ಮೇಯರ್‌-ಉಪಮೇಯರ್‌ ಕುರ್ಚಿಗೆ ಪೈಪೋಟಿ


Team Udayavani, May 3, 2021, 10:41 PM IST

3-23

„ವೆಂಕೋಬಿ ಸಂಗನಕಲ್ಲು

ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಸಾಮಾನ್ಯ, ಹಿಂದುಳಿದ ವರ್ಗಕ್ಕೆ ಮೀಸಲಾಗಿರುವ ಮೇಯರ್‌, ಉಪಮೇಯರ್‌ ಸ್ಥಾನಗಳಿಗೆ ಪೈಪೋಟಿ ಏರ್ಪಟ್ಟಿದ್ದು, ಯಾರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಬಳ್ಳಾರಿ ಮಹಾನಗರ ಪಾಲಿಕೆಗೆ ಕಳೆದ ಏ.27 ರಂದು ಮತದಾನ ಪ್ರಕ್ರಿಯ ನಡೆದು ಏ.30 ರಂದು ಫಲಿತಾಂಶ ಹೊರಬಿದ್ದಿದ್ದು, 21 ಸ್ಥಾನಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್‌ ಪಕ್ಷ ಪಾಲಿಕೆಯಲ್ಲಿ ಸತತ ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಮೇಲಾಗಿ ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಉಪಮೇಯರ್‌ ಹಿಂದುಳಿದ ಅ ವರ್ಗ (ಮಹಿಳೆ)ಕ್ಕೆ ಮೀಸಲಾಗಿದೆ.

ಇದೀಗ ಕಾಂಗ್ರೆಸ್‌ ಪಕ್ಷದಿಂದ ಜಯ ಗಳಿಸಿರುವ 21 ಸದಸ್ಯರಲ್ಲಿ ಹಲವರು ಮೇಯರ್‌, ಉಪಮೇಯರ್‌ ಆಗಲು ಕಾಂಗ್ರೆಸ್‌ ಹಿರಿಯ ಮುಖಂಡರನ್ನು ಗೋಗರೆಯುತ್ತಿರುವ ಪ್ರಸಂಗಗಳು ನಡೆಯುತ್ತಿದೆ ಎನ್ನಲಾಗುತ್ತಿದೆ. ಪಾಲಿಕೆ ಚುನಾವಣೆಯಲ್ಲಿ ಹೈವೋಲ್ಟೆàಜ್‌ ಕ್ಷೇತ್ರವೆಂದೇ ಕರೆಯಲಾಗುತ್ತಿದ್ದ 18ನೇ ವಾರ್ಡ್‌ನಲ್ಲಿ ಹಾಲಿ ನಗರ ಶಾಸಕರ ಪುತ್ರನ ವಿರುದ್ಧ ಜಯಗಳಿಸಿರುವ ಎಂ.ನಂದೀಶ್‌, 23ನೇ ವಾರ್ಡ್‌ನ ಸದಸ್ಯ ಕನಕದುರ್ಗಮ್ಮ ದೇವಸ್ಥಾನ ಧರ್ಮಕರ್ತ ಪಿ.ಗಾದೆಪ್ಪ, ಗ್ರಾಮೀಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ 30ನೇ ವಾರ್ಡ್‌ನ ಆಸೀಫ್‌ ಬಾಷಾ, 20ನೇ ವಾರ್ಡ್‌ ಸದಸ್ಯ ವಿವೇಕ್‌, 20ನೇ ವಾರ್ಡ್‌ನ ಎಂ.ರಾಮಾಂಜನೇಯ, 27ನೇ ವಾರ್ಡ್‌ ನಿಯಾಜ್‌ ಅಹ್ಮದ್‌ ಸೇರಿ ಇನ್ನು ಹಲವರ ಹೆಸರುಗಳು ಕೇಳಿಬರುತ್ತಿವೆ. ಇವರೆಲ್ಲರೂ ಈಗಾಗಲೇ ಪಕ್ಷದ ಹಿರಿಯ ಮುಖಂಡರ ಮನೆಗಳಿಗೆ ಎಡತಾಕುತ್ತಿದ್ದು, ಮೇಯರ್‌ ಅಥವಾ ಉಪಮೇಯರ್‌ ಸ್ಥಾನ ತಮಗೆ ನೀಡುವಂತೆ ಕೋರುತ್ತಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ. ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದು, ಕೇವಲ ಎರಡು ದಿನಗಳಾಗಿವೆ.

ರಾಜ್ಯ ಸರ್ಕಾರ ಪಾಲಿಕೆಗೆ ಅ ಧಿಸೂಚನೆ ಹೊರಡಿಸಬೇಕಾಗಿದೆ. ಜತೆಗೆ ಕೊರೊನಾ ಕರ್ಫ್ಯೂ ಇರುವುದರಿಂದ  ಘೋಷಣೆಯೂ ಒಂದು ವಾರಗಳ ಕಾಲ ಮುಂದೂಡಲಾಗಿದೆ. ಕೊರೊನಾ ಕರ್ಫ್ಯೂ ಮುಗಿದಾಕ್ಷಣ ಮೇಯರ್‌ -ಉಪಮೇಯರ್‌ ಆಯ್ಕೆಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಅಲ್ಲದೇ ಏ.30 ರಂದು ರಾಜ್ಯಾದ್ಯಂತ ಪ್ರಕಟವಾದ ಸ್ಥಳೀಯ ಸಂಸ್ಥೆಗಳ ಫಲಿತಾಂಶದಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿ ಸಿರುವುದು ಕೈ ಪಾಳೆಯದಲ್ಲಿ ಹೊಸ ಹುಮ್ಮಸ್ಸು ತಂದಿದ್ದು, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೇ ಮೇಯರ್‌-ಉಪಮೇಯರ್‌ರನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಬಳ್ಳಾರಿ ಮಹಾನಗರ ಪಾಲಿಕೆಯು ನಗರ ಮತ್ತು ಗ್ರಾಮೀಣ ವಿಧಾನಸಭಾ ಕ್ಷೇತಗಳನ್ನು ವ್ಯಾಪಿಸಿದೆ.

ನಗರ ಕ್ಷೇತ್ರದಲ್ಲಿ 28, ಗ್ರಾಮೀಣ ಕ್ಷೇತ್ರ ಕೌಲ್‌ಬಜಾರ್‌ನಲ್ಲಿ 11 ಸೇರಿ ಒಟ್ಟು 39 ವಾರ್ಡ್‌ಗಳು ಇವೆ. ಗ್ರಾಮೀಣ ಕ್ಷೇತ್ರದ 11 ವಾರ್ಡ್‌ಗಳಲ್ಲಿ 9 ಕಾಂಗ್ರೆಸ್‌ 1 ಕಾಂಗ್ರೆಸ್‌ ಬಂಡಾಯ ಪಕ್ಷೇತ್ರ ಅಭ್ಯರ್ಥಿ ಸೇರಿ ಒಟ್ಟು 10 ವಾಡ್‌ ìಗಳಲ್ಲಿ ಕಾಂಗ್ರೆಸ್‌ ಗೆಲುವು ದಾಖಲಿಸಿದೆ. ಇನ್ನು ನಗರ ಕ್ಷೇತ್ರ ವ್ಯಾಪ್ತಿಯ 28ರಲ್ಲಿ 13 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಜಯಗಳಿಸಿದೆ. ಎರಡೂ ಕ್ಷೇತ್ರಗಳ ಮತದಾರರು “ಕೈ’ ಹಿಡಿದಿರುವುದರಿಂದ ಸಹಜವಾಗಿಯೇ ಮೇಯರ್‌, ಉಪಮೇಯರ್‌ ಸ್ಥಾನಗಳಿಗೆ ಪೈಪೋಟಿ ಏರ್ಪಡಲಿದ್ದು, ಮೇಯರ್‌ ಸ್ಥಾನವನ್ನು ನಗರ ಕ್ಷೇತ್ರಕ್ಕೆ, ಉಪಮೇಯರ್‌ ಸ್ಥಾನವನ್ನು ಗ್ರಾಮೀಣ ಕ್ಷೇತ್ರಕ್ಕೆ ಬಿಟ್ಟುಕೊಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇನ್ನು ಉಪಮೇಯರ್‌ ಸ್ಥಾನಕ್ಕೂ ತೀವ್ರ ಪೈಪೋಟಿ ಏರ್ಪಟ್ಟಿದೆ. ಕಾಂಗ್ರೆಸ್‌ ನಲ್ಲಿ ಹಿಂದುಳಿದ ಅ ವರ್ಗ (ಮಹಿಳೆ) ಕ್ಕೆ ಸೇರಿದ್ದ 26ನೇ ವಾರ್ಡ್‌ನ ಡಿ.ಸುಕುಂ, 28ನೇ ವಾರ್ಡ್‌ನ ಮುಬೀನಾ ಬಿ, 37ನೇ ವಾರ್ಡ್‌ನ ಮಾಲನ್‌ ಬೀ ಅವರು ಈಗಾಗಲೇ ರೇಸ್‌ನಲ್ಲಿದ್ದಾರೆ. 17ನೇ ವಾಡ್‌ ìನ ಕಾಂಗ್ರೆಸ್‌ ಬಂಡಾಯ ಪಕ್ಷೇತರ ಅಭ್ಯರ್ಥಿ ಕವಿತಾ ಹೊನ್ನಪ್ಪ ಅವರು ಸಹ ಹಿಂದುಳಿದ ಅ ವರ್ಗ ಮಹಿಳೆ ಸ್ಥಾನದಿಂದ ಜಯಗಳಿಸಿದವರಾಗಿದ್ದಾರೆ. ಮೂಲ ಕಾಂಗ್ರೆಸ್ಸಿಗರಾಗಿರುವ ಇವರು ಸಹ ಉಪಮೇಯರ್‌ ಸ್ಥಾನದ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ಸಿಗರ ಬೆಂಬಲ ಪಡೆದು ಸ್ಪಸಿದರೂ ಅಚ್ಚರಿಯಿಲ್ಲ. ಪಾಲಿಕೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಉಭಯ ಸ್ಥಾನಗಳಿಗೆ ಪೈಪೋಟಿ ಏರ್ಪಟ್ಟಿದ್ದು, ಯಾರ್ಯಾರಿಗೆ ಮೇಯರ್‌ -ಉಪಮೇಯರ್‌ ಸ್ಥಾನಗಳು ಒಲಿಯಲಿವೆ ಎಂಬುದನ್ನು ಕಾದು ನೋಡಬೇಕಾಗಿದೆ

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.