ಲಾಕ್‌ಡೌನ್‌ ಸಡಿಲ; ಎಲ್ಲೆಲ್ಲೂವಾಹನ-ಜನ


Team Udayavani, Jun 15, 2021, 9:40 PM IST

15-12

ಬಳ್ಳಾರಿ: ಕಳೆದ ಒಂದೂವರೆ ತಿಂಗಳಿಂದ ವಿ ಧಿಸಲಾಗಿದ್ದ ಲಾಕ್‌ಡೌನ್‌ ತೆರವಾಗಿ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಅನ್‌ಲಾಕ್‌ 1 ಜಾರಿಯಾಗಿದ್ದು, ಬಳ್ಳಾರಿ ನಗರ ಸೇರಿ ಜಿಲ್ಲೆಯಾದ್ಯಂತ ಸೋಮವಾರ ಜನಜಂಗುಳಿ, ವಾಹನದಟ್ಟಣೆ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದ್ದು, ಜೀವಕಳೆ ಬಂದಂತಾಯಿತು.

ಕೋವಿಡ್‌ ಸೋಂಕು ನಿಯಂತ್ರಿಸಲು ವಿಧಿಸಲಾಗಿದ್ದ ಲಾಕ್‌ಡೌನ್‌ ನಿಮಿತ್ತ ಕಳೆದ ಒಂದೂವರೆ ತಿಂಗಳಿಂದ ಬಿಕೋ ಎನ್ನುತ್ತಿದ್ದ ನಗರದ ಪ್ರಮುಖ ರಸ್ತೆಗಳು, ಸೋಮವಾರದಿಂದ ಮಧ್ಯಾಹ್ನದವರೆಗೆ ಅನ್‌ ಲಾಕ್‌ ಆದ ಹಿನ್ನೆಲೆಯಲ್ಲಿ ರಸ್ತೆಗಳು ವಾಹನದಟ್ಟಣೆ, ಜನಜಂಗುಳಿಯಿಂದ ಕಂಗೊಳಿಸಿದವು.

ಹಲವು ವಾಣಿಜ್ಯ ಮಳಿಗೆಗಳುಳ್ಳ ಬೆಂಗಳೂರು ರಸ್ತೆ, ಕಾರ್‌ ಸ್ಟ್ರಿಟ್‌, ತೇರು ಬೀದಿ ರಸ್ತೆ, ಕೌಲ್‌ಬಜಾರ್‌ ಪ್ರಮುಖ ರಸ್ತೆಗಳು ಬೆಳಗ್ಗೆ 6 ಗಂಟೆಯಿಂದಲೇ ವಾಹನ ದಟ್ಟಣೆಯಿಂದ ಗಿಜಿಗುಡುತ್ತಿದ್ದವು. ಬೆಳಗ್ಗೆ 6 ಗಂಟೆಯಿಂದಲೇ ದಿನಸಿ, ಕಿರಾಣಿ ಅಂಗಡಿಗಳು, ಮಾಂಸದ ಅಂಗಡಿಗಳು, ಬೇಕರಿಗಳು ತೆರೆದಿದ್ದವು. ಹೋಟೆಲ್‌ಗ‌ಳು ಕೇವಲ ಪಾರ್ಸೆಲ್‌ ಸೇವೆ ಮುಂದುವರೆಸಿದ್ದವು.

ಕಟ್ಟಡ ನಿರ್ಮಾಣದ ಸಾಮಗ್ರಿಗಳು, ಹಾರ್ಡ್‌ವೇರ್‌ ಮಳಿಗೆಗಳು ತೆರೆದಿದ್ದು, ಗ್ರಾಹಕರಿಂದ ತುಂಬಿ ತುಳುಕುತ್ತಿದ್ದವು. ಕೃಷಿ ಚಟುವಟಿಕೆಗೆ ಸಂಬಂಧಿ ಸಿದ ಬೀಜ, ರಸಗೊಬ್ಬರ ಸೇರಿ ಇನ್ನಿತರೆ ಪರಿಕರಗಳ ಮಳಿಗೆಗಳು ಸಹ ತೆರೆದು ರೈತರಿಗೆ ಅಗತ್ಯ ಸೇವೆ ನೀಡುವಲ್ಲಿ ನಿರತವಾಗಿದ್ದವು. ಇನ್ನು ಎಂದಿನಂತೆ ದಿನಸಿ ಮಳಿಗೆಗಳು, ಹಾಲು, ಹಣ್ಣುಗಳು, ರಸ್ತೆಬದಿ ವ್ಯಾಪಾರಸ್ಥರ, ತಳ್ಳುಬಂಡಿಗಳ ವಹಿವಾಟು ಎಂದಿನಂತೆ ಮುಂದುವರೆಯಿತು.

ಲಾಕ್‌ ಡೌನ್‌ ಉಲ್ಲಂಘನೆ: ಲಾಕ್‌ಡೌನ್‌ ಅನ್‌ ಲಾಕ್‌ ಆಗಿ ಅಗತ್ಯ ಸೇವೆಗಳ ಮಳಿಗೆಗಳಿಗಷ್ಟೇ ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದೆ. ಇದನ್ನೇ ಅವಕಾಶವನ್ನಾಗಿಸಿಕೊಂಡ ತೆರೆಯಲು ನಿರ್ಬಂಧಿ ತ ಮಳಿಗೆಗಳಾದ ಬಟ್ಟೆ, ಜವಳಿ, ಮೊಬೈಲ್‌ ಸೇರಿ ಇತರೆ ಎಲೆಕ್ಟ್ರಾನಿಕ್‌ ವಸ್ತುಗಳ ಮಳಿಗೆಗಳು ಸಹ ಬಾಗಿಲನ್ನು ಅರ್ಧಕ್ಕೆ ತೆಗೆದು ವಹಿವಾಟು ನಡೆಸಿ ಲಾಕ್‌ಡೌನ್‌ ನಿಯಮ ಉಲ್ಲಂಘನೆಯಾಗಿರುವುದು ಕಂಡುಬಂತು.

ನಗರದ ಬೆಂಗಳೂರು ರಸ್ತೆಯಲ್ಲಿನ ಬಟ್ಟೆ, ರೆಡಿಮೇಡ್‌ ಗಾರ್ಮೆಂಟ್ಸ್‌ ಶಾಪ್‌ಗ್ಳು ಕದ್ದು ಮುಚ್ಚಿ ವಹಿವಾಟು ನಡೆಸುತ್ತಿದ್ದವು. ಕೆಲವೊಂದು ಮಳಿಗೆಗಳು ಅರ್ಧಕ್ಕೆ ಬಾಗಿಲು ತೆರೆದಿದ್ದರೆ, ಇನ್ನು ಕೆಲ ಮಳಿಗೆಗಳ ಮುಂದೆ ಸಿಬ್ಬಂದಿ, ಮಾಲೀಕರು ನಿಂತು ಬಂದ ಗ್ರಾಹಕರನ್ನು ಸದ್ದಿಲ್ಲದೇ ಬಾಗಿಲು ತೆರೆದು ಒಳಗೆ ಕಳುಹಿಸಿ ಬಾಗಿಲು ಹಾಕಿ ವ್ಯಾಪಾರ ನಡೆಸುತ್ತಿದ್ದರು. ಪೊಲೀಸರು ಬರುತ್ತಿದ್ದಂತೆ ಬಾಗಿಲು ಹಾಕಿ ಮಾಯವಾಗುತ್ತಿದ್ದ ದೃಶ್ಯ ಕಂಡುಬಂತು.

ಕಾಣದ ಸಾಮಾಜಿಕ ಅಂತರ: ಅನ್‌ಲಾಕ್‌ ಆದ ಹಿನ್ನೆಲೆಯಲ್ಲಿ ತೆರೆಯಲಾದ ಮಳಿಗೆಗಳ ಮುಂದೆ ಗುಂಪುಗುಂಪಾಗಿ ನಿಂತಿದ್ದ ಗ್ರಾಹಕರ ನಡುವೆ ಸಾಮಾಜಿಕ ಅಂತರ ಮಾಯವಾಗಿತ್ತು. ಕೋವಿಡ್‌ ಮೊದಲ ಅವಧಿ ಯಂತೆ ಅಂಗಡಿಗಳ ಮುಂದೆ ಗ್ರಾಹಕರು ನಿಲ್ಲಲು ವೃತ್ತಗಳನ್ನು ಹಾಕಲಾಗಿತ್ತಾದರೂ, ಯಾರೊಬ್ಬರೂ ಪಾಲಿಸುತ್ತಿರಲಿಲ್ಲ. ಈ ಕುರಿತು ಮಳಿಗೆಯವರು ಸಹ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಪಾಡುವಂತೆ ಸೂಚನೆ ನೀಡುತ್ತಿರಲಿಲ್ಲ. ಮುಖ್ಯವಾಗಿ ಗ್ರಾಹಕರಿಗೆ ಸ್ಯಾನಿಟೈಸರ್‌ ಸಹ ವ್ಯವಸ್ಥೆ ಮಾಡಿರಲಿಲ್ಲ. ಇವ್ಯಾವನ್ನೂ ಗಮನಿಸದ ಗ್ರಾಹಕರು ಸಹ ಗುಂಪಲ್ಲೇ ನಿಂತು ಕೂಗಿ ಕೂಗಿ ತಮಗೆ ಬೇಕಾದ ವಸ್ತುಗಳನ್ನು ಖರೀದಿಸಿ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.