ಸುಕೋ-ಐಎಂಎ ಕೋವಿಡ್‌ ಆಸ್ಪತ್ರೆ ಲೋಕಾರ್ಪಣೆ


Team Udayavani, May 6, 2021, 10:27 PM IST

6-15

ಸಿಂಧನೂರು: ಇಲ್ಲಿನ ಐಎಂಎ ಹಾಲ್‌ನಲ್ಲಿ ಅತ್ಯಾಧುನಿಕ ಸುಕೋ-ಐಎಂಎ ಸಹಭಾಗಿತ್ವ ಹಾಗೂ ಜನತಾ ಸೌಹಾರ್ದ ಸಹಕಾರಿ ನಿಯಮಿತ ಸಹಕಾರದಲ್ಲಿ ಆರಂಭಿಸಲಾದ 30 ಹಾಸಿಗೆ ಹೈಟೆಕ್‌ ಕೋವಿಡ್‌ ಆಸ್ಪತ್ರೆಯನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುಧವಾರ ಲೋಕಾರ್ಪಣೆ ಮಾಡಿದರು.

ಆನ್‌ಲೈನ್‌ನಲ್ಲಿ ಈ ವಿಶೇಷ ಕೋವಿಡ್‌ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಷ್ಟ-ಕಾಲದಲ್ಲಿ ಸರಿಯಾದ ನಿರ್ಣಯ ತೆಗೆದುಕೊಂಡು ಸುಕೋ ಅವರು ಹಲವರ ಬದುಕಿನಲ್ಲಿ ಬೆಳಕು ಚೆಲ್ಲುವ ಕೆಲಸಕ್ಕೆ ಕೈ ಹಾಕಿದ್ದಾರೆ. ಈ ಕೋವಿಡ್‌ ಆಸ್ಪತ್ರೆಗೆ ಸಂಬಂಧಿ ಸಿ, ಶಾಸಕ ವೆಂಕಟರಾವ್‌ ನಾಡಗೌಡ ಅವರು ಎರಡೂ¾ರು ಬಾರಿ ನನಗೆ ಕರೆ ಮಾಡಿ, ಸರಕಾರದ ಸಹಕಾರ ಕೇಳಿದ್ದರು.

ಜನರು ಎಲ್ಲ ಕಡೆಗೂ ಬೆಡ್‌, ಆಕ್ಸಿಜನ್‌, ಔಷಧ ಕೊರತೆ ಎದುರಿಸುತ್ತಿದ್ದಾರೆ. ನಮಗೂ ಆಕ್ಸಿಜನ್‌ ಕೊಡಿಸಿ ಅಂತಾ ಕರೆಗಳು ಬರುತ್ತಿವೆ. ಆಸ್ಪತ್ರೆ ಭರ್ತಿಯಾಗಿವೆ. ಸ್ಥಳ ಕೊರತೆಯಿದೆ ಎಂಬ ಮಾತು ಕೇಳುತ್ತಿರುತ್ತೇವೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಸುಕೋ ಮತ್ತು ಐಎಂಎ ವೈದ್ಯರ ತಂಡ ಜನಪರ ಕಾಳಜಿ ತೋರಿದೆ.

ಜನರ ಭಾವನೆಯನ್ನು ಅರಿತು ಅವರ ನೆರವಿಗೆ ಧಾವಿಸಿದ್ದು, ಒಳ್ಳೆಯ ಬೆಳವಣಿಗೆ. ಸರಕಾರ ನಿಗದಿಪಡಿಸಿದ ದರಕ್ಕಿಂತ ಶೇ.50ರಷ್ಟು ಕಡಿಮೆ ದರದಲ್ಲಿ ಚಿಕಿತ್ಸೆ ವೆಚ್ಚವನ್ನು ಪಡೆಯಲಾಗುತ್ತಿದೆ ಎಂಬುದನ್ನು ಕೇಳಿದಾಗ ಸಂತಸವಾಯಿತು. ಸುಕೋ ಹಾಗೂ ಐಎಂಎನ ಈ ಸೇವೆ ಹೆಚ್ಚು ಜನರಿಗೆ ತಲುಪಿ, ಜನರು ಕೊರೊನಾ ಮಹಾಮಾರಿ ಎಂಬ ಕಂಟಕದಿಂದ ಬೇಗ ಹೊರಬರುವಂತಾಗಲಿ ಎಂದರು.

ಶಾಸಕ ವೆಂಕಟರಾವ್‌ ನಾಡಗೌಡ ಮಾತನಾಡಿ, ಸಿಂಧನೂರು ತಾಲೂಕಿನಲ್ಲಿ 250 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆಯಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ 3 ವೆಂಟಿಲೇಟರ್‌ ಗಳನ್ನು ಒದಗಿಸುವ ಕುರಿತು ಈಗಾಗಲೇ ನಿಮ್ಮ ಗಮನಕ್ಕೆ ತರಲಾಗಿದೆ. ಖಾಸಗಿ, ಸರಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಔಷಧ ಪೂರೈಕೆಯಾಗಬೇಕಿದೆ. ಈ ಬಗ್ಗೆ ತ್ವರಿತ ಸ್ಪಂದನೆ ಅವಶ್ಯ ಎಂದು ಡಿಸಿಎಂ ಸವದಿ ಅವರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಭತ್ತ ಖರೀದಿಗೆ ಸಂಬಂಧಿ ಸಿ ಆನ್‌ಲೈನ್‌ ನೋಂದಣಿಯನ್ನು ಬ್ಲಾಕ್‌ ಮಾಡಿರುವ ಕುರಿತು ಗಮನಕ್ಕೆ ತಂದು, ನೋಂದಣಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸುಕೋ ಬ್ಯಾಂಕ್‌ ಅಧ್ಯಕ್ಷ ಮೋಹಿತ್‌ ಮಸ್ಕಿ ಅವರು ಹೊಸದಾಗಿ ಆರಂಭಿಸುತ್ತಿರುವ ಕೋವಿಡ್‌ ಆಸ್ಪತ್ರೆ ಕುರಿತು ವಿವರ ನೀಡಿದರು. ಜನತಾ ಸೌಹಾರ್ದ ಸಹಕರಿ ನಿರ್ದೇಶಕ ಶಿವಕುಮಾರ್‌, ವೈದ್ಯರಾದ ಡಾ| ಶಿವರಾಜ್‌ ಪಾಟೀಲ್‌, ಬಿ.ಎನ್‌. ಪಾಟೀಲ್‌, ಡಾ| ಶರಣಬಸವ ದೇವರೆಡ್ಡಿ, ಡಾ| ಚನ್ನನಗೌಡ ಪಾಟೀಲ್‌ ಇದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.