ರೈಲು ನಿಲ್ದಾಣದಲ್ಲಿ ಕ್ಷಿಪ್ರ ಆಕ್ಸಿಜನ್‌ ಕೇಂದ್ರ ಆರಂಭ


Team Udayavani, Jun 2, 2021, 9:28 PM IST

2-13

ಬಳ್ಳಾರಿ: ಬಹುಭಾಷಾ ಚಿತ್ರನಟ ಸೋನುಸೂದ್‌ ಅವರ ಸೂದ್‌ ಚಾರಿಟಿ ಫೌಂಡೇಷನ್‌ ವತಿಯಿಂದ ನಗರದ ರೈಲ್ವೆ ನಿಲ್ದಾಣದಲ್ಲಿ ರಾಜ್ಯ ಪೊಲೀಸರ ಸಹಯೋಗದಲ್ಲಿ ಕ್ಷಿಪ್ರ ಆಕ್ಸಿಜನ್‌ ಕೇಂದ್ರ (ರ್ಯಾಪಿಡ್‌ ಆಕ್ಸೀಜನ್‌ ಸೆಂಟರ್‌)ವನ್ನು ಮಂಗಳವಾರ ಆರಂಭಿಸಲಾಯಿತು.

ಫೌಂಡೇಷನ್‌ನ ಅಮಿತ್‌ ಪುರೋಹಿತ್‌ ಅವರು, ರೈಲು ನಿಲ್ದಾಣದ ಪೊಲೀಸ್‌ ಸಿಬ್ಬಂದಿಗೆ ಆಕ್ಸಿಜನ್‌ ಸಿಲಿಂಡರ್‌ ಬಳಕೆ ಕುರಿತು ತರಬೇತಿ ನೀಡುವ ಮೂಲಕ ಕೇಂದ್ರಕ್ಕೆ ಚಾಲನೆ ನೀಡಿದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯದ ಹುಬ್ಬಳ್ಳಿ, ದಾವಣಗೆರೆ, ಮಂಗಳೂರು, ಹಾಸನ, ಕೋಲಾರ ಜಿಲ್ಲೆಗಳ ರೈಲು ನಿಲ್ದಾಣದಲ್ಲಿ ಸೂದ್‌ ಚಾರಿಟಿ ಫೌಂಡೇಷನ್‌ ವತಿಯಿಂದ ಕ್ಷಿಪ್ರ ಆಕ್ಸಿಜನ್‌ ಕೇಂದ್ರವನ್ನು ಆರಂಭಿಸಲಾಗಿದ್ದು, ಇದೀಗ ಬಳ್ಳಾರಿಯಲ್ಲೂ ಚಾಲನೆ ನೀಡಲಾಯಿತು.

ಕೇಂದ್ರದಲ್ಲಿ ಸದಾ 20 ಆಕ್ಸಿಜನ್‌ ಸಿಲಿಂಡರ್‌ಗಳು ಸಿದ್ಧವಿರಲಿದ್ದು, ಸಾರ್ವಜನಿಕರು ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ಪಡೆದುಕೊಂಡು ಪುನಃ ವಾಪಸ್‌ ನೀಡಬೇಕು ಎಂದವರು ತಿಳಿಸಿದರು. ಕ್ಷಿಪ್ರ ಆಕ್ಸಿಜನ್‌ ಕೇಂದ್ರವಿರುವ ರೈಲು ನಿಲ್ದಾಣದಿಂದ 80ರಿಂದ 100 ಕಿಲೋಮೀಟರ್‌ ವ್ಯಾಪ್ತಿಯಲ್ಲಿನ ಹಳ್ಳಿ, ನಗರ ಪ್ರದೇಶದಲ್ಲಿನ ಜನರು ಉಚಿತವಾಗಿ ಆಕ್ಸಿಜನ್‌ ಪಡೆಯಬಹುದಾಗಿದೆ.

ಆಕ್ಸಿಜನ್‌ ಅವಶ್ಯಕತೆ ಇರುವವರು ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು, ಅಗತ್ಯವಿರುವವರು 7069999961 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದವರು ವಿವರಿಸಿದರು. ಬಳ್ಳಾರಿಯ ರೈಲ್ವೆ ನಿಲ್ದಾಣದ ಕ್ಷಿಪ್ರ ಆಕ್ಸಿಜನ್‌ ಕೇಂದ್ರದಲ್ಲಿ 10 ಸಾವಿರ ಲೀಟರ್‌ ಮತ್ತು 7 ಸಾವಿರ ಲೀಟರ್‌ ಸಾಮರ್ಥ್ಯದ ಎರಡು ವಿಧದ ಒಟ್ಟು 20 ಸಿಲಿಂಡರ್‌ಗಳು ಕೇಂದ್ರದಲ್ಲಿ ಸದಾ ದಾಸ್ತಾನಿರಲಿದೆ.

ರೋಗಿಗೆ ಆಕ್ಸೀಜನ್‌ ಅಗತ್ಯವಿದೆ ಎಂದಾಗ ಕೇಂದ್ರದ ಫೋನ್‌ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಂಡು ಸಿಲಿಂಡರ್‌ನ್ನು ತೆಗೆದುಕೊಂಡು ಹೋಗಿ ವೈದ್ಯರ ಸಲಹೆ ಮೆರೆಗೆ ಆಕ್ಸಿಜನ್‌ ಬಳಕೆ ಮಾಡಬೇಕು. ಇಲ್ಲದಿದ್ದಲ್ಲಿ ತುರ್ತು ಪರಿಸ್ಥಿತಿ ಅವ ಧಿಯಲ್ಲಿ ರೈಲು ನಿಲ್ದಾಣದ ಜಿಆರ್‌ಪಿ ಪೊಲೀಸ್‌ ಸಿಬ್ಬಂದಿಗಳೇ ಆಕ್ಸಿಜನ್‌ ಸಿಲಿಂಡರ್‌ನ್ನು ತಂದು ವೈದ್ಯರ ಸೂಚನೆ ಮೇರೆಗೆ ನಿಮಿಷಕ್ಕೆ ಇಂತಿಷ್ಟು ಆಕ್ಸಿಜನ್‌ನ್ನು ನೀಡಿ ತೆರಳಲಿದ್ದಾರೆ. ಆದರೆ ಸಿಲಿಂಡರ್‌ನ್ನು ವಾಪಸ್‌ ಕೊಂಡೊಯ್ಯುವಾಗ ಆಲ್ಕೋಹಾಲ್‌ ಸ್ಯಾನಿಟೈಸರ್‌ ಬದಲಿಗೆ ನೀರು ಸಹಿತ ಸ್ಯಾನಿಟೈಸರ್‌ನ್ನು ಸಿಂಪಡಿಸಿ ನೀಡಬೇಕು ಎಂದವರು ತಿಳಿಸಿದರು.

ಸೋಂಕಿತರಿಗೆ ಮನೆಗಳಲ್ಲೇ ಆಕ್ಸಿಜನ್‌ ನೀಡುವಾಗ ಮನೆ ಬಾಗಿಲು ತೆರೆದಿರಬೇಕು. ಕಿಟಕಿ, ವೆಂಟಿಲೇಷನ್‌ ಸಹ ತೆರೆದಿರಬೇಕು ಎಂದವರು ವಿವರಿಸಿದರು. ಬಳಿಕ ಪೊಲೀಸ್‌ ಸಿಬ್ಬಂದಿಗಳಾದ ಕರಿಯಣ್ಣ ಸೇರಿ ಹಲವರಿಗೆ ಆಕ್ಸಿಜನ್‌ ಸಿಲಿಂಡರ್‌ ಬಳಕೆ ಕುರಿತು ತರಬೇತಿ ನೀಡಲಾಯಿತು. ಇದಕ್ಕೂ ಮುನ್ನ ರೈಲ್ವೆ ಪೊಲೀಸ್‌ ಇಲಾಖೆಯ ಕಲುºರ್ಗಿ ಡಿವೈಎಸ್‌ಪಿ ವೆಂಕನಗೌಡ ಪಾಟೀಲ್‌ ಮಾತನಾಡಿದರು.

ರಾಯಚೂರು ವಿಭಾಗದ ಸಿಪಿಐ ಜನಗೌಡ, ಫೌಂಡೇಷನ್‌ನ ಅಜಯ್‌ ಪ್ರತಾಪ್‌ ಸಿಂಗ್‌ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.