ರೈಸ್ಮಿಲ್ ಮಾಲೀಕರ ಸಂಘದಿಂದ ಔಷಧ ಕಿಟ್ ದೇಣಿಗೆ
Team Udayavani, May 17, 2021, 10:04 PM IST
ಸಿರುಗುಪ್ಪ: ಕೋವಿಡ್ ಸೋಂಕಿತರಿಗೆ ಒದಗಿಸಲು ಬೇಕಾದ ಮಾತ್ರೆ, ಚುಚ್ಚುಮದ್ದು, ಇತರೆ ವೈದ್ಯಕೀಯ ಪರಿಕರಗಳನ್ನು ದಾನಿಗಳು ನೀಡಲು ಮುಂದಾಗುತ್ತಿರುವುದು ಪ್ರಸಂಶನೀಯ ಕಾರ್ಯವಾಗಿದೆ ಎಂದು ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದರು.
ನಗರದ ತಾಲೂಕು ಕಚೇರಿಯಲ್ಲಿ ನಗರದ ರೈಸ್ಮಿಲ್ ಮಾಲೀಕರ ಸಂಘದವರು ದಾನವಾಗಿ ನೀಡಿದ ಸುಮಾರು 50 ಆಕ್ಸಿಮೀಟರ್ಗಳನ್ನು ಸ್ವೀಕರಿಸಿ ಮಾತನಾಡಿದ ಶಾಸಕರು ಕೋವಿಡ್ ಸೋಂಕಿತರ ಪಲ್ಸ್ ರೇಟ್ನ್ನು ಪರೀಕ್ಷಿಸಲು ಆಕ್ಸಿಮೀಟರ್ ಅಗತ್ಯವಾಗಿ ಬೇಕಾಗಿರುತ್ತದೆ. ಆಕ್ಸಿಮೀಟರನ್ನು ಪ್ರತಿಯೊಬ್ಬ ಆಶಾಕಾರ್ಯಕರ್ತೆಯರಿಗೆ ಒದಗಿಸುವುದರಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರ ಆರೋಗ್ಯದ ಬಗ್ಗೆ ನಿಗಾ ಇಡಲು ವೈದ್ಯಕೀಯ ಸಿಬ್ಬಂದಿಗೆ ಅನುಕೂಲವಾಗಲಿದೆ.
ಕೋವಿಡ್ ಸೋಂಕಿನ ಮೂರನೇ ಅಲೆ ಆರಂಭವಾಗುತ್ತಿದೆ ಎನ್ನುವ ಸೂಚನೆಯನ್ನು ವಿಜ್ಞಾನಿಗಳು ನೀಡಿರುವುದರಿಂದ ಪ್ರತಿಯೊಬ್ಬರ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೋವಿಡ್ ಸೋಂಕನ್ನು ತಡೆಯಲು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಯನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು. ಮೂರನೇ ಅಲೆ ತಡೆಯಲು ಬೇಕಾದ ಅಗತ್ಯ ಕ್ರಮಗಳಿಗಾಗಿ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ, ಕೋವಿಡ್ ಸೋಂಕು ತಡೆಯಲು ಸರ್ಕಾರದೊಂದಿಗೆ ಸಾರ್ವಜನಿಕರು, ಸಂಘಸಂಸ್ಥೆಗಳು ಕೈಜೋಡಿಸಬೇಕೆಂದು ಕರೆ ನೀಡಿದರು.
ತಹಶೀಲ್ದಾರ್ ಎಸ್.ಬಿ. ಕೂಡಲಗಿ, ವೈದ್ಯೆ ವಿದ್ಯಾಶ್ರೀ, ಡಾ| ಚನ್ನಬಸವ, ರೈಸ್ಮಿಲ್ ಮಾಲೀಕರ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಬಸವರಾಜಪ್ಪ, ಉಪಾಧ್ಯಕ್ಷ ಚಾಗಿ ಸುಬ್ಬಯ್ಯ, ಪದಾಧಿ ಕಾರಿಗಳಾದ ಮಾಣಿಕ್ಯರೆಡ್ಡಿ, ಚಾಗಿರಘು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ