ಟಿ.ಬಿ.ಡ್ಯಾಂ ಭರ್ತಿಗೆ 8 ಅಡಿ ಬಾಕಿ
Team Udayavani, Jul 25, 2021, 6:18 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಜಲಾಶಯದ ಒಳ ಹರಿವು 1ಲಕ್ಷ 20 ಸಾವಿರ ಕ್ಯೂಸೆಕ್ ದಾಟಿದ್ದು, ಡ್ಯಾಂನಿಂದ ನದಿಗೆ ಹೆಚ್ಚುವರಿ ನೀರು ಹರಿಬಿಡುವ ಹಿನ್ನೆಲೆಯಲ್ಲಿ ನದಿಪಾತ್ರದ ಜನ-ಜಾನುವಾರುಗಳು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ತುಂಗಭದ್ರಾ ಮಂಡಳಿ ಸೂಚಿಸಿದೆ. ಜಲಾಶಯದ ಒಳಹರಿವು 1 ಲಕ್ಷದ 20 ಸಾವಿರದ 411 ಕ್ಯೂಸೆಕ್ಗೆ ಏರಿಕೆಯಾಗಿದೆ.
ಜಲಾಶಯದಲ್ಲಿ 75 ಟಿಎಂಸಿ ನೀರು ಸಂಗ್ರಹವಾಗಿದೆ. ಜು. 25ಕ್ಕೆ ಒಳ ಹರಿವು 1ಲಕ್ಷದ 50 ಸಾವಿರ ಕ್ಯೂಸೆಕ್ ದಾಟುವ ಸಾಧ್ಯತೆ ಇದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 100.855 ಟಿಎಂಸಿ ಇದೆ. ಭಾರೀ ಪ್ರಮಾಣದಲ್ಲಿ ನೀರು ಡ್ಯಾಂಗೆ ಹರಿದು ಬರುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು. 25ರಂದು ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಮಂಡಳಿ ಅಧಿ ಕಾರಿಗಳು ಸಂಬಂಧಿ ಸಿದ ಜಿಲ್ಲಾಡಳಿತಗಳಿಗೆ ಸಂದೇಶ ರವಾನಿಸಿದ್ದಾರೆ.
ಜಲಾಶಯ ಭರ್ತಿಯಾಗಲು ಇನ್ನು 8 ಅಡಿ ಮಾತ್ರ ಬಾಕಿ ಇದೆ. ಸದ್ಯ ಜಲಾಶಯಕ್ಕೆ 1,20,411 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಸೆಂಟ್ರಲ್ ವಾಟರ್ ಕಮಿಷನ್ ಹವಾಮಾನದ ಬಗ್ಗೆ ತಿಳಿಸಿದ್ದು, ಶಿವಮೊಗ್ಗದಿಂದ ನದಿಗೆ 2,11,890 ಕ್ಯೂಸೆಕ್ ನೀರು ನದಿಯಲ್ಲಿ ಹರಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಆದರೆ, ತುಂಗಭದ್ರಾ ಜಲಾಶಯಕ್ಕೆ 1ಲಕ್ಷ 50 ಸಾವಿರದಿಂದ 1ಲಕ್ಷ 60 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದುಬರಬಹುದು ಎಂದು ಸ್ಥಳೀಯ ಅ ಧಿಕಾರಿಗಳು ಅಂದಾಜಿಸಿದ್ದಾರೆ.
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವ ಹಿನ್ನೆಲೆಯಲ್ಲಿ ಜು. 25ರಂದು ಯಾವುದೇ ಸಂದರ್ಭದಲ್ಲಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಹಾಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಮಂಡಳಿ ತಿಳಿಸಿದೆ. ತುಂಗಭದ್ರಾ ಜಲಾಶಯ ರಾಜ್ಯದ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಿಗೆ ನೀರು ಒದಗಿಸುತ್ತದೆ.
ಇನ್ನೂ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಕೂಡ ನೀರು ಪಡೆಯುತ್ತವೆ. ಈಗ ಒಳ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಜಲಾಶಯದ ಗೇಟ್ ಗಳನ್ನು ತೆರೆದು ನದಿಗೆ ನೀರು ಹರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ