ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ನೀಡಿ
Team Udayavani, May 4, 2021, 9:56 PM IST
ಸಂಡೂರು: ತಾಲೂಕಿನ ಬಹಳಷ್ಟು ಗ್ರಾಮಗಳ ರೈತರು ಉದ್ಯೋಗದ ಆಸೆಗಾಗಿ ಕೃಷಿ ಜಮೀನನ್ನು ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿಕೊಂಡು ಇತ್ತ ಉದ್ಯೋಗವೂ ಇಲ್ಲ, ಭೂಮಿಯು ಇಲ್ಲದಂಥ ದುಸ್ಥಿತಿ ಉಂಟಾಗಿದ್ದು ಜಿಂದಾಲ್ ಕಂಪನಿಯು ಉದ್ಯೋಗ ನೀಡುವ ಮೂಲಕ ಬೀದಿಪಾಲಾಗುತ್ತಿರುವ ರೈತ ಕುಟುಂಬಗಳನ್ನು ರಕ್ಷಿಸಬೇಕು ಎಂದು ಕರ್ನಾಟಕ ಪ್ರಾಂತ್ಯ ರೈತ ಸಂಘದ ಅಧ್ಯಕ್ಷ ಯು. ತಿಪ್ಪೇಸ್ವಾಮಿ ಒತ್ತಾಯಿಸಿದರು.
ಅವರು ಪಟ್ಟಣದ ತಹಶೀಲ್ದಾರ್ ಕಚೇರಿಯ ಅಧಿ ಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿ, ತಾಲೂಕಿನ ತಾಳೂರು, ವಡ್ಡು, ತಾರಾನಗರ, ಇತರ ಸುತ್ತಲಿನ ಗ್ರಾಮಗಳ ರೈತರು ಜಿಂದಾಲ್ ಕಂಪನಿಯಲ್ಲಿ ಕುಟುಂಬದ ಸದಸ್ಯರಿಗೆ ಕೆಲಸ ಕೊಡುತ್ತೇವೆ ಎಂದು ಒಪ್ಪಿಕೊಂಡು ಭೂಮಿಯನ್ನು ಎಕರೆಗೆ 1.80 ಲಕ್ಷಕ್ಕೆ ಖರೀದಿಸಿಕೊಂಡು ತಮ್ಮ ಅಭಿವೃದ್ಧಿ ಮಾಡಿಕೊಂಡಿದ್ದಾರೆ.
ಆದರೆ ಈಗ ಮಾತ್ರ ಕೆಲಸ ನೀಡುತ್ತಿಲ್ಲ. ಇದರಿಂದ ಕೃಷಿ ಕುಟುಂಬ ಭೂಮಿಯನ್ನು ಕಳೆದುಕೊಂಡು ಕೆಲಸವಿಲ್ಲದೆ ಬೀದಿಪಾಲಾಗುತ್ತಿದ್ದಾರೆ. ಆದ್ದರಿಂದ ತಕ್ಷಣ ಈ ಕುಟುಂಬಗಳ ರಕ್ಷಣೆಯನ್ನು ಮಾಡುವುದರ ಜೊತೆಗೆ ಉದ್ಯೋಗ ಕೊಡಬೇಕು. ಭೂಮಿ ಕೊಡಿಸುವ ಸಂದರ್ಭದಲ್ಲಿ ಮಧ್ಯವರ್ತಿಗಳೇ ಲಕ್ಷಾಂತರ ಹಣ ಲಪಟಾಯಿಸಿರುವುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ