ಸೋಂಕಿತ ಮೃತರಿಗೆ ಗೌರವದ ವಿದಾಯ
Team Udayavani, May 17, 2021, 9:59 PM IST
ಆರ್. ಬಸವರೆಡ್ಡಿ ಕರೂರು
ಸಿರುಗುಪ್ಪ: ತಾಲೂಕಿನಲ್ಲಿ ಕೊರೊನಾ ಸೋಂಕಿತ ಶವಗಳಿಗೆ ಮತ್ತು ಅನಾಥ ಶವಗಳಿಗೆ ಗೌರವದ ಅಂತ್ಯಕ್ರಿಯೆ ಮಾಡುವ ಕಾರ್ಯವನ್ನು ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಕಾರ್ಯಕರ್ತರು ನಡೆಸುತ್ತಿದ್ದಾರೆ.
ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಗೌರವಯುತವಾಗಿ ನಡೆಸಲು ಪ್ರತಿಯೊಬ್ಬ ಕುಟುಂಬದ ಸದಸ್ಯರು ಇಚ್ಛೆಪಡುತ್ತಾರೆ, ಆದರೆ ಕೊರೊನಾ ಸೋಂಕು ಹರಡುತ್ತದೆ ಎನ್ನುವ ಭಯದಿಂದ ಸರ್ಕಾರವು ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರ ಮಾಡಲು ಪಾರ್ಥಿವ ಶರೀರವನ್ನು ಕುಟುಂಬದವರಿಗೆ ಒಪ್ಪಿಸದೇ ತಾವೇ ಬೇಕಾಬಿಟ್ಟಿಯಾಗಿ ಅಂತ್ಯಸಂಸ್ಕಾರ ಮಾಡುತ್ತಿದ್ದರು.
ಕಳೆದ ವರ್ಷ ಕೊರೊನಾದಿಂದ ಮೃತಪಟ್ಟವರನ್ನು ಜೆಸಿಬಿಯಿಂದ ಶವವನ್ನು ತಂದು ಗುಂಡಿಗಳಿಗೆ ಎಳೆದು ತಂದು ಬಿಸಾಕುವ ಮೂಲಕ ಅತ್ಯಂತ ನಿರ್ಲಕ್ಷéವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಇದರಿಂದಾಗಿ ಮೃತರ ಕುಟುಂಬದವರು ತಮ್ಮವರ ಅಂತ್ಯಸಂಸ್ಕಾರ ಗೌರವಯುತವಾಗಿ ನಡೆಯುತ್ತಿಲ್ಲ ಎನ್ನುವ ಸಂಕಟ ಅನುಭವಿಸುತ್ತಿದ್ದರು.
ಕಳೆದ ವರ್ಷದಿಂದ ತಾಲೂಕಿನಲ್ಲಿ ಕೊರೊನಾ ಸೋಂಕಿತರಿಗೆ ಮರ್ಯಾದೆಯ ಅಂತ್ಯಸಂಸ್ಕಾರವನ್ನು ಪಿಎಫ್ಐ ತಂಡದ ಯುವಕರು ಮಾಡಲು ಮುಂದಾಗಿದ್ದು, ಇಲ್ಲಿಯವರೆಗೆ 124ಕ್ಕೂ ಹೆಚ್ಚು ಅಂತ್ಯಸಂಸ್ಕಾರವನ್ನು ಅವರವರ ಧರ್ಮದ ವಿ ವಿಧಾನಗಳೊಂದಿಗೆ ಗೌರವಯುತವಾಗಿ ಮಾಡಿದ್ದಾರೆ.
ಈ ತಂಡದ ಸದಸ್ಯರು ಮಾಡುತ್ತಿರುವ ಕೆಲಸವನ್ನು ನೋಡಿದರೆ ಭಯವು ಆವರಿಸುತ್ತದೆ. ಮನಸ್ಸು ಭಾರವಾಗುತ್ತದೆ. ಕೊರೊನಾದಿಂದ ಸಾವನ್ನಪ್ಪಿದರೆ ಮನೆಯವರೇ ಹತ್ತಿರ ಬಾರದ ಪರಿಸ್ಥಿತಿಯನ್ನು ಅಪರಿಚಿತ ಶವಕ್ಕೆ ಹೆಗಲು ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ. ಕೊರೊನಾ ಮುನ್ನೆಚ್ಚರಿಕೆಯೊಂದಿಗೆ ಪಿಪಿಇ ಕಿಟ್ ಧರಿಸಿ ಸೊಂಕಿತರ ಅಂತ್ಯಕ್ರಿಯೆ ಮಾಡುತ್ತಿದ್ದಾರೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೊರೊನಾ ಸೊಂಕಿತರ ಅಂತ್ಯಸಂಸ್ಕಾರವನ್ನು ಈ ತಂಡದ ಸದಸ್ಯರು ಆರೋಗ್ಯ ಇಲಾಖೆಯ ಸಮ್ಮುಖದಲ್ಲಿ ವೈಜ್ಞಾನಿಕವಾಗಿ ಮಾಡುವ ಮೂಲಕ ಮಾನವೀಯತೆ ಇನ್ನೂ ಇದೆ ಎನ್ನುವುದನ್ನು ತೋರಿಸಿದ್ದಾರೆ.
ಪಿಎಫ್ಐ ಸಂಘಟನೆಯ 12 ಸದಸ್ಯರು ನುರಿತ ವೈದ್ಯರಿಂದ ತರಬೇತಿ ಪಡೆದು ಮೃತಪಟ್ಟ ಕೊರೊನಾಸೋಂಕಿತರ ಅಂತ್ಯಸಂಸ್ಕಾರ ಯಾವ ರೀತಿಯ ಮುನ್ನೆಚ್ಚರಿಕೆ ವಹಿಸಿ ಮಾಡಬೇಕೆನ್ನುವುದು ಅರಿತು, ಆಯಾ ಧರ್ಮದ ವಿಧಿವಿಧಾನಗಳಂತೆ ಅಂತ್ಯಸಂಸ್ಕಾರ ಮಾಡುತ್ತಿದ್ದೇವೆ.
-ಖಾಜ ಕಿಜರ್, ಸಂಘಟನೆ ಸದಸ್ಯ
ಪಿಎಫ್ಐ ಸಂಘಟನೆ ಕಾರ್ಯಕರ್ತರು ಮಾಡುತ್ತಿರುವ ಕಾರ್ಯ ಮಾನವೀಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಕೊರೊನಾ ಸೋಂಕಿತರನ್ನು ಮುಟ್ಟಿ ಅಂತ್ಯಸಂಸ್ಕಾರ ಮಾಡುವ ಕಾರ್ಯವನ್ನು ಈ ಸಂಘಟನೆಯ ಕಾರ್ಯಕರ್ತರು ಆಯಾ ಧರ್ಮಕ್ಕೆ ಅನುಗುಣವಾಗಿ ಮಾಡುತ್ತಿರುವ ಕಾರ್ಯ ಅತ್ಯಂತ ಶ್ಲಾಘನೀಯ.
-ಡಾ|ದೇವರಾಜ್, 100 ಹಾಸಿಗೆಗಳ ಸರ್ಕಾರಿ
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್