ಸಹಕಾರ ಕ್ಷೇತ್ರ ಅಶಕ್ತಗೊಳಿಸಲು ಹುನ್ನಾರ: ಎಚ್ಕೆ


Team Udayavani, Aug 22, 2021, 6:42 PM IST

22-15

ಹೊಸಪೇಟೆ: ಸಹಕಾರ ಕ್ಷೇತ್ರವನ್ನು ಅಶಕ್ತಗೊಳಿಸುವ ಕಾರ್ಯ ನಡೆಯುತಿದ್ದು, ಸದ್ಯ ಗಂಡಾಂತರದಲ್ಲಿದೆ. ಈ ಬಗ್ಗೆ ಸಹಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ ಎಂದು ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದರು.

ನಗರದ ಮಲ್ಲಿಗಿ ಹೋಟೆಲ್‌ ಸಭಾಂಗಣದಲ್ಲಿ ಶನಿವಾರ ನಡೆದ ಸ್ಥಳೀಯ ವಿಕಾಸ ಸೌಹಾರ್ದ ಕೋ-ಆಪರೇಟಿವ್‌ ಬ್ಯಾಂಕ್‌ನ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರ ಬ್ಯಾಂಕುಗಳಲ್ಲಿ ಸರಕಾರಿ ಸಂಸ್ಥೆಗಳು ಠೇವಣಿ ಇಡಬಾರದು ಎಂದು ಸುತ್ತೋಲೆ ಹೊರಡಿಸಿ ನಿರ್ದೇಶನ ನೀಡಲಾಗುತ್ತಿದೆ.

ಆದರೂ ಸಹಕಾರ ಬ್ಯಾಂಕುಗಳು ಸಶಕ್ತವಾಗಿವೆ. ಹೆಚ್ಚಿನ ಠೇವಣಿ ಸಂಗ್ರಹಿಸಿವೆ. ಆದರೆ, ವಾಣಿಜ್ಯ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಿಗೆ ನೀಡುವ ಮಾನದಂಡ, ಅವಕಾಶ ಅರ್ಬನ್‌ ಸಹಕಾರ ಬ್ಯಾಂಕುಗಳಿಗೆ ದೊರೆಯುತ್ತಿಲ್ಲ ಎಂದರು. ಅರ್ಬನ್‌ ಸಹಕಾರ ಬ್ಯಾಂಕುಗಳನ್ನು ಈಕ್ವಿಟಿ ಪದ್ಧತಿಗೆ ಒಳಪಡಿಸುತ್ತಿದೆ. ಇದರಿಂದ ಸಹಕಾರ ರಂಗ ಶ್ರೀಮಂತರ ಪಾಲಾಗಲಿದೆ. ಬಡ, ಮಧ್ಯಮ ವರ್ಗದವರ ಹಿತ ಕಾಪಾಡುವುದಕ್ಕಾಗಿ ಸಹಕಾರ ಬ್ಯಾಂಕುಗಳು ಜನ್ಮತಳೆದಿವೆ. ರಾಜ್ಯದಲ್ಲಿ 50 ಸಾವಿರ ಕೋಟಿ ರೂ.ಗು ಅ ಧಿಕ ಬಂಡವಾಳ ಇದೆ. ಇನ್ನೂ ದೇಶದಲ್ಲಿ 5ಲಕ್ಷ ಕೋಟಿ ರೂ. ಬಂಡವಾಳ ಇದೆ. ಇದರಲ್ಲಿ ಶೇ.25ರಷ್ಟನ್ನು ಸಹಕಾರದಿಂದ ಸರಕಾರಿ ವಲಯಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ.

ಕೇಂದ್ರ ಸರಕಾರದ ನೀತಿ ಹಾಗೂ ಆರ್‌ಬಿಐ ನೀತಿಯಿಂದ ಸಹಕಾರ ರಂಗಕ್ಕೆ ಪೆಟ್ಟು ಬೀಳುತ್ತಿದೆ. ಹೀಗಾಗಿ ಸಹಕಾರಿಗಳು ಚರ್ಚಿಸಿ ಉನ್ನತ ಸ್ಥಾನದಲ್ಲಿದ್ದವರಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದರು. ಸಹಕಾರ ಬ್ಯಾಂಕುಗಳು ಹಾನಿಗೊಳಗಾದರೆ ಸರಕಾರ ನೆರವು ನೀಡುವುದಿಲ್ಲ. ಆದರೆ, ವಾಣಿಜ್ಯ, ರಾಷ್ಟ್ರೀಕೃತ ಬ್ಯಾಂಕುಗಳ ಬಾಕಿ ಶುದ್ಧಿಗೆ ಲಕ್ಷ ಲಕ್ಷ ಕೋಟಿ ರೂ. ನೆರವು ನೀಡಲಾಗುತ್ತಿದೆ. ಈ ತಾರತಮ್ಯ ಹೋಗಲಾಡಿಸಬೇಕು ಎಂದರು.

ವಿಕಾಸ ಬ್ಯಾಂಕ್‌ ಬೆಳ್ಳಿಹಬ್ಬ ಆಚರಿಸಿಕೊಳ್ಳುತ್ತಿರುವುದು, ಬ್ಯಾಂಕ್‌ನ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಪರಿಶ್ರಮದಿಂದ ಬೆಳೆದಿರುವುದು ಹೆಮ್ಮೆಯ ಸಂಗತಿ ಎಂದರು. ಬ್ಯಾಂಕ್‌ನ ಅಧ್ಯಕ್ಷ ವಿಶ್ವನಾಥ ಹಿರೇಮಠ ಮಾತನಾಡಿ, ಕಳೆದ 25 ವರ್ಷಗಳಲ್ಲಿ ಬ್ಯಾಂಕು ಹಲವು ಪ್ರತಿಕೂಲ ಸನ್ನಿವೇಶ ಎದುರಿಸಿ ಬೆಳೆದಿದೆ. 2003ರಲ್ಲಿ ಸುಳ್ಳು ಆರೋಪದಿಂದ ಜನರು ಠೇವಣಿ ವಾಪಸ್‌ ಕೇಳಿದಾಗ ರಾತ್ರಿ 2 ಗಂಟೆವರೆಗೂ 6 ಕೋಟಿ ರೂ. ಠೇವಣಿ ವಾಪಸ್‌ ನೀಡಲಾಯಿತು. ಇನ್ನೂ 2011ರಲ್ಲೂ ಇಂತಹದ್ದೇ ಸ್ಥಿತಿ ನಿರ್ಮಾಣವಾಗಿತ್ತು.

ಆಗಲೂ ಜನರ ವಿಶ್ವಾಸಗಳಿಸಿ ಬ್ಯಾಂಕು ಸಶಕ್ತವಾಗಿ ಬೆಳೆದಿದೆ ಎಂದರು. ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಬಿ.ಎಚ್‌. ಕೃಷ್ಣಾರೆಡ್ಡಿ ಮಾತನಾಡಿದರು. ಕೊಟ್ಟೂರು ಸಂಸ್ಥಾನಮಠದ ಕುರಗೋಡು ಶಾಖಾಮಠದ ಶ್ರೀಪರ್ವತದೇವರು ಸಾನ್ನಿಧ್ಯವಹಿಸಿದ್ದರು. ವಿಕಾಸ ಯುವಕ ಮಂಡಳದ ಸಂಸ್ಥಾಪಕ ಅಧ್ಯಕ್ಷ ದಿವಾಕರ, ಬ್ಯಾಂಕ್‌ನ ಸಿಇಒ ಪ್ರಸನ್ನ ಹಿರೇಮಠ ಮತ್ತಿತರರಿದ್ದರು.

ಬ್ಯಾಂಕಿನ ಮಾಜಿ ನಿರ್ದೇಶಕ ಅನಂತ ಜೋಶಿ, ಅಧಿಕಾರಿ ಅನ್ನಪೂರ್ಣ ನಿರ್ವಹಿಸಿದರು. ಶಂಕುಸ್ಥಾಪನೆ: ನಗರದ ಪಟೇಲ್‌ನಗರದಲ್ಲಿ ಬ್ಯಾಂಕ್‌ ನ ಪ್ರಧಾನ ಕಚೇರಿ ಕಟ್ಟಡಕ್ಕೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ಶಂಕುಸ್ಥಾಪನೆ ನೆರವೇರಿಸಿದರು. ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.