ಜನಮನಸೂರೆಗೊಂಡ ಮಹಿಳಾ ಸಾಂಸ್ಕೃತಿಕ ಉತ್ಸವ

ಮಹಿಳಾ ಸಾಂಸ್ಕತಿಕ ಉತ್ಸವಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್‌. ನಂದಿನಿ ಚಾಲನೆ ನೀಡಿದರು

Team Udayavani, Jan 28, 2021, 6:22 PM IST

28-32

ಹೊಸಪೇಟೆ: ಸಂಸ್ಕತಿ-ಸಂಸ್ಕಾರವನ್ನು ಮಹಿಳೆ ಕುಟುಂಬದಲ್ಲಿ ಆಚರಣೆಗೆ ತರುವುದರ ಮೂಲಕ ಸದೃಢ ಸಮಾಜವನ್ನು ನಿರ್ಮಾಣ ಮಾಡುವ
ಆಧಾರ ಸ್ತಂಬವಾಗಿದ್ದಾಳೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್‌. ನಂದಿನಿ
ಅವರು ಹೇಳಿದರು.

ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ನಿಮಿತ್ತ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ವತಿಯಿಂದ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಮಹಿಳಾ
ಸಾಂಸ್ಕತಿಕ ಉತ್ಸವಕ್ಕೆ ಚಾಲನೆ ನೀಡಿ ಅವರು
ಮಾತನಾಡಿದರು.

ಮಹಿಳೆ ಇಂದು ಎಲ್ಲ ರಂಗದಲ್ಲಿಯೂ ತನ್ನದೆಯಾದ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿ ದ್ದಾಳೆ. ಮಹಿಳೆಯರು ತಮ್ಮ ದೌರ್ಬಲ್ಯಗಳನ್ನು
ಬದಿಗಿಟ್ಟು ಸಕಾರಾತ್ಮಕವಾಗಿ ಮುನ್ನಡೆಯಬೇಕು. ಹಿರಿಯರನ್ನು ಗೌರವದಿಂದ ಕಾಣುವ ಮೂಲಕ ಕಿರಿಯರನ್ನು ಬೆಳೆಸುವುದರೊಂದಿಗೆ ಹಳೆ ಬೇರು ಹೊಸ ಚಿಗುರುಗಳನ್ನು ಸಂರಕ್ಷಿಸಿ ಉತ್ತಮವಾದ ಸಮಾಜವನ್ನು ನಿರ್ಮಿಸುವ ಅವಶ್ಯಕತೆ ಇದೆ
ಎಂದರು.

ಸಂಸ್ಕತಿ ಹಲವಾರು ಸಂಸ್ಕಾರಗಳನ್ನು ಒಳಗೊಂಡಿರುತ್ತದೆ; ಆದ್ದರಿಂದ ನಮ್ಮ ಸಂಸ್ಕತಿಯನ್ನು ಉಳಿಸಿ ಬೆಳೆಸುವ ಅವಶ್ಯಕತೆಯೂ ಇದೆ.ಸಂಸ್ಕತಿ ಈ ನಾಡಿನ ಹಲವಾರು ಕಲೆಗಳಲ್ಲಿ ಅಡಗಿರುವುದರಿಂದ ಕಲಾವಿದರನ್ನು ಗೌರವಿಸುವ ಮೂಲಕ ಅವರ ಕಲೆ
ಅನಾವರಣಗೊಳ್ಳವುದಕ್ಕೆ ಇಂತಹ ಕಾರ್ಯಕ್ರಮಗಳ ಮತ್ತೆ ಮತ್ತೆ ಜರುಗುತ್ತಿರಬೇಕು ಎಂದು ಹೇಳಿದರು.
ಪುರುಷರು ಮಹಿಳೆಯರನ್ನು ಗೌರವಿಸಬೇಕು ಮತ್ತು ಮಹಿಳೆಯರು ಪುರುಷರನ್ನು ಗೌರವದಿಂದ ಕಾಣಬೇಕು; ಅಂದಾಗ ಮಾತ್ರವೇ ಸಮಾನತೆಯ ಸಮಾಜವನ್ನು ಕಾಣುವುದಕ್ಕೆ ಸಾಧ್ಯವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ ಕಲಾವಿದೆ ಕೂಡ್ಲಿಗಿ ಪದ್ಮ ಅವರು ಮಹಿಳಾ ಸಂಸ್ಕತಿಯನ್ನು ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆಯಂದು ಹಮ್ಮಿಕೊಂಡು ಜಿಲ್ಲೆಯ ಎಲ್ಲಾ ಮಹಿಳಾ ಕಲಾವಿದರಿಗೆ ತಮ್ಮ ಕಲೆಯನ್ನು ಅನಾವರಣಗೊಳಿಸಲು ಅವಕಾಶ ಕಲ್ಪಿಸಿದಕ್ಕೆ ಕನ್ನಡ ಮತ್ತು ಸಂಸ್ಕತಿ ಇಲಾಖೆಯನ್ನು ಅಭಿನಂದಿಸಿದರು.

ದಿನವಿಡಿ ನಡೆದ ಉತ್ಸವದಲ್ಲಿ ಜಾನಪದ ನೃತ್ಯ, ಯಗಳ ನೃತ್ಯ, ಸಮೂಹ ನೃತ್ಯ, ಶಾಸ್ತ್ರೀಯ ನೃತ್ಯ, ಜಾನಪದ ಹಾಡು,ಕೋಲಾಟ,ಡೊಳ್ಳು ಕುಣಿತ,ಶಾಸ್ತ್ರೀಯ ಸಂಗೀತ, ರಂಗ ಗೀತೆಗಳು, ನಾಟಕ ಮುಂತಾದ ಕಾರ್ಯಕ್ರಮಗಳು ನಾಡಿನ ಸಂಸ್ಕತಿ ಬಿಂಬಿಸಿ ಜನರ ಮನಸೂರೆಗೊಳಿಸಿದವು. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೈಶ ರಂಗಣ್ಣವರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ದೊಡ್ಡಬಸವ ಗವಾಯಿಗಳು, ಕಲಾವಿದ ಮಂಜುನಾಥ ಗೊವಿಂದವಾಡ,ಹೊಸಪೇಟೆ ತಾಲ್ಲೂಕಿನ ಜನಪದ
ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರೀ ,ಭರತನಾಟ್ಯ ಕಲಾವಿದೆ ಅಂಜಲಿ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಕೆ.ಆರ್‌.ನಂದಿನಿ ಅವರು 71 ವರ್‌ಷದ ಹಿರಿಯ ಮಹಿಳೆ ಹಾಗೂ 6 ವರ್‌ಷದ ಬಾಲಕಿಯಿಂದ ಕಾರ್ಯಕ್ರಮನ್ನು ಉದ್ಘಾಟನೆ ಮಾಡಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಪುಷ್ಪಾ ರಮೇಶ ಹಾಗೂ ನಾಗರತ್ನಾ ನಿರೂಪಿಸಿ ವಂದಿಸಿದರು.

 

ಓದಿ : ಕಾಟಿಪಳ್ಳ : ಬೈಕ್ ಸವಾರನಿಗೆ ಚೂರಿ ಇರಿತ ಪ್ರಕರಣ ; ಸುರತ್ಕಲ್ ಪೊಲೀಸರಿಂದ ಮೂವರ ಬಂಧನ

 

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.