ಖಾತೆ ಬದಲಾವಣೆಗೆ ಲಂಚ: ಪ್ರಥಮದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ
Team Udayavani, Feb 14, 2023, 8:05 PM IST
ಬಳ್ಳಾರಿ (ಹೂವಿನಹಡಗಲಿ): ಪಹಣಿಯಲ್ಲಿ ಹೆಸರು ಬದಲಾವಣೆ ಮಾಡಿಕೊಡಲು ಸಾವಿರಾರು ರೂ. ಲಂಚ ಕೇಳಿದ್ದ ಹಡಗಲಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ವೆಂಕಟಸ್ವಾಮಿ ಎನ್ನುವವರು ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಹಗರನೂರು ಗ್ರಾಮಾದ ನಿವೃತ್ತ ಶಿಕ್ಷಕ ಲಕ್ಕಪ್ಪಾ ಅಂಗಡಿಯವರ ತಾಯಿಗೆ ಸೇರಿದ 4 ಎಕರೆ ಜಮಿನಿಗೆ ಸಂಬಂಧಿಸಿದಂತೆ ಸರ್ವೆನಂ. 330\ಎ ಪಹಣಿ ಕಲಂ 11 ರಲ್ಲಿ ಸರ್ಕಾರಿ ಜಮಿನು ಎಂದು ಬಂದಿದ್ದು ಇದನ್ನು ತಗೆದು ಹಾಕಲು ಅರ್ಜಿದಾರ ಲಕ್ಕಪ್ಪ ಅಂಗಡಿಯ 2014 ರಲ್ಲಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿದಿದ್ದರು. ವಿನಾಃ ಕಾರಣ ವಿಳಂಬ ಮಾಡಿ ನಂತರ ಕೆಲಸ ಮಾಡಿಕೊಡಲು 70 ಸಾವಿರ ರೂ ಗಳ ಹಣಕ್ಕೆ ಬೇಡಿಕೆ ಇಟ್ಟಿದ್ದರು ಇಂದು ಪಟ್ಟಣದ ಖಾಸಗಿ ಹೋಟಲ್ ನಲ್ಲಿ ಅರ್ಜಿದಾರರನು ವೆಂಕಟಸ್ವಾಮಿಯವರಿಗೆ 65 ಸಾವಿರ ಹಣ ನೀಡಲು ಮುಂದಾದಾಗ ಬಳ್ಳಾರಿ ಹಾಗೂ ಹೊಸಪೇಟೆ ಲೋಕಾಯುಕ್ತರು ಜಂಟಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ಪಿ ಪುರುಷೊತ್ತಮ ಅವರ ಮಾರ್ಗದರ್ಸದಲ್ಲಿ ಡಿವೈಎಸ್ ಒಳಗೊಂಡಂತೆ ಪೊಲೀಸ್ ಇನ್ಸ್ ಪೆಕ್ಟರ್ ಸುರೇಶ್ ಬಾಬು ಹಾಗೂ ಸಂಗಮೇಶ್ ದಾಳಿ ನಡೆಸಿದ್ದಾರೆ ಆರೊಪಿ ವೆಂಕಟಸ್ವಾಮಿಯನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ಇದನ್ನೂ ಓದಿ: ಪಾಂಗಳ ಶರತ್ ಶೆಟ್ಟಿ ಪ್ರಕರಣ: ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ