ಹೆಚ್ಚುತ್ತಿರುವ ಸೋಂಕು-ಸಾವು; ಜನರಲ್ಲಿ ಆತಂಕ


Team Udayavani, May 12, 2021, 7:16 PM IST

12-15

„ಸುರೇಶ ಯಳಕಪ್ಪನವರ

ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆಯೂ ಏರುತ್ತಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ. ಕಳೆದ ಒಂದು ವಾರದಿಂದ ಸಾವಿಲ್ಲದ ದಿನಗಳೇ ಇಲ್ಲದಂತಾಗಿದೆ. ಗ್ರಾಮದ ಹಿರಿಯ ಮುಖಂಡರೊಬ್ಬರು ಮೃತಪಟ್ಟ ಮೂರನೇ ದಿನವೇ ಅವರ ಮಗನೂ ಕೂಡ ಮೃಪಟ್ಟಿರುವುದು ಕುಟುಂಬದವರ ಜೊತೆ ಇಡೀ ಗ್ರಾಮಸ್ಥರ ಮನಸ್ಸನ್ನು ಘಾಸಿಗೊಳಿಸಿದೆ.

ಇಂಥ ಹೃದಯವಿದ್ರಾವಕ ಘಟನೆಗಳು ದಿನಕ್ಕೊಂದು ನಡೆಯುತ್ತಿದ್ದು ಸಾವಿನ ಊರು ಎಂಬಂತಾಗಿದೆ. ಗ್ರಾಮದಲ್ಲಿ ಒಟ್ಟು 34ಕ್ಕೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾದಂತೆಲ್ಲಾ ಸೋಂಕು ಪೀಡಿತರು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ 6 ಮಂದಿ ಮೃತಪಟ್ಟಿದ್ದು ತಾಲೂಕಿನಲ್ಲಿ ಪಟ್ಟಣ ಪ್ರಥಮವಾದರೆ, ತಂಬ್ರಹಳ್ಳಿ ಸಾವಿನ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ತಂಬ್ರಹಳ್ಳಿ ಉತ್ತರಭಾಗದ ಮುಖ್ಯಶಿಕ್ಷಕಿ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಮಂಜುಳಾ ಹವಾಲ್ದಾರ್‌ ವೈರಸ್‌ಗೆ ಬಲಿಯಾಗಿದ್ದು ಶಿಕ್ಷಕ ವರ್ಗ, ಮಹಿಳಾ ಸಂಘಟನೆಗಳು ಇನ್ನೂ ನೋವಿನಿಂದ ಹೊರಬರದಂತೆ ಮಾಡಿದೆ.

ಗ್ರಾಮದ ಬಹುತೇಕರಿಗೆ ಜ್ವರ, ಮೈಕೈ ನೋವು, ಶೀತ, ಕೆಮ್ಮ ಇದ್ದರೂ ಕೂಡ ಕೇವಲ ಮಾತ್ರೆ ನುಂಗಿ ತಾತ್ಕಾಲಿಕ ಪರಿಹಾರವನ್ನು ಕಂಡುಕೊಳ್ಳುತ್ತಿರುವುದು ಸೋಂಕು ಇನ್ನಷ್ಟು ಉಲ್ಬಣಗೊಳ್ಳಲು ಕಾರಣವಾಗುತ್ತಿದೆ. ವೈರಸ್‌ ಪೀಡಿತ ಯುವಕನೋರ್ವ ಗ್ರಾಮದಲ್ಲಿ ಆಗಾಗ ಬೈಕ್‌ ಸವಾರಿ ಮಾಡುತ್ತಾ ಸಂಚರಿಸಿರುವುದು ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ.

ಯುವಕರ ಕಾಳಜಿ: ಸಾವಿನ ಸಂಖ್ಯೆ ದಿನೇದಿನೆ ಹೆಚ್ಚಾಗುವುದನ್ನು ತಡೆಯಲು ಗ್ರಾಮದ ಯುವ ಮುಖಂಡರು ಗ್ರಾಮವನ್ನು ಸ್ವಯಂ ಲಾಕ್‌ ಡೌನ್‌ ಮಾಡಿಕೊಳ್ಳಲು ಮುಂದಾಗಿದ್ದಾರೆ. ನಮ್ಮ ತಂಬ್ರಹಳ್ಳಿ ವ್ಯಾಟ್ಸಾಪ್‌ ಗ್ರೂಪ್‌ ಮೂಲಕ ಲಾಕ್‌ಡೌನ್‌ನೂ° ಇನ್ನೂ ಬಿಗಿ ಮಾಡಿಕೊಳ್ಳಲು ಪೂರಕವಾಗಿ ಚರ್ಚಿಸಿದ್ದಾರೆ.

ಸರಕಾರ ಪ್ರತಿದಿನ ಬೆಳಗ್ಗೆ 6ರಿಂದ 10 ಗಂಟೆವರೆಗೆ ತರಕಾರಿ ಕಿರಾಣಿಗೆ ಅವಕಾಶ ನೀಡಿರುವುದನ್ನು ಇನ್ನಷ್ಟು ಬಿಗಿಗೊಳಿಸಲು ವಾರದಲ್ಲಿ ಎರಡು ದಿನಮಾತ್ರ, ಸರಕಾರ ನಿರ್ಧಾರ ಮಾಡಿರುವ ಸಮಯದಲ್ಲಿ ಮಾತ್ರ ಕಿರಾಣಿ ಅಂಗಡಿ, ಇತರೆ ಅಂಗಡಿಗಳು ತೆರೆಯಬೇಕು ಎಂದು ನಿರ್ಧರಿಸಿ ಜಾರಿಗೊಳಿಸಲು ಪ್ರಯತ್ನ ನಡೆಸಿದ್ದಾರೆ.

ಇದಕ್ಕೆ ಸ್ಥಳೀಯ ಗ್ರಾಪಂ ಕೂಡ ಪೂರಕವಾಗಿದ್ದು, ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯುವ ಪ್ರಮುಖರಾದ ಬಿ.ದೇವಿಪ್ರಸಾದ, ಸುಣಗಾರ ರಾಮು, ವೈ.ಕೆ. ಶ್ರೀನಿವಾಸ, ಹರೀಶ್‌ ಸೊಬಟಿ, ರವಿಕುಮಾರ ಸಕ್ರಹಳ್ಳಿ, ಬಾಳಿಕಾಯಿ ವೀರೇಶ್‌, ಯಮನೂರ, ಬಿ.ಶಕ್ತಿಪ್ರಸಾದ, ಸುಣಗಾರ ಮಂಜುನಾಥ, ನಂದೀಶ್‌, ಕುಮಾರ ಸುಣಗಾರ, ಗೌರಜ್ಜನವರ ಕೊಟ್ರೇಶ, ಆಕಾಶ್‌ ಸೇರಿದಂತೆ ಸಮಾನ ಮನಸ್ಕರು ಗ್ರೂಪ್‌ನಲ್ಲಿ ಚರ್ಚೆ ನಡೆಸಿ ಒಂದು ಹಂತದ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಯುವಕರು ಸೋಷಿಯಲ್‌ ಮೀಡಿಯಾಗಳ ಮೂಲಕ ಕೊರೊನಾ ವಿರುದ್ದ ಜನಜಾಗೃತಿ ಜೊತೆಗೆ ಸ್ವಯಂ ಲಾಕ್‌ಡೌನ್‌ಗೆ ನಿರ್ಧಾರ ಮಾಡಿರುವುದನ್ನು ಗ್ರಾಮದ ಹಿರಿಯರು ಪ್ರಶಂಸಿಸಿದ್ದಾರೆ.

ಗ್ರಾಪಂ ಕಾಳಜಿ: ಈಗಾಗಲೇ ಗ್ರಾಪಂನವರು ಗ್ರಾಮದ ಚರಂಡಿಗಳನ್ನು ಸ್ವತ್ಛಗೊಳಿಸುವ ಮೂಲಕ ಕಾಳಜಿ ಮೆರೆದಿದ್ದಾರೆ. ವೈರಸ್‌ ತಡೆಗಟ್ಟಲು ಗ್ರಾಮದ ಎಲ್ಲ ವಾರ್ಡ್‌ಗಳಿಗೆ ಸ್ಯಾನಿಟೈಸರ್‌ ಸಿಂಪಡಣೆ ಮಾಡಿದ್ದಾರೆ.

ಗ್ರಾಪಂನ ಸದಸ್ಯರುಗಳು ಯುವಕರಿರುವುದರಿಂದ ಸ್ವತ್ಛತೆ, ಮೂಲಭೂತ ಸೌಕರ್ಯಗಳು, ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಜನರಿಗೆ ಸುಲಭವಾಗಿ ಸೂಕ್ತ ಸಮಯದಲ್ಲಿ ಒದಗುತ್ತಿವೆ.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.