ಪಡಿತರ ಪಡೆಯಲು ಬಯೋಮೆಟ್ರಿಕ್‌ ಕಡ್ಡಾಯವಲ್ಲ: ಡಿಸಿ


Team Udayavani, May 14, 2021, 9:17 PM IST

14-16

ಬಳ್ಳಾರಿ: ಕೋವಿಡ್‌ ಹಿನ್ನೆಲೆಯಲ್ಲಿ ಪಡಿತರ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳು ಮುದ್ರೆ (ಬಯೋಮೆಟ್ರಿಕ್‌) ನೀಡಿ ಪಡೆಯಬೇಕಾಗಿರುವುದಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ವ್ಯಾಪಿಸುತ್ತಿರುವ ಕಾರಣ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಮೇ ತಿಂಗಳ ಪಡಿತರ ಚೀಟಿದಾರರ ಬೆರಳು ಮುದ್ರೆ (ಬಯೋಮೆಟ್ರಿಕ್‌) ಪಡೆಯದೇ ವಿತರಿಸಲು ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ತಿಳಿಸಲಾಗಿದೆ. ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ವಿತರಿಸಲು ಪಡಿತರ ಚೀಟಿದಾರರು ಬೆರಳು ಮುದ್ರೆ (ಬಯೋಮೆಟ್ರಿಕ್‌) ನೀಡುವಂತೆ ಒತ್ತಾಯಿಸಬಾರದೆಂದು ಅವರು ತಿಳಿಸಿದ್ದಾರೆ.

ಪಡಿತರ ಚೀಟಿದಾರರು ಆಧಾರ್‌ ಜತೆ ಜೋಡಿಸಿಕೊಂಡಿರುವ ಮೊಬೈಲ್‌ ಸಂಖ್ಯೆಗೆ ಓಟಿಪಿ ನೀಡಿ ವಿತರಿಸಲಾಗುವುದು. ವೃದ್ಧರು, ಅನಾರೋಗ್ಯ ಪೀಡಿತರು ಮತ್ತು ವಿಶೇಷಚೇತನರಿಗೆ ವಿನಾಯತಿ ಸೌಲಭ್ಯದಡಿ ಪಡಿತರ ವಿತರಿಸಲಾಗುವುದು. ಪಡಿತರ ಚೀಟಿದಾರರ ಪರಿಶೀಲನಾ ಪಟ್ಟಿ/ ಕೈಬಿಲ್ಲು ಮೂಲಕವೂ ಪಡಿತರವನ್ನು ನೇರವಾಗಿ ವಿತರಿಸಲಾಲಾಗುವುದು. ಪಡಿತರ ಪಡೆಯಲು ರಾಜ್ಯ ಮತ್ತು ಹೊರ ರಾಜ್ಯದ ಪಡಿತರ ಚೀಟಿದಾರರಿಗೆ ಪೋರ್ಟಬಲಿಟಿ ಸೌಲಭ್ಯದ ಮೂಲಕ ಪಡಿತರ ವಿತರಣೆ ಸಹ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ 2021ನೇ ಮೇ ತಿಂಗಳ ಪಡಿತರ ಪರಿಶೀಲನಾ ಪಟ್ಟಿ (ಚೆಕ್‌ ಲಿಸ್ಟ್‌) ಅಥವಾ ಯಾವುದಾದರೂ ಮೊಬೈಲ್‌ಗೆ ಓಟಿಪಿ ನೀಡುವ ಮೂಲಕ ವಿತರಿಸಲು ಅವಕಾಶ ನೀಡಬೇಕೆಂದು ರಾಜ್ಯ ಪಡಿತರ ವಿತರಕರ ಸಂಘ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿ ಪಡಿತರ ವಿತರಣೆಗೆ ಪರಿಶೀಲನಾ ಪಟ್ಟಿ ಸೌಲಭ್ಯ ಸೇರಿ ಪಡಿತರ ವಿತರಣೆಗೆ ಸುಲಭವಾಗಲು ಅನೇಕ ರೀತಿ ಅವಕಾಶ ನ್ಯಾಯಬೆಲೆ ಅಂಗಡಿಗೆ ಕಲ್ಪಿಸಲಾಗಿದೆ.

ಯಾವುದಾದರೂ ಮೊಬೈಲ್‌ಗೆ ಓಟಿಪಿ ಸೌಲಭ್ಯ ನೀಡುವ ಮೂಲಕ ಪಡಿತರ ವಿತರಿಸುವ ವಿಷಯವಾಗಿ ಸ್ಪಷ್ಟಪಡಿಸುವುದು ಏನೆಂದರೆ, ಇಂತಹ ಸೌಲಭ್ಯ ಕೋವಿಡ್‌ ಒಂದನೇ ಅಲೆ ಸಂದರ್ಭದಲ್ಲಿ ಕಲ್ಪಿಸಲಾಗಿತ್ತು. ಆಗ ಕೆಲವು ನ್ಯಾಯಬೆಲೆ ಅಂಗಡಿ ಮಾಲೀಕರು ಒಂದೇ ಮೊಬೈಲ್‌ ನಂಬರ್‌ ಬಳಸಿ ಅನೇಕ ಪಡಿತರ ಚೀಟಿಗಳಿಗೆ ಪಡಿತರ ವಿತರಿಸಿರುವ ಪ್ರಕರಣಗಳು ವರದಿಯಾಗಿವೆ. ಇದರಿಂದ ಪಡಿತರ ದುರುಪಯೋಗ ಮಾಡಲು ಅವಕಾಶವಿರುತ್ತದೆ ಎಂದು ಅವರು ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ನೀತಿಯಂತೆ ಪಡಿತರವನ್ನು ರಾಜ್ಯಗಳು ಬಯೋದೃಢೀಕರಣದ ಮೂಲಕ ವಿತರಿಸಿದರೆ ಮಾತ್ರ ಅಂತಹ ವಿತರಣೆ ಮಾಹಿತಿಯೂ ಕೇಂದ್ರ ಸರ್ಕಾರದ ದತ್ತಾಂಶ ಕೇಂದ್ರಕ್ಕೆ ರವಾನೆಯಾಗುತ್ತದೆ.

ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಪ್ರತಿ ತಿಂಗಳ ಆಹಾರಧಾನ್ಯ ಹಂಚಿಕೆ ನೀಡುತ್ತದೆ. ಆದಾಗ್ಯೂ ರಾಜ್ಯದಲ್ಲಿ ಎದುರಾಗಿರುವ ಕೋವಿಡ್‌ ಎರಡನೇ ಅಲೆ ಪರಿಣಾಮ ಗಮನದಲ್ಲಿಟ್ಟುಕೊಂಡು ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಅಧಿ ಕಾರಿಗಳ ಮೇಲೆ ಯಾವುದೇ ಆರೋಗ್ಯದ ದುಷ್ಪರಿಣಾಮ ಉಂಟಾಗುವುದನ್ನು ತಡೆಯಲು ಸರಳ ಮತ್ತು ಪಾರದರ್ಶಕ ಪಡಿತರ ವಿತರಣೆಗೆ ಅವಕಾಶ ಮಾಡಲಾಗಿದೆ. ಪಡಿತರ ವಿತರಣೆಯಲ್ಲಿ ಸರಳ ಮತ್ತು ಪಾರದರ್ಶಕ ಅವಕಾಶ ಕಲ್ಪಿಸಲಾಗಿದೆ; ಆದರೂ ಕೆಲವರು ಗೊಂದಲ ಸೃಷ್ಟಿಸುತ್ತಿರುವುದು ಆಧಾರರಹಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ಕೋವಿಡ್‌ ರೋಗದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಪಡಿತರ ಚೀಟಿದಾರರಿಗೆ ಕೇಂದ್ರ-ರಾಜ್ಯ ಸರ್ಕಾರಗಳು ಹಂಚಿಕೆ ನೀಡಿರುವ ಪಡಿತರದ ವಸ್ತುಗಳು ನಿಗದಿತ ಸಮಯ ಮತ್ತು ಪ್ರಮಾಣದಲ್ಲಿ ಮತ್ತು ಆರೋಗ್ಯಪೂರ್ಣ ವಾತಾವರಣದಲ್ಲಿ ಸರಳ ಮಾರ್ಗಗಳ ಮೂಲಕ ವಿತರಣೆ ಆಗುವಂತೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವಿವರಿಸಿದ್ದಾರೆ.

ಯಾವುದೇ ಪಡಿತರ ಚೀಟಿದಾರರಿಗೆ ಅನಾನುಕೂಲವಾದಲ್ಲಿ ಅವರು ತಮ್ಮ ದೂರು ಬೆಂಗಳೂರಿನ ಆಯುಕ್ತಾಲಯದ ನಿಯಂತ್ರಣ ಕೊಠಡಿ ಸಂಖ್ಯೆ 1967, 1800-425-9339 ಮತ್ತು 14445 ದಾಖಲಿಸಲು ಹಾಗೂ ಜಂಟಿ ನಿರ್ದೇಶಕರ ಕಾರ್ಯಾಲಯ ಬಳ್ಳಾರಿ ಕಚೇರಿ ಸಂಖ್ಯೆ: 08392-272557 ಹಾಗೂ ಸಂಬಂ ಧಿಸಿದ ಗ್ರಾಪಂಗೆ ಅಥವಾ ತಹಶೀಲ್ದಾರ್‌ಗೆ ದೂರು ಸಲ್ಲಿಸಲು ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.