ಗುಳೇದ ಲಕ್ಕಮ್ಮ ನಿನ್ನಾಲ್ಕು ಉಧೋ..ಉಧೋ..
ಗುಳೇದ ಲಕ್ಕಮ್ಮದೇವಿ ದರ್ಶನ ಪಡೆಯುತ್ತಿರುವ ಭಕ್ತ ಸಮೂಹ.
Team Udayavani, Jan 28, 2021, 6:08 PM IST
ಹರಪನಹಳ್ಳಿ: ತಾಲೂಕಿನ ಹುಲಿಕಟ್ಟೆ ಗ್ರಾಮದ ಸಮೀಪದ ಅರಣ್ಯದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಗುಳೇದ ಲಕ್ಕಮ್ಮದೇವಿ ಜಾತ್ರೋತ್ಸವ ಬುಧವಾರ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಕೈಯಲ್ಲಿ ಹಣ್ಣು-ಕಾಯಿ, ಊದುಬತ್ತಿ ಹಿಡಿದು ಸಾಮಾಜಿಕ ಅಂತರದೊಂದಿಗೆ ದೇವಿಯ ದರ್ಶನ ಪಡೆದುಕೊಂಡರು. ಭಕ್ತರು
ಲಕ್ಕಮ್ಮ ನಿನ್ನಾಲ್ಕು ಉಧೋ… ಉಧೋ… ಎಂಬ ಜಯಘೋಷ ಮೊಳಗಿಸಿದರು.
ಮಂಗಳವಾರ ಹುಲಿಕಟ್ಟೆ ಗ್ರಾಮದೊಳಗಿನ ದೇವಸ್ಥಾನದಿಂದ ಪಕ್ಕದ ಕೆರೆಯಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ಅಲಂಕೃತ ಲಕ್ಕಮ್ಮದೇವಿಯ ಮೂರ್ತಿಯನ್ನು ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ದೇವಿಯ ಮೂಲಸ್ಥಾನಕ್ಕೆ ಬಂದು ಪ್ರತಿಷ್ಠಾಪನೆಗೊಳ್ಳುತ್ತಿದ್ದಂತೆಯೇ ಭಕ್ತರ ಜಯಘೋಷ ಎಲ್ಲೆ ಮೀರಿತ್ತು.
ವಿವಿಧ ತಾಲ್ಲೂಕುಗಳಲ್ಲದೇ ನೆರೆಯ ಚಿತ್ರದುರ್ಗ, ಬಳ್ಳಾರಿ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಂದ ಟ್ರಾಕ್ಟರ್, ಎತ್ತಿನಗಾಡಿ, ವಿವಿಧ ವಾಹನಗಳ ಮೂಲಕ ಭಕ್ತರು ಆಗಮಿಸಿ ದೇವಿ ಕೃಪೆಗೆ ಪಾತ್ರರಾಗಲು ಶ್ರದ್ಧಾಭಕ್ತಿಯಿಂದ ವಿವಿಧ ಬಗೆಯ ಹರಕೆ ಸಲ್ಲಿಸಿ ಪುನೀತರಾದರು.
ಭಕ್ತರ ಸುರಕ್ಷತೆಗಾಗಿ ಹಾಗೂ ಸಾರ್ವಜನಿಕರ ಚಲನಲನ ನಿಗಾಯಿಡಲು ದೇವಸ್ಥಾನದ ಸುತ್ತಲೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಜನಜಂಜುಳಿ ತಪ್ಪಿಸಲು ಭಕ್ತರು ಸರದಿ ಸಾಲಿನಲ್ಲಿ ಬರುವಂತೆ ದೇವಸ್ಥಾನದ ಸುತ್ತಲೂ ಬ್ಯಾರಿಕೆಡ್ ಹಾಕಿ ಧ್ವನಿವರ್ಧಕದ
ಮೂಲಕ ಜನತೆಗೆ ಜಾಗೃತಿ ಮೂಡಿಸಲಾಯಿತು. ಇಷ್ಟಾರ್ಥ ಸಿದ್ಧಿಗಾಗಿ ಒಂಬತ್ತು ದಿನಗಳ ಕಾಲ ನಿಷ್ಕಲ್ಮಶ ಭಕ್ತಿಯಿಂದ ಗೋಸಸಿಯನ್ನು ಬಿದರಿನ ಬುಟ್ಟಿಯಲ್ಲಿ ಬೆಳೆದು, ಬಣ್ಣದ ಕಾಗದ ಹಾಗೂ ಅವರದೇ ಆದ ವಿಶಿಷ್ಟ ಶೈಲಿಯಲ್ಲಿ ಅಲಂಕರಿಸಿದ ಪುಟ್ಟಿಯನ್ನು ತಲೆಯ ಮೇಲೆಟ್ಟಿಕೊಂಡು ಅಮ್ಮನ ಅಡಿದಾವರೆಗೆ ಮಂಗಳವಾರ ರಾತ್ರಿಯೇ ಅರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ