ಮೀರಾ ರಾಘವೇಂದ್ರ ಬಂಧನಕ್ಕೆ ಒತ್ತಾಯ
ಪ್ರೊ| ಭಗವಾನ್ ಮುಖಕ್ಕೆ ಮಸಿಬಳಿದು ಅವಮಾನಿಸಿದ ನ್ಯಾಯವಾದಿ ಮೀರಾ ರಾಘವೇಂದ್ರರನ್ನು ಬಂ ಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಲಾಯಿತು.
Team Udayavani, Feb 6, 2021, 4:26 PM IST
ಬಳ್ಳಾರಿ: ಪ್ರಗತಿಪರ ಚಿಂತಕ ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದು ಅವಮಾನಿಸಿರುವ ಮಹಿಳಾ ನ್ಯಾಯವಾದಿ ಮೀರಾ ರಾಘವೇಂದ್ರ ಅವರನ್ನು ಕಾನೂನಿನಡಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ (ಡಿಜಿ ಸಾಗರ್ ಬಣ) ಸಮಿತಿ ಸದಸ್ಯರು ನಗರದ ಡಿಸಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿಂತಕ ಪ್ರೊ| ಭಗವಾನ್ರವರು ನಾಡಿನ ದಲಿತಪರ, ರೈತಪರ, ಕಾರ್ಮಿಕ ಪರ ಮುಂಚೂಣಿಯ ಹೊರಾಟಗಾರರಾಗಿದ್ದಾರೆ. ಇವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಗುರುವಾರ ಹಾಜರಾಗಿದ್ದರು. ಈ ವೇಳೆ ಜಾಮೀನು ಪಡೆದು ಹೊರ ಬರುತ್ತಿದ್ದ ಭಗವಾನ್ ಅವರ ಮುಖಕ್ಕೆ ಮೀರಾ ರಾಘವೇಂದ್ರ ಅವರು ನ್ಯಾಯಾಲಯ ಆವರಣದಲ್ಲಿಯೇ ಏಕಾಏಕಿ ಮಸಿ ಬಳಿದು ಅವಮಾನಿಸಿರುವುದು ಅತ್ಯಂತ ಖಂಡನೀಯ. ಕೂಡಲೇ ಅವರನ್ನು ಬಂಧಿಸಬೇಕು. ಅವರ ವಕೀಲ ವೃತ್ತಿಯ ನೋಂದಣಿಯನ್ನು ರದ್ದುಗೊಳಿಸಬೇಕು. ಕಾನೂನಿನ ಪ್ರಕಾರ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಪಂ ಸದಸ್ಯ ಎ. ಮಾನಯ್ಯ, ಸಮಿತಿಯ ಸಂಘಟನಾ ಸಂಚಾಲಕ ಎಚ್. ಆಂಜನೇಯ, ಖಜಾಂಜಿ ಜಿ.ಗಾದಿಲಿಂಗ, ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಬಿ. ರಮೇಶ್, ಟಿ.ಎಂ. ಎರಿಸ್ವಾಮಿ, ಮುಖಂಡರುಗಳಾದ ಹುಲುಗಪ್ಪ ಬೆಳಗಲ್, ಮೇಘನಾಥ್. ಎಚ್.ರಂಗಪ್ಪ, ಗಂಗಾಧರ, ಭೀಮಶಂಕರ, ಹೊನ್ನೂರಪ್ಪ, ಶಶಿಕುಮಾರ್ ಬೂದಿಹಾಳ್, ಮಹೇಶ್ ಭತ್ರಿ, ಪ್ರಭು ಸಿದ್ದಮ್ಮನಹಳ್ಳಿ, ಹಾಲೇಶ್, ರೆಹಮತ್, ಶ್ರೀನಿವಾಸ ಅಸುಂಡಿ, ಹೊನ್ನಳ್ಳಿ ಹಲುಗ, ನಿಂಗಪ್ಪ ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್