ರೈತ ವಿರೋಧಿ ಕಾಯ್ದೆ ಜಾರಿಯಿಂದ ಸಂಕಷ್ಟ
ಬಹಿರಂಗ ಸಭೆ ಉದ್ದೇಶಿಸಿ ಕಾರ್ಮಿಕ ಮುಖಂಡ ಯು. ಬಸವರಾಜ ಮಾತನಾಡಿದರು.
Team Udayavani, Jan 31, 2021, 3:33 PM IST
ಹೊಸಪೇಟೆ: ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ಸರ್ಕಾರ ರೈತ-ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ
ಎಂದು ಕಾರ್ಮಿಕ ಮುಖಂಡ ಯು. ಬಸವರಾಜ ಕಿಡಿಕಾರಿದರು.
ಮಹಾತ್ಮ ಹುತಾತ್ಮ ದಿನಾಚರಣೆ ಹಾಗೂ ರೈತ-ಕಾರ್ಮಿಕ ವಿರೋಧಿ ನೀತಿ ಖಂಡಿಸಿ, ನಗರದ ಪಶುಸಂಗೋಪನೆ ಇಲಾಖೆ ಆವರಣದಲ್ಲಿ ನಗರದ ವಿವಿಧ ಕಾರ್ಮಿಕ ಸಂಘಟನೆಗಳ ಜಂಟಿ ಹೋರಾಟ ವೇದಿಕೆ ವತಿಯಿಂದ ಶನಿವಾರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ
ಅವರು, ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿ, ಕಳೆದ 70 ದಿನಗಳಿಂದ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಹತ್ತಿಕ್ಕಲು, ಪೊಲೀಸರ ಮೂಲಕ ದೌರ್ಜನ್ಯ ನಡೆಸುತ್ತಿದೆ. ಇದೊಂದು ಕೇವಲ ರೈತ-ಕಾರ್ಮಿಕರ ಹೋರಾಟವಲ್ಲ. ಇದೊಂದು ಎರಡನೇ ಸ್ವಾತಂತ್ರ ಸಂಗ್ರಾಮವಾಗಿದ್ದು, ಬೇಡಿಕೆ ಈಡೇರುವವರಗೆ ನಿಲ್ಲುವುದಿಲ್ಲ ಎಂದರು. ಮುಖಂಡರಾದ ಆರ್. ಎಸ್. ಬಸವರಾಜ, ಎಂ.ಜಂಬಯ್ಯನಾಯಕ, ಆರ್. ಭಾಸ್ಕರರೆಡ್ಡಿ, ಎ.ಕರುಣಾನಿಧಿ , ನಾಗರತ್ನಮ್ಮ, ಯಲ್ಲಾಲಿಂಗ, ಕೆ.ಎಂ.ಸಂತೋಷ, ಗೋಪಾಲ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!