ಎಚ್‌. ವಿಶ್ವನಾಥ್‌ ಪಕ್ಷ ಬಿಡಬಾರದು: ಈಶ್ವರಪ್ಪ


Team Udayavani, Jun 20, 2021, 8:36 PM IST

20-13

ಬಳ್ಳಾರಿ: ಎಚ್‌. ವಿಶ್ವನಾಥ್‌ ಅವರು ಬಿಜೆಪಿಯವರಲ್ವಾ, ಅವರು ಬಿಜೆಪಿಯಲ್ಲಿ ಇರುವುದಕ್ಕಾಗಿಯೇ ಎಂಎಲ್‌ಸಿ ಆಗಿದ್ದಾರೆ ಎನ್ನುವ ಮೂಲಕ ಎಂಎಲ್‌ಸಿ ಭಿಕ್ಷೆಯಲ್ಲ ಎಂದು ಹೇಳಿಕೆ ನೀಡಿರುವ ಎಚ್‌. ವಿಶ್ವನಾಥ್‌ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಲ್‌ಸಿ ಎಚ್‌.ವಿಶ್ವನಾಥ್‌ ಸೇರಿದಂತೆ 17 ಶಾಸಕರು ಬಿಜೆಪಿಗೆ ಬಂದಿದ್ದಕ್ಕೆ ರಾಜ್ಯದಲ್ಲಿ ಸರ್ಕಾರ ರಚಿಸಲು ಸಾಧ್ಯವಾಯಿತು. ಅವರ ಅಸಮಾಧಾನ ಏನೇ ಇದ್ದರೂ ಅದನ್ನು ಪಕ್ಷದಲ್ಲಿ ಬಗೆಹರಿಸಿಕೊಳ್ಳಬಹುದು. ಬಿಜೆಪಿ ತೊರೆಯುವುದು ಬೇಡ. ವೈಯಕ್ತಿಕವಾಗಿ ವಿಶ್ವನಾಥ್‌ ಅವರನ್ನು ಭೇಟಿಯಾಗಿಲ್ಲ. ಪಕ್ಷ ಹೇಳಿದರೆ ಭೇಟಿಯಾಗುವೆ ಎಂದು ತಿಳಿಸಿದರು.

ರಾಜ್ಯಕ್ಕೆ ಭೇಟಿ ನೀಡಿದ್ದ ಅರುಣ್‌ ಸಿಂಗ್‌ ಅವರ ಮುಂದೆ ಅಸಮಾಧಾನ ಸೇರಿದಂತೆ ಹಲವು ವಿಷಯ ಚರ್ಚೆಯಾಗಿದೆ. ಎಲ್ಲ ಸಮಸ್ಯೆಗಳನ್ನು ಆಲಿಸಿದ ಅರುಣ್‌ಸಿಂಗ್‌ ಅವರು, ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರಲಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಆದರೂ ಮತ್ತೆ ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ಮಾತನಾಡುವುದು ಸರಿಯಲ್ಲ. ಹಾಗೆ ಮಾತನಾಡಿದರೆ ಹೈಕಮಾಂಡ್‌ ಶಿಸ್ತುಕ್ರಮ ತೆಗೆದುಕೊಳ್ಳಲಿದೆ. ಪಕ್ಷದಲ್ಲಿ ಇಷ್ಟು ದಿನ ಅಸಮಾಧಾನ ಹೊರ ಹಾಕಿರೋದು ಸಾಕು. ಯಾರು ಯಾರ ವಿರುದ್ಧ ದೂರು ಕೋಡೋದು ಬೇಡ. ವಿಶ್ವನಾಥ್‌, ರೇಣುಕಾಚಾರ್ಯ, ಅರವಿಂದ ಬೆಲ್ಲದ್‌ ಯಾರೂ ಕೂಡಾ ಬಿಜೆಪಿ ಬಿಡಲ್ಲ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಕುರಿತು ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬ್ರಹ್ಮ ಬಂದರೂ ಕಾಂಗ್ರೆಸ್‌ ಅ ಧಿಕಾರಕ್ಕೆ ಬರಲ್ಲ. ಅಲ್ಲಿ ಒಮ್ಮತವಿಲ್ಲ. ಅಷ್ಟಕ್ಕೂ ಕಾಂಗ್ರೆಸ್‌ನಲ್ಲಿ ಬಿ ಫಾರಂ ಕೊಡೋದು ಜಮೀರೋ ಅಥವಾ ಡಿಕೆಶಿನೋ, ಸಿದ್ದರಾಮಯ್ಯನವರೋ ತಿಳಿಯದಾಗಿದೆ ಎಂದು ಲೇವಡಿ ಮಾಡಿದರು.

ಪೋನ್‌ ಟ್ಯಾಪಿಂಗ್‌ ಬಗ್ಗೆ ಗೊಂದಲ ಬೇಡ. ತನಿಖೆ ಅದೇಶ ಮಾಡಲಾಗಿದೆ ಎಂದರು. ಇದಕ್ಕೂ ಮುನ್ನ ಈಶ್ವರಪ್ಪನವರು ಕುಟುಂಬ ಸಮೇತ ನಗರದ ಸಣ್ಣ ಮಾರುಕಟ್ಟೆ ಬಳಿಯ ಆರಾಧ್ಯ ದೇವತೆ ಚೌಡೇಶ್ವರಿ ದೇವಸ್ಥಾನದ ಶಿಲಾನ್ಯಾಸ ಪೂಜೆ ನೆರವೇರಿಸಿದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.