ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ
Team Udayavani, Jul 26, 2021, 6:25 PM IST
ಹೊಸಪೇಟೆ: ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದ ತುಂಗಭದ್ರಾ ಡ್ಯಾಂ ಭಾನುವಾರ ಭರ್ತಿಯಾಗಿದೆ. ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಿರುವ ಕಾರಣ ಜಲಾಶಯದ 20 ಕ್ರಸ್ಟ್ಗೇಟ್ಗಳನ್ನು ತೆರೆದು 46200 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
ತುಂಗಭದ್ರಾ ಮಂಡಳಿ ಕಾರ್ಯದರ್ಶಿ ಜಿ. ನಾಗಮೋಹನ ಜಲಾಶಯದ ಕ್ರಸ್ಟ್ಗೇಟ್ ಗೆ ಪೂಜೆ ಸಲ್ಲಿಸಿ ನೀರು ಹರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದರು. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಕಳೆದ ನಾಲ್ಕೈದು ದಿನ ಸುರಿದ ಅಧಿಕ ಮಳೆಯಿಂದ ಜಲಾಶಯದ ಒಳ ಹರಿವು ಗಣನೀಯವಾಗಿ ಏರುತ್ತಿದೆ.
ಶನಿವಾರವೇ ಜಲಾಶಯದ ಒಳ ಹರಿವು 1.20 ಲಕ್ಷ ಕ್ಯೂಸೆಕ್ ದಾಟಿತ್ತು. ಡ್ಯಾಂನಿಂದ ನದಿಗೆ ಹೆಚ್ಚುವರಿ ನೀರು ಹರಿಸುವ ಸೂಚನೆ ನೀಡಿದ್ದ ತುಂಗಭದ್ರಾ ಮಂಡಳಿ ಮುಂಜಾಗ್ರತಾ ಕ್ರಮವಾಗಿ ನದಿಪಾತ್ರದ ಜನ-ಜಾನುವಾರುಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಚ್ಚರಿಕೆ ನೀಡಿತ್ತು. ಸದ್ಯ ಜಲಾಶಯಕ್ಕೆ 1.73 ಲಕ್ಷ ಕ್ಯೂಸೆಕ್ ಹರಿದು ಬರುತ್ತಿದ್ದು, 103 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಪ್ರಸ್ತುತ 83.277 ಟಿಎಂಸಿ ನೀರು ಸಂಗ್ರಹವಿದೆ.
ಗರಿಷ್ಠ ಮಟ್ಟ 1633 ಅಡಿಗಳು ಇದ್ದು, ಇಂದಿನ ಮಟ್ಟ 1628.15 ಅಡಿ. ಪ್ರವಾಸಿಗರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಬೋಟ್ ಸಂಚಾರ ನಿಷೇಧಿಸಲಾಗಿದೆ. ಹಂಪಿ ವಿರೂಪಾಕ್ಷೇಶ್ವರ ದೇವಾಲಯದ ಬಳಿ ಇರುವ ಸ್ನಾನಘಟ್ಟ, ಪುರಂದರ ಮಂಟಪ ಹಾಗೂ ಚಕ್ರತೀರ್ಥ ಕೋದಂಡರಾಮ ಸ್ವಾಮಿ ದೇವಾಲಯದ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ