ಸದಾ ಕಲಾವಿದರ ಜತೆಯಲ್ಲಿರುವೆ: ಮಂಜಮ್ಮಜೋಗ್ತಿ
Team Udayavani, Jul 28, 2021, 6:33 PM IST
ಬಳ್ಳಾರಿ: ಅಧಿಕಾರದಲ್ಲಿ ಇರಲಿ, ಇರದಿರಲಿ ಸದಾ ಕಲಾವಿದರ ಜತೆಯಲ್ಲೇ ಇರುವೆನು ಎಂದು ಪದ್ಮಶ್ರೀ ಪುರಸ್ಕೃತೆ ಮಾತೆ ಮಂಜಮ್ಮ ಜೋಗ್ತಿ ಹೇಳಿದರು. ನಗರದ ಕನ್ನಡ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಹಲವು ಪ್ರಕಾರದ ಕಲಾವಿದರ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಕಲಾವಿದರ ಹಲವು ಬೇಡಿಕೆಗಳುಳ್ಳ ಪತ್ರವನ್ನು ಸರ್ಕಾರದ ಪ್ರತಿನಿಧಿ ಯಾಗಿ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಒಕ್ಕೂಟದ ರಾಜ್ಯಾಧ್ಯಕ್ಷ ವಿಜಯಕುಮಾರ್ ಸೊನಾರೆ ಮಾತನಾಡಿ, 58 ವರ್ಷದ ಕಲಾವಿದರಿಗೆ ಮಾಸಾಶನ ನೀಡಲಾಗುತ್ತಿದ್ದು, ಇದನ್ನು 50 ವರ್ಷಕ್ಕೆ ಇಳಿಸಬೇಕು.
ಪ್ರತಿ ತಿಂಗಳ ನೀಡುವ 2000 ರೂ. ಮಾಸಾಶನವನ್ನು 5 ಸಾವಿರಕ್ಕೆ ಹೆಚ್ಚಿಸಬೇಕು. ರಾಜ್ಯೋತ್ಸವ, ಪದ್ಮಶ್ರೀಗಳಂತಹ ಪ್ರಶಸ್ತಿ ಪುರಸ್ಕೃತ ಕಲಾವಿದರಿಗೆ ತಿಂಗಳಿಗೆ 2 ಸಾವಿರ ರೂಗಳ ಬದಲಿಗೆ 10 ಸಾವಿರ ರೂಗಳ ಮಾಸಾಶನ ನೀಡಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಂಚಾಲಕರನ್ನು ನೇಮಕ ಮಾಡಲಾಯಿತು.
ಬಳ್ಳಾರಿ ತಾಲೂಕು ಗಂಗಣ್ಣ, ಕೂಡ್ಲಿಗಿ ಪ್ರಸಾದ್, ಕುರುಗೋಡು ಪಾರ್ವತೀಶ್, ವಿಜಯನಗರ ಅಂಜಲಿ ಬೆಳಗಲ್ಲು, ಸಂಡೂರು ಅಶ್ವರಾಮು, ಸಿರುಗುಪ್ಪ ಬಯಲಾಟ ಮಾಸ್ಟರ್ ತಿಪ್ಪೇಸ್ವಾಮಿ, ಕಂಪ್ಲಿ ತಾಲೂಕು ವೀರಣ್ಣ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ಕೆ. ರಂಗಣ್ಣವರ್, ಒಕ್ಕೂಟದ ಕಾರ್ಯದರ್ಶಿ ಪ್ರಕಾಶ್ ಅಂಗಡಿ, ಉಪಾಧ್ಯಕ್ಷ ಪುರುಷೋತ್ತಮ ಹಂದ್ಯಾಳ್, ರಾಜ್ಯ ಪ್ರಶಸ್ತಿ ವಿಜೇತರಾದ, ವೀಣಾ ಆದೋನಿ, ಜಿಲಾನಿಬಾಷಾ, ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಮೇಶ್ ಗೌಡ ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ