ಅಕ್ರಮ ನಳ ಸಕ್ರಮಕ್ಕೆ ತೀರ್ಮಾನ

ಹೊಸ ಸಂಪರ್ಕಕ್ಕೆ 3500 ರೂ. ಶುಲ್ಕ ನಿಗದಿ

Team Udayavani, Jan 29, 2021, 5:39 PM IST

29-27

ಹರಪನಹಳ್ಳಿ: ಪುರಸಭೆ ಅಧ್ಯಕ್ಷ ಮಂಜುನಾಥ ಇಂಜತ್ಕರ್‌ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಟ್ಟಣದ ಸುಮಾರು 4900
ಅಕ್ರಮ ನಳಗಳನ್ನು ಸರ್ಕಾರ ನಿಗದಿಪಡಿಸಿದರ ಪಾವತಿಸಿಕೊಂಡು ಸಕ್ರಮಗೊಳಿಸಲು ತೀರ್ಮಾನಿಸಲಾಯಿತು.

ಅಲ್ಲದೇ ಹೊಸ ಸಂಪರ್ಕ ಪಡೆಯುವವರಿಗೆ 3500 ರೂ. ಶುಲ್ಕ ನಿಗದಿಪಡಿಸಲಾಯಿತು. ಹೊಸ ನಳ ಸಂಪರ್ಕಕ್ಕೆ 5 ಸಾವಿರರೂಗಳನ್ನು ನಿಗದಿ ಮಾಡಬೇಕು ಎಂಬ ಅಧಿಕಾರಿಗಳ ಮನವಿಗೆ ಆಕ್ಷೇಪ ವ್ಯಕ್ತತಪಡಿಸಿದ ಸದಸ್ಯರಾದ ಡಿ.ಅಬ್ದುಲ್‌ರಹಿಮಾನ್‌, ಎಂ.ವಿ.ಅಂಜಿನಪ್ಪ, ಟಿ.ವೆಂಕಟೇಶ,
ಗೊಂಗಡಿ ನಾಗರಾಜ್‌ ಅವರು ಸಾಮಾನ್ಯ ಜನರಿಗೆ ಶುಲ್ಕ ಹೊರೆಯಾಗುತ್ತದೆ. ಕಡಿಮೆ ಮಾಡಬೇಕು ಎಂದಾಗ ಸುದೀರ್ಘ‌ ಚರ್ಚೆ ನಡೆದು ಅಂತಿಮವಾಗಿ 3500 ರೂ. ಶುಲ್ಕ ನಿಗದಿಗೆ ನಿರ್ಣಯ ಕೈಗೊಳ್ಳಲಾಯಿತು. ಪುರಸಭಾ ಕಚೇರಿಯ ಕಂದಾಯ
ವಿಭಾಗದಲ್ಲಿ ಬಹಳಷ್ಟು ಸಮಸ್ಯೆಯಿದ್ದು, ಕಡತಗಳ ವಿಲೇವಾರಿ ಮಾಡಲು ವಿಳಂಬ ಮಾಡಲಾಗುತ್ತಿದೆ. ಅಧಿಕಾರಿಗಳು ಇದೇ ರೀತಿ ನಿರ್ಲಕ್ಷ  ವಹಿಸಿದ್ದ ಮುಂದಿನ ದಿನಗಳಲ್ಲಿ ಸಭೆ ನಡೆಸಲು ಬಿಡುವುದಿಲ್ಲ ಎಂದು ಹಿರಿಯ ಸದಸ್ಯ ಎಂ.ವಿ.ಅಂಜಿನಪ್ಪ ಕಿಡಿಕಾರಿದಾಗ ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಎಸ್‌.ಜಾಕೀರಹುಸೇನ್‌ ಅವರು ಸದಸ್ಯರು ಕೊಟ್ಟ ಅರ್ಜಿಗಳಿಗೆ ಸ್ಪಂದನೆ ಇಲ್ಲ, ಇನ್ನೂ ಸಾರ್ವಜನಿಕರ ಪಾಡೇನು
ಎಂದು ಪ್ರಶ್ನಿಸಿದರು.

ಸದಸ್ಯರಾದ ಎಚ್‌.ಎಂ.ಅಶೋಕ್‌, ಗೊಂಗಡಿ ನಾಗರಾಜ್‌ ಅವರು ಸಿಬ್ಬಂದಿ ವರ್ಗದವರ ಕಾರ್ಯವೈಖರಿ ಸರಿಯಿಲ್ಲ. ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಮುಖ್ಯಾ ಧಿಕಾರಿಗಳು ವಾರ್ಡ್‌ಗಳ ಭೇಟಿ ಮಾಡಿ ಸಮಸ್ಯೆಗಳ ಪರಿಶೀಲಿಸಿ ಪರಿಹಾರ ನೀಡಬೇಕು ಎಂದು ತಾಕೀತು
ಮಾಡಿದರು. ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ನ್ಯಾಯಾಲಯದ ಜಡ್ಜ್ಗಳಂತೆ ಕೆಲಸ ಮಾಡಬೇಕು ಎಂದು ಸದಸ್ಯ ಅಬ್ದುಲ್‌ ರಹೀಮಾನ್‌ ಸಾಬ್‌ ಅ ಧಿಕಾರಿಗಳಿಗೆ ಸಲಹೆ ನೀಡಿದರು.

ಸದಸ್ಯ ಟಿ.ವೆಂಕಟೇಶ ಮಾತನಾಡಿ, ವಾರ್ಡ್‌ಗಳಲ್ಲಿ ಅನೇಕ ಸಮಸ್ಯೆಗಳಿದ್ದು, ಪ್ರತಿ ತಿಂಗಳಿಗೊಮ್ಮೆ ಸಭೆ ಕರೆಯಬೇಕು. ಒಂದೇ ಬಾರಿಗೆ 19 ವಿಷಯಗಳನ್ನು ಚರ್ಚೆಗೆ ತಂದರೆ ಹೇಗೆ ಚರ್ಚಿಸೋದು ಎಂದು ಅಧ್ಯಕ್ಷರಿಗೆ ಪ್ರಶ್ನಿಸಿದರು. ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಅಧ್ಯಕ್ಷ ಮಂಜುನಾಥ ಇಜಂತಕರ್‌ ತಿಳಿಸಿದರು. ಮಹಿಳಾ ಸದಸ್ಯರಾದ ಲಕ್ಕಮ್ಮ, ಯಲ್ಲಮ್ಮ, ಅವರು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಬೀದಿ ದೀಪ, ಚರಂಡಿ, ನೀರಿನ ಸಮಸ್ಯೆ ಕುರಿತು ಗಮನ ಸೆಳೆದು ಕೂಡಲೇ ಸಮಸ್ಯೆ ನೀಗಿಸಿ ಎಂದು
ಕೋರಿದರು.

ಪಟ್ಟಣದ ಪಠಾಣೆಗೇರಿಯಲ್ಲಿ ಕುಡಿಯುವ ನೀರಿನ ಜೊತೆ ಚರಂಡಿ ಮತ್ತು ಶೌಚಾಲಯ ನೀರು ಕಲುಷಿತವಾಗಿ ದಿನನಿತ್ಯ ಪೂರೈಕೆಯಾಗುತ್ತಿದೆ. ಪೈಪ್‌ಲೈನ್‌ ಹೊಸದಾಗಿ ಮಾಡುವಂತೆ ಸದಸ್ಯ ಎಸ್‌.ಜಾಕೀರ್‌ ಹುಸೇನ್‌ ಮನವಿ ಮಾಡಿದಾಗ ಪಟ್ಟಣದ ತುರ್ತಾಗಿ ಆಗಬೇಕಾಗಿರುವುಗಳನ್ನು ಗುರುತಿಸಿ ಕಾಮಗಾರಿ ಮಾಡುವುದಾಗಿ ಅಧ್ಯಕ್ಷರು ಭರವಸೆ ನೀಡಿದರು.

ಪಾಠಣಗೇರಿಯಲ್ಲಿ ಕಳೆದ ಒಂದು ದಶಕದಿಂದ ಧಾರ್ಮಿಕ ಕೇಂದ್ರದ ಸಮೀಪವಿರುವ ಸಾರ್ವಜನಿಕ ಶೌಚಾಲಯ ಉಪಯೋಗಿಸುತ್ತಿಲ್ಲ, ಹೀಗಾಗಿ
ಗ್ರಂಥಾಲಯವಾಗಿ ಪರಿವರ್ತನೆ ಮಾಡುವಂತೆ ಎಸ್‌.ಜಾಕೀರಹುಸೇನ್‌ ಮಾಡಿದಾಗ ಧಾರ್ಮಿಕ ಸ್ಥಳದ ನಿರುಪಯುಕ್ತವಾಗಿ
ಶೌಚಾಲಯ ಗುರುತಿಸಿ ಮುಂದಿನ ಸಭೆಯಲ್ಲಿ ನಿರ್ಧರಿಸುವುದಾಗಿ ಅಧ್ಯಕ್ಷರು ತಿಳಿಸಿದರು.

ಉಪಾಧ್ಯಕ್ಷೆ ನಿಟ್ಟೂರು ಭೀಮವ್ವ ಹಾಗೂ ಸದಸ್ಯರು, ಮುಖ್ಯಾಧಿಕಾರಿ ಬಿ.ಆರ್‌.ನಾಗರಾಜನಾಯ್ಕ, ಆರೋಗ್ಯಾಧಿಕಾರಿ ಮಂಜುನಾಥ್‌, ಸಮುದಾಯ ಸಂಘಟನಾಧಿ ಕಾರಿ ಲೋಕಾನಾಯ್ಕ ಇತರರು ಹಾಜರಿದ್ದರು.

ಓದಿ : ಕೋವಿಡ್‌ ಕಾರಣ ಹೇಳಬೇಡಿ, ಕಾರ್ಯಪ್ರವೃತ್ತರಾಗಿ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.