‌ ಕುಮಾರ್‌ ಮತ್ತು ಪೊಲೀಸ್‌ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.