ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಪಠಿಸಿ
ಮಹಾತ್ಮಗಾಂಧೀ ಜಿ ಹಾಗೂ ಡಾ| ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
Team Udayavani, Jan 27, 2021, 4:50 PM IST
ಹೊಸಪೇಟೆ: ವಿಶ್ವದಲ್ಲಿ ಸರ್ವ ಶ್ರೇಷ್ಠವಾದ ಸಂವಿಧಾನದ ಪೀಠಿಕೆಯನ್ನು ವಿದ್ಯಾರ್ಥಿಗಳು ನಿತ್ಯ ಪ್ರಾರ್ಥನೆಯಲ್ಲಿ ಪಠಿಸುವುದು
ಅಗತ್ಯವಾಗಿದೆ ಎಂದು ಉಪವಿಭಾಗಾಧಿ ಕಾರಿ ಸಿದ್ರಾಮೇಶ್ವರ ಮಠದ್ ಅಭಿಪ್ರಾಯ ಪಟ್ಟರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ 72ನೇ ಗಣರಾಜ್ಯೋತ್ಸವ ಧ್ವಜರೋಹಣ ನೆರವೇರಿಸಿ ಮಾತನಾಡಿದ ಅವರು, ವಿಶ್ವದಲ್ಲಿ ಭಾರತದ ಸಂವಿಧಾನ ಸರ್ವ ಶ್ರೇಷ್ಠ ಹಾಗೂ ಅತಿ ದೊಡ್ಡ ಲಿಖೀತ ಸಂವಿಧಾನವಾಗಿದೆ.
ಇಡೀ ಜಗತ್ತಿಗೆ ಪ್ರಜಾಪ್ರಭುತ್ವ ಮತ್ತು ಜತ್ಯಾತೀತತೆಯ ಮಹತ್ವವನ್ನು ಸಾರಿದೆ. ಸಂವಿಧಾನ ಹೃದಯದ ಭಾಗವಾಗಿರುವ ಸಂವಿಧಾನದ ಪಿಠಿಕೆಯನ್ನು ವಿದ್ಯಾರ್ಥಿಗಳು ನಿತ್ಯ ಪ್ರಾರ್ಥನೆಯಲ್ಲಿ ಪಠಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಆರಂಭದಲ್ಲಿ ಡಾ| ಅಂಬೇಡ್ಕರ್ ಹಾಗೂ ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಪೊಲೀಸ್, ಹೋಮ್ ಗಾರ್ಡ್, ಎನ್ ಸಿಸಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ತಂಡಗಳಿಂದ ಧ್ವಜವಂದನೆ ನಡೆಯಿತು. ಜಿಪಂ ಸದಸ್ಯೆ ಜಯಕುಮಾರಿ ಈಶ್ವರ್, ತಾಪಂ ಅಧ್ಯಕ್ಷ ನಾಗವೇಣಿ ಬಸವರಾಜ, ಹುಡಾ ಅಧ್ಯಕ್ಷ ಅಶೋಕ್ ಜೀರೆ, ತಹಶೀಲ್ದಾರ ಎಚ್. ವಿಶ್ವನಾಥ, ಪೌರಾಯುಕ್ತ ಮನ್ಸೂರು ಅಲಿ, ಕ್ಷೇತ್ರ ಶಿಕ್ಷಣಾಧಿ ಕಾರಿ ಪಿ.ಸುನಂದ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ