ಇಂದಿನಿಂದ ಲಾಕ್‌ ಡೌನ್‌ ಸಡಿಲ


Team Udayavani, Jun 14, 2021, 10:10 PM IST

14-14

„ವೆಂಕೋಬಿ ಸಂಗನಕಲ್ಲು

ಬಳ್ಳಾರಿ: ಮಹಮ್ಮಾರಿ ಕೋವಿಡ್‌ ಸೋಂಕು ಎರಡನೇ ಅಲೆ ನಿಯಂತ್ರಿಸಲು ಕಳೆದ ಒಂದೂವರೆ ತಿಂಗಳಿಂದ ರಾಜ್ಯ ಸರ್ಕಾರ ವಿಧಿ ಸಿದ್ದ ಲಾಕ್‌ಡೌನ್‌ ಮುಕ್ತಾಯವಾಗಿದ್ದು, ಸೋಮವಾರ ಬೆಳಗಿನ ಜಾವ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮೊದಲ ಅನ್‌ಲಾಕ್‌ 1 ಆರಂಭವಾಗಲಿದೆ.

ಉತ್ಪಾದನೆ ಘಟಕಗಳು, ಕೈಗಾರಿಕೆಗಳ ಚಾಲನೆಗೆ, ಪ್ರಯಾಣಿಕ ವಾಹನಗಳ ಸಂಚಾರಕ್ಕೆ ಶರತ್ತುಬದ್ಧ ಅವಕಾಶ ಕಲ್ಪಿಸಲಾಗಿದೆ. ಕೋವಿಡ್‌ ಸೋಂಕು ಎರಡನೇ ಅಲೆ ವ್ಯಾಪಕವಾಗಿ ಹಬ್ಬಿದ್ದು, ಹೆಚ್ಚು ಸಾವು-ನೋವುಗಳು ಸಂಭವಿಸಿದೆ. ನಗರ ಸೇರಿ ಗ್ರಾಮೀಣ ಭಾಗದ ಜನರು ಸೋಂಕಿಗೆ ತತ್ತರಿಸಿದ್ದಾರೆ. ಮೊದಲ ಅವಧಿ  ಯಲ್ಲಿ ಒಂದು ವರ್ಷದಲ್ಲಿ 597 ಜನರು ಸೋಂಕಿಗೆ ಬಲಿಯಾದರೆ, ಎರಡನೇ ಅಲೆಯಲ್ಲಿ ಕೇವಲ ಎರಡೂರು ತಿಂಗಳಲ್ಲಿ 860 ಜನರು ಬಲಿಯಾಗಿದ್ದು, ಸುಮಾರು 28 ಸಾವಿರಕ್ಕೂ ಅಧಿ ಕ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಗ್ರಾಮೀಣ ಭಾಗದಲ್ಲಿ ಹೆಚ್ಚು ಆವರಿಸಿದ್ದು, ಹಲವರು ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕನ್ನು ನಿಯಂತ್ರಿಸಲು ಕಳೆದ ಮೇ 10 ರಿಂದ 24ರ ವರೆಗೆ ರಾಜ್ಯ ಸರ್ಕಾರ ಲಾಕ್‌ಡೌನ್‌ ಘೋಷಿಸಿದರೂ ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಮೇ 19ರಿಂದ 24 ಐದು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ಘೋಷಣೆ ಮಾಡಿದರು.

ಬಳಿಕ ಮೇ 24, 25ರಂದು ಎರಡು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ನಂತರ ಮೇ 31ರವರೆಗೆ ಹೀಗೆ ಜೂನ್‌ 14ರ ಬೆಳಗ್ಗೆ 6 ಗಂಟೆವರೆಗೆ ಸಂಪೂರ್ಣ ಲಾಕ್‌ಡೌನ್‌ ವಿ ಧಿಸಿತ್ತು. ಪರಿಣಾಮ ಉಭಯ ಜಿಲ್ಲೆಗಳಲ್ಲಿ ನಿಧಾನವಾಗಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಇದೀಗ ಪಾಸಿಟಿವಿಟಿ ಬಹುತೇಕ ಕಡಿಮೆಯಾಗಿದ್ದು, ಸಕ್ರಿಯ ಪ್ರಕರಣಗಳು ಸಹ ಕಡಿಮೆಯಾಗುತ್ತಿವೆ. ಇದರಿಂದ ಎರಡನೇ ಅಲೆಗೆ ವಿಧಿ ಸಿದ್ದ ಲಾಕ್‌ಡೌನ್‌ನ ಮೊದಲ ಅನ್‌ಲಾಕ್‌ 1 ಜೂ. 14ರಂದು ಸೋಮವಾರ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಓಪನ್‌ ಆಗಲಿದೆ.

ಏನೇನು ಇರಲಿವೆ: ಅನ್‌ಲಾಕ್‌ 1ರಲ್ಲಿ ಉತ್ಪಾದನೆ ಘಟಕ, ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳ ಚಾಲನೆಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ ಕೇವಲ ಶೇ. 50ರಷ್ಟು ಸಿಬ್ಬಂದಿ ಬಳಸಿಕೊಳ್ಳಬೇಕು ಎಂದು ಸೂಚಿಸಿದೆ. ಅದೇ ರೀತಿ ಗಾರ್ಮೆಂಟ್ಸ್‌ ಉತ್ಪಾದನಾ ಘಕಟಗಳು ಕೇವಲ ಶೇ. 30ರಷ್ಟು ಸಿಬ್ಬಂದಿಗಳನ್ನು ಬಳಸಿಕೊಂಡು ಘಟಕಗಳಿಗೆ ಚಾಲನೆ ನೀಡಬಹುದಾಗಿದೆ.

ಆಹಾರ, ದಿನಸಿ, ಹಣ್ಣುಗಳು ಮತ್ತು ವೆಜಿಟೇಬಲ್‌ಗ‌ಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌ಗಳು ಮತ್ತು ಪ್ರಾಣಿಗಳ ಮೇವಿನೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ರಸ್ತೆ, ಬೀದಿಬದಿ ವ್ಯಾಪಾರಿಗಳಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಗಳಿಗೂ ಸಹ ಅನುಮತಿಸಲಾಗಿದೆ. ಮದ್ಯದಂಗಡಿಗಳು ಮತ್ತು ಮಳಿಗೆಗಳು, ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅನುಮತಿಸಿ. ಎಲ್ಲ ವಸ್ತುಗಳ ಮನೆ ವಿತರಣೆಯು 24/7 ಅನ್ನು ತಮ್ಮ ಮನೆಗಳ ಹೊರಗಿನ ನಿವಾಸಿಗಳ ಚಲನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಅನುಮತಿ ನೀಡಲಾಗಿದೆ.

ಅಲ್ಲದೇ, ಕಟ್ಟಡ ಸೇರಿ ಎಲ್ಲ ನಿರ್ಮಾಣ ಚಟುವಟಿಕೆಗಳು/ದುರಸ್ತಿ ಕಾರ್ಯಗಳು ಅಂಗಡಿಗಳು/ಸಂಸ್ಥೆಗಳು ಸೇರಿದಂತೆ ನಿರ್ಮಾಣ ಮೆಟೀರಿಯಲ್‌, ವಿಶೇಷವಾಗಿ ಸಿಮೆಂಟ್‌ ಮತ್ತು ಸ್ಟೀಲ್‌ ಘಟಕಕ್ಕೆ ಅನುಮತಿ ನೀಡಲಾಗಿದ್ದು, ಅಗತ್ಯ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಉದ್ಯಾನವನಕ್ಕೆ ಅವಕಾಶ: ಅನ್‌ಲಾಕ್‌ 1ರಲ್ಲಿ ಉದ್ಯಾನವನಗಳಿಗೂ ಬೆಳಗಿನ ಜಾವ 5 ಗಂಟೆಯಿಂದ 10 ಗಂಟೆವರೆಗೆ ತೆರೆಯಲು ಅವಕಾಶ ಕಲ್ಪಿಸಿದೆ. ಈ ಅವ ಧಿಯಲ್ಲಿ ವಾಯುವಿವಾರ, ವಾಕಿಂಗ್‌, ಜಾಗಿಂಗ್‌ ಮಾಡುವವರಿಗೆ ಅನುಮತಿ ನೀಡಲಾಗಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳನ್ನು ನಿಷೇಧಿ  ಸಿದ್ದು ನಡೆಸುವಂತಿಲ್ಲ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.