ಆಕ್ಸಿಜನ್‌ ಬ್ಯಾಂಕ್‌-ಸ್ಯಾನಿಟೈಸರ್‌ ಟ್ಯಾಂಕ್‌ಗೆ ಚಾಲನೆ


Team Udayavani, Jun 15, 2021, 9:45 PM IST

15-12

ಬಳ್ಳಾರಿ: ಕೋವಿಡ್‌ ಸೋಂಕಿತರು ಎದುರಿಸುತ್ತಿರುವ ಆಕ್ಸಿಜನ್‌ ಕೊರತೆಯನ್ನು ನೀಗಿಸಲು ಕಾಂಗ್ರೆಸ್‌ನ ರಾಜ್ಯಸಭೆ ಸದಸ್ಯ ಡಾ| ಸೈಯದ್‌ ನಾಸೀರ್‌ ಹುಸೇನ್‌ ಅವರು ಉಚಿತವಾಗಿ ತೆರೆದಿರುವ ಆಕ್ಸಿಜನ್‌ ಬ್ಯಾಂಕ್‌ ಮತ್ತು ನಗರದಲ್ಲಿ ಸಿಂಪಡಿಸಲು ವ್ಯವಸ್ಥೆ ಮಾಡಿರುವ ಸ್ಯಾನಿಟೈಸರ್‌ ಟ್ಯಾಂಕ್‌ನ್ನು ಕಾಂಗ್ರೆಸ್‌ನ ಹಿರಿಯ ಮುಖಂಡ, ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ ಅವರು ಶಾದಿಮಹಲ್‌ ಸಭಾಂಗಣದಲ್ಲಿ ಸೋಮವಾರ ಚಾಲನೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಡಾ| ಸೈಯದ್‌ ನಾಸೀರ್‌ ಹುಸೇನ್‌ ಅವರು, ಬಳ್ಳಾರಿಯಲ್ಲಿ ವ್ಯಾಪಕವಾಗಿ ಹರಡಿದ್ದ ಕೋವಿಡ್‌ ಸೋಂಕು ಸದ್ಯ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಹಾಗಂತ ಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಮೊದಲನೇ ಅವಧಿಗಿಂತ ಎರಡನೇ ಅಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚು ಸಾವು-ನೋವು ಸಂಭವಿಸಿವೆ. ಸಕಾಲಕ್ಕೆ ಆಕ್ಸಿಜನ್‌ ಸಿಗದೆ ಸಾಕಷ್ಟು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್‌ ಸಾವಿನಲ್ಲಿ ಬಳ್ಳಾರಿ ಜಿಲ್ಲೆ ಎರಡನೇ ಸ್ಥಾನದಲ್ಲಿತ್ತು.

ಇದೀಗ ಮೂರನೇ ಅಲೆ ಬರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮುಂದೆಯೂ ಆಕ್ಸಿಜನ್‌ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಈ ಆಕ್ಸಿಜನ್‌ ಬ್ಯಾಂಕ್‌ ತೆರೆಯಲಾಗಿದೆ. ಇದಕ್ಕಾಗಿ ಒಂದು ಕಾನ್ಸಂಟ್ರೇಟ್‌, ಜಂಬೊ ಸಿಲಿಂಡರ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಇಬ್ಬರು ತಂತ್ರಜ್ಞರುಳ್ಳ ತಾಂತ್ರಿಕ ತಂಡ ಇದನ್ನು ನಿರ್ವಹಿಸಲಿದ್ದಾರೆ.

ಕೋವಿಡ್‌ ಸೋಂಕು ಸಾರ್ವಜನಿಕವಾಗಿ ಹಬ್ಬದಂತೆ ಸ್ಯಾನಿಟೈಸರ್‌ ಸಿಂಪಡಿಸಲು ಒಂದು ಸ್ಯಾನಿಟೈಸರ್‌ ಟ್ಯಾಂಕರ್‌ನ್ನು ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್‌ ಮತ್ತು ಸ್ಯಾನಿಟೈಸರ್‌ ಸಾರ್ವಜನಿಕರಿಗೆ ಉಚಿತವಾಗಿ ಲಭಿಸಲಿದ್ದು, 9888114888 ಸಂಖ್ಯೆಗೆ ಕರೆ ಮಾಡಿದಲ್ಲಿ ನಮ್ಮ ತಂಡದವರು ತಂದು ನಿರ್ವಹಿಸಲಿದ್ದಾರೆ ಎಂದ ಅವರು, ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮುಖಂಡರ ಸಲಹೆ, ಸೂಚನೆಗಳ ಮೇರೆಗೆ ಈ ಆಕ್ಸಿಜನ್‌ ಬ್ಯಾಂಕ್‌ ತೆರೆದು, ಸ್ಯಾನಿಟೈಸರ್‌ ಟ್ಯಾಂಕ್‌ ವ್ಯವಸ್ಥೆ ಮಾಡಲಾಗಿದೆ ಎಂದವರು ವಿವರಿಸಿದರು.

ನಗರದ 39 ವಾರ್ಡ್‌ಗಳಿಗೂ ನೂತನ ಪಾಲಿಕೆ ಸದಸ್ಯರ ನೆರವಿನಿಂದ 3.60 ಲಕ್ಷ ಕೆಜಿಯಷ್ಟು 60 ಸಾವಿರ ತರಕಾರಿ ಕಿಟ್‌ಗಳನ್ನು ಬಡಜನರಿಗೆ ವಿತರಿಸಲಾಗಿದೆ. ಪ್ರತಿದಿನ ಸುಮಾರು 2 ಸಾವಿರಕ್ಕೂ ಹೆಚ್ಚು ಊಟದ ಪಾಕೇಟ್‌ಗಳನ್ನು ವಿತರಿಸಲಾಗಿದೆ ಎಂದವರು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ, ನಗರ ಜಿಲ್ಲಾಧ್ಯಕ್ಷ ಜಿ.ಎಸ್‌. ಮಹಮ್ಮದ್‌ ರμàಕ್‌, ಜಿಪಂ ಸದಸ್ಯ ಮುಂಡ್ರಿಗಿ ನಾಗರಾಜ್‌, ಜೆ.ಎಸ್‌. ಆಂಜನೇಯಲು ಮಾತನಾಡಿದರು. ಬುಡಾ ಮಾಜಿ ಅಧ್ಯಕ್ಷರಾದ ನಿರಂಜನ ನಾಯ್ಡು, ಹುಮಾಯೂನ್‌ ಖಾನ್‌, ಪಕ್ಷದ ಮುಖಂಡರಾದ ಅಸುಂಡಿ ನಾಗರಾಜಗೌಡ, ಕಲ್ಲುಕಂಬ ಪಂಪಾಪತಿ, ಅಯಾಜ್‌ ಅಹಮ್ಮದ್‌, ಅಸುಂಡಿ ವನ್ನೂರಪ್ಪ, ವೆಂಕಟೇಶ್‌ ಹೆಗಡೆ, ಯತೀಂದ್ರಗೌಡ, ಅರುಣ್‌ ಕುಮಾರ್‌, ಎಲ್‌. ಮಾರೆಣ್ಣ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.