ಹತ್ತು ಸಾವಿರ ಸಸಿ ನೆಡುವ ಗುರಿ: ನಾಗೇಂದ್ರ
Team Udayavani, Jun 6, 2021, 8:54 PM IST
ಬಳ್ಳಾರಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಈ ವರ್ಷ 10 ಸಾವಿರ ಸಸಿಗಳನ್ನು ನೆಡುವ ಗುರಿ ಹಾಕಿಕೊಳ್ಳಲಾಗಿದ್ದು, ಆದ್ಯತೆ ಮೇರೆಗೆ 5 ಸಾವಿರ ಸಸಿಗಳನ್ನು ನೆಡಲಾಗುತ್ತದೆ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಹೇಳಿದರು.
ವಿಶ್ವ ಪರಿಸರದ ದಿನದ ಪ್ರಯುಕ್ತ ಜಿಲ್ಲಾಡಳಿತ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ ಆಶ್ರಯದಲ್ಲಿ ನಗರದ ವಾಲ್ಮೀಕಿ ಅಭಿವೃದ್ಧಿ ನಿಗಮದ ಎದುರುಗಡೆಯಿರುವ ಪಾರ್ಕ್ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ನಂತರ ಮಾತನಾಡಿದರು.
ನಾವು ಇಂದು ನೆಟ್ಟ ಗಿಡ ಮುಂದಿನ ಪೀಳಿಗೆಗೆ ಆಮ್ಲಜನಕ ನೀಡುವ ಕೆಲಸ ಮಾಡುತ್ತದೆ. ಕೊರಾನಾ ಸಮಯದಲ್ಲಿ ಆಕ್ಸಿಜನ್ಗಾಗಿ ಪರದಾಡಿದ ಘಟನೆ ನಡೆಯಿತು. ಮುಂದೆ ಇಂಥ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳಬೇಕು. ನಗರದ ಎಲ್ಲ ಪಾರ್ಕ್ಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲರೂ ಕೈಜೋಡಿಸಿ ಪ್ರತಿ ಮನೆಗಳ ಮುಂದೆ ಗಿಡ ಬೆಳೆಸಿ ಅದು ಮುಂದೆ ಹೆಮ್ಮರವಾಗಿ ಬೆಳೆದು ಎಲ್ಲ ಜನರಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳಿದರು.
ಮನೆಗೆ ಬಂದು ನೋಡುವೆ: ಅರಣ್ಯ ಇಲಾಖೆ ವತಿಯಿಂದ ವಾರ್ಡ್ನ ಸಾರ್ವಜನಿಕರಿಗೆ ಶಾಸಕ ನಾಗೇಂದ್ರ ಅವರು ಸಸಿಗಳನ್ನು ವಿತರಿಸಿದರು. ಕೇವಲ ಗಿಡ ನೆಡುವುದು ಒಂದು ದಿನಕ್ಕೆ ಸೀಮಿತವಾಗದೆ ಅದನ್ನು ಬೆಳೆಸಿ, ಕಾಪಾಡಿಕೊಂಡು ಹೋಗಬೇಕು. ಮುಂದೊಂದು ದಿನ ನಾನೇ ಸ್ವತಃ ನಿಮ್ಮ ಮನೆಗಳಿಗೆ ಬಂದು ನೀವು ನೆಟ್ಟ ಗಿಡಗಳನ್ನು ನೋಡುವೆ ಎಂದರು.
ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್ ಮಾತನಾಡಿ, ನಗರ ವ್ಯಾಪ್ತಿಯ ಶಾಲೆ-ಕಾಲೇಜು, ಪಾರ್ಕ್ ಮತ್ತು ಪಾಲಿಕೆಯ ಖಾಲಿ ಜಾಗದಲ್ಲಿ ಸಸಿಗಳನ್ನು ನೆಡಲಾಗುತ್ತದೆ. ಅರಣ್ಯ ಇಲಾಖೆಯ ಸಹಯೋಗದೊಂದಿಗೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಈ ವರ್ಷದಲ್ಲಿ 10 ಸಾವಿರ ಸಸಿಗಳನ್ನು ನೆಡುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಗಿಡಗಳು ಮುಂದಿನ ದಿನಮಾನಗಳಲ್ಲಿ ಹೆಮ್ಮರವಾಗಿ ಬೆಳೆದು ಹೆಚ್ಚಿನ ಆಕ್ಸಿಜನ್ ನೀಡುವ ಮೂಲಕ ಮುಂದಿನ ಪೀಳಿಗೆಗೆ ಉಸಿರಾಡಲು ಶುದ್ಧವಾದ ಗಾಳಿ ನೀಡಲಿ ಎಂದರು.
ಪರಿಸರ ಬೆಳೆಸುವುದರಿಂದ ಮುಂದಿನ ದಿನದಲ್ಲಿ ನಗರದಲ್ಲಿ ಸ್ವತ್ಛ ಮತ್ತು ಸುಂದರ ಪರಿಸರ ನಿರ್ಮಾಣವಾಗುತ್ತದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಸೈದುಲು ಅಡಾವತ್, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಚಳಕಾಪುರೆ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ವಾರ್ಡ್ನ ಸದಸ್ಯರು ಹಾಗೂ ಸಾರ್ವಜನಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್