ಬಿಎಸ್ವೈ-ಈಶ್ವರಪ್ಪ ರಾಜೀನಾಮೆ ನೀಡಲಿ
ಹೈಕೋರ್ಟ್ ನ್ಯಾಯಾಧಿಧೀಶರಿಂದ ಹುಣಸೋಡು ಸ್ಪೋಟ ಪ್ರಕರಣ ತನಿಖೆಯಾಗಲಿ
Team Udayavani, Jan 24, 2021, 4:43 PM IST
ಬಳ್ಳಾರಿ: ಶಿವಮೊಗ್ಗ ಜಿಲ್ಲೆ ಹುಣಸೋಡಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿ ಸಿದಂತೆ ಹೈಕೋರ್ಟ್
ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ತನಿಖೆಗೆ ಯಾವುದೇ ಅಡ್ಡಿ ಆತಂಕಗಳು ಎದುರಾಗದಂತೆ ಸುಸೂತ್ರವಾಗಿ ನಡೆಯಲು ಸಿಎಂ ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಜೆಲಿಟಿನ್ ಸ್ಫೋಟಕ ವಸ್ತುವುಳ್ಳ ವಾಹನ ಸ್ಫೋಟಗೊಂಡು ಐವರು ಮೃತಪಟ್ಟಿದ್ದಾರೆ. ನೂರಾರು ಕಟ್ಟಡಗಳು ಶಿಥಿಲಗೊಂಡಿವೆ. ಘಟನೆಯಲ್ಲಿ ಮೃತರಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಆದರೆ ಅದು ಸಾಲದು. ಘಟನೆ ನೈತಿಕ ಹೊಣೆ ಹೊರುವವರು ಯಾರು? ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪರಿಗೆ ಮನುಷ್ಯತ್ವ ಇದ್ದರೆ ಕೂಡಲೇ ಘಟನೆಯ ನೈತಿಕ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು.
ಓದಿ :·ಕೇಂದ್ರದ ಧೋರಣೆ ಖಂಡಿಸಿ ಬೃಹತ್ ರ್ಯಾಲಿ
ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ಮಾಡುವವರೆಲ್ಲರೂ ಬಿಜೆಪಿ ಜತೆ ಸಂಬಂಧ ಹೊಂದಿದವರು ಎಂದು ಆಪಾದಿಸಿದರು. ಶಿವಮೊಗ್ಗದಲ್ಲಿನ ಮೈನ್ಸ್·ಸೇಫ್ಟಿ ಅಧಿಕಾರಿಗಳು ವಿಫಲರಾಗಿದ್ದಾರೆ. ನೆರೆಯ ಆಂಧ್ರದಿಂದ ಜಿಲೆಟಿನ್ ಗಳು ವಾಹನದಲ್ಲಿ ಬರುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸುವಲ್ಲಿಯೂ ಗುಪ್ತಚರ ಇಲಾಖೆ ವಿಫಲವಾಗಿದೆ. ಹೀಗೆ ಪ್ರಜೆಗಳಿಗೆ ರಕ್ಷಣೆ ಇಲ್ಲ ಎಂದ ಮೇಲೆ ಸಿಎಂ ಯಡಿಯೂರಪ್ಪನವರು ಅಧಿಕಾರದಲ್ಲಿ ಮುಂದುವರೆಯಲು ಯಾವ ನೈತಿಕತೆ ಇದೆ. ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು
ಒತ್ತಾಯಿಸಿದರು.
ತಪ್ಪು ಒಪ್ಪಿಕೊಂಡಂತೆ: ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ದಾಳಿ ಮಾಡುವ ಕುರಿತು ರಾಷ್ಟ್ರೀಯ ಖಾಸಗಿ ಸುದ್ದಿವಾಹಿನಿಗೆ ಮಾಹಿತಿ ನೀಡಿದ್ದು ಯಾರು? ಎಂದು ಪ್ರಶ್ನಿಸಿದ್ದ ಉಗ್ರಪ್ಪ, ದೇಶದ ರಕ್ಷಣೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಪ್ರಧಾನಿ, ಗೃಹಮಂತ್ರಿ ಅಥವಾ ರಕ್ಷಣಾ ಸಚಿವರು ನೀಡಬೇಕು. ಆದರೆ ಬಾಲಾಕೋಟ್ ದಾಳಿ ನಡೆಯುವ ಬಗ್ಗೆ ಮಾಹಿತಿ ಹೇಗೆ ಸೋರಿಕೆಯಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಸ್ಪಷ್ಟನೆ ನೀಡಬೇಕು.ಇಲ್ಲದಿದ್ದರೆ ಈ ತಪ್ಪನ್ನು ಒಪ್ಪಿಕೊಂಡಂತೆ. ದೇಶ ರಕ್ಷಣೆಯಲ್ಲಿ ಕೇಂದ್ರ ಸರಕಾರ ವಿಫಲವಾಗಿದೆಎಂದರು.
ಸುದ್ದಿಗೋಷ್ಠಿಯಲ್ಲಿ ಉದ್ಯಮಿ ಟಪಾಲ್ ಗಣೇಶ್, ಪಕ್ಷದ ಹಿರಿಯ ಮುಖಂಡರಾದ ಎಲ್. ಮಾರೆಣ್ಣ, ಯುವ ಮುಖಂಡರಾದ ಹನುಮ ಕಿಶೋರ್, ನಾಗರಾಜ್ ಗೌಡ, ಜೆ.ಕೆ.ನಾಯ್ಡು, ತಾಯಪ್ಪ, ಕುಮಾರೆಮ್ಮ, ಅಲಿವೇಲು ಸುರೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ