ರಾಬಕೊ ಹಾಲು ಒಕ್ಕೂಟದ ರೈತರಿಗೆ ಬೋನಸ್‌


Team Udayavani, Aug 5, 2021, 6:37 PM IST

5-14

ವೆಂಕೋಬಿ ಸಂಗನಕಲ್ಲು

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಹಾಲು ಒಕ್ಕೂಟದಿಂದ ಪ್ರತಿವರ್ಷ ನೀಡುವ ಬೋನಸ್‌ನ್ನು ಈ ಬಾರಿ 6 ರೂಗಳಿಗೆ ಹೆಚ್ಚಿಸಲಾಗಿದ್ದು, ಮೂರು ಜಿಲ್ಲೆಗಳ ಒಟ್ಟು 29 ಸಾವಿರ ರೈತರಿಗೆ 3.21 ಕೋಟಿ ರೂಗಳನ್ನು ವಿತರಿಸಲಾಗಿದೆ. ಅಧ್ಯಕ್ಷರ ವೇತನ, ಭತ್ಯೆ ಸಹ ರೈತರಿಗೆ ನೀಡಲಾಗಿದ್ದು, ಕೋವಿಡ್‌ ಸಂಕಷ್ಟದ ದಿನಗಳಲ್ಲಿ ಈ ಮೂಲಕ ರೈತರ ನೆರವಿಗೆ ಧಾವಿಸಿರುವುದು ಗಮನಾರ್ಹ.

ರಾಯಚೂರು, ಬಳ್ಳಾರಿ, ಕೊಪ್ಪಳ ಹಾಲು ಒಕ್ಕೂಟದಲ್ಲಿ ಪ್ರತಿವರ್ಷ ಉಳಿಯುವ ಲಾಭಾಂಶದಲ್ಲಿ ರೈತರು ಮಾರ್ಚ್‌ ತಿಂಗಳಲ್ಲಿ ನೀಡುವ ಪ್ರತಿ ಲೀಟರ್‌ ಹಾಲಿಗೆ ಇಂತಿಷ್ಟು ಹಣವನ್ನು ಬೋನಸ್‌ ರೂಪದಲ್ಲಿ ರೈತರಿಗೆ ನೀಡಲಾಗುತ್ತದೆ. ಅದೇ ರೀತಿ ಶಾಸಕ ಭೀಮಾನಾಯ್ಕ ಅವರು ಒಕ್ಕೂಟದ ಅಧ್ಯಕ್ಷತೆ ವಹಿಸಿಕೊಂಡ ಬಳಿಕ ಈ ಬೋನಸ್‌ ಹಣವನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸಿಕೊಂಡು ಬರಲಾಗುತ್ತಿದ್ದು, ಪ್ರಸಕ್ತ ವರ್ಷ ಬೋನಸ್‌ ಹಣವನ್ನು ಪ್ರತಿ ಲೀಟರ್‌ 6 ರೂಗೆ ಹೆಚ್ಚಿಸುವ ಮೂಲಕ ಕೋವಿಡ್‌ ಸಂಕಷ್ಟದಲ್ಲಿರುವ ರೈತರಿಗೆ ನೆರವಾದಂತಾಗಿದೆ.

3.21 ಕೋಟಿ ರೂ. ವಿತರಣೆ: ಒಕ್ಕೂಟದ ಅಧ್ಯಕ್ಷ ಭೀಮಾನಾಯ್ಕ ಅವರು ಅಧಿ ಕಾರ ವಹಿಸಿಕೊಂಡ ಮೊದಲ ವರ್ಷ 2018-19ರಲ್ಲಿ ಪ್ರತಿ ಲೀಟರ್‌ಗೆ 2.25 ರೂ. ಬೋನಸ್‌ ನೀಡಿದ್ದ ರೈತರಿಗೆ, 2019-20ರಲ್ಲಿ 5 ರೂಗೆ ಹೆಚ್ಚಿಸಿ ವಿತರಿಸಲಾಯಿತು. ಇದೀಗ 2020-21ನೇ ಸಾಲಿನಲ್ಲಿ ಒಕ್ಕೂಟಕ್ಕೆ ಕೋಟ್ಯಾಂತರ ರೂ. ಲಾಭ ಬಂದಿದೆ. ಈ ಹಿನ್ನೆಲೆಯಲ್ಲಿ ಬೋನಸ್‌ ಹಣವನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಪ್ರತಿ ಲೀಟರ್‌ ಗೆ 6 ರೂ. ಬೋನಸ್‌ ನೀಡಲಾಗಿದೆ. ಕಳೆದ ಮಾರ್ಚ್‌ ತಿಂಗಳೊಂದರಲ್ಲೇ ಬಳ್ಳಾರಿ 398, ರಾಯಚೂರು 113, ಕೊಪ್ಪಳ 244 ಸೇರಿ ಮೂರು ಜಿಲ್ಲೆಗಳ ಒಟ್ಟು 755 ಹಾಲು ಉತ್ಪಾದಕ ಸಹಕಾರಿ ಸಂಘಗಳಿಂದ 53.60 ಲಕ್ಷ ಲೀಟರ್‌ ಹಾಲು ರೈತರಿಂದ ಸಂಗ್ರಹಿಸಲಾಗಿದ್ದು, ಪ್ರತಿ ಲೀಟರ್‌ಗೆ 6 ರೂ.ಗಳಂತೆ ಒಟ್ಟು 3.21 ಕೋಟಿ ರೂ. ಬೋನಸ್‌ನ್ನು ರೈತರಿಗೆ ವಿತರಿಸಲಾಗಿದೆ.

ಇದು ಒಟ್ಟು 28350 ರೈತರಿಗೆ ನೆರವಾಗಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ತಿರುಪತೆಪ್ಪ ಅಂಕಿ ಅಂಶಗಳನ್ನು ನೀಡಿದದರು. ಕಡಿತಗೊಳಿಸದ ಬೆಲೆ: ಹೆಚ್ಚಿದ ಆದಾಯ: ರಾಜ್ಯದಲ್ಲಿ ಬಳ್ಳಾರಿ ಸೇರಿ ಒಟ್ಟು 14 ಹಾಲು ಉತ್ಪಾದನಾ ಒಕ್ಕೂಟಗಳು ಇವೆ. ಕೋವಿಡ್‌ ಸೋಂಕು, ಲಾಕ್‌ ಡೌನ್‌ ಸಂದರ್ಭದಲ್ಲಿ ರಾಬಕೊ ಹೊರತುಪಡಿಸಿ ಎಲ್ಲ ಒಕ್ಕೂಟಗಳಲ್ಲೂ ರೈತರಿಗೆ ನೀಡುವ ಹಾಲಿನ ಬೆಲೆಯನ್ನು ಕಡಿತಗೊಳಿಸಲಾಗಿದೆ. ಆದರೆ, ಬಳ್ಳಾರಿ ಒಕ್ಕೂಟದಲ್ಲಿ ಮಾತ್ರ ಬೆಲೆ ಕಡಿತಗೊಳಿಸಿಲ್ಲ. ರೈತರಿಂದ ಖರೀದಿಸಿದ ಹಾಲಿಗೆ ಈ ಮೊದಲು ನೀಡುತ್ತಿದ್ದ ಬೆಲೆಯನ್ನೇ ಕೋವಿಡ್‌, ಲಾಕ್‌ಡೌನ್‌ ಸಂದರ್ಭದಲ್ಲೂ ನೀಡುವ ಮೂಲಕ ಸಂಕಷ್ಟದ ಸಮಯದಲ್ಲಿ ರೈತರ ನೆರವಿಗೆ ಬಂದಂತಾಗಿದೆ.

ಕೋವಿಡ್‌ ಸಂದರ್ಭದಲ್ಲೇ ಒಕ್ಕೂಟಕ್ಕೆ ಕೋಟ್ಯಾಂತರ ರೂ. ಆದಾಯ ಬಂದಿದ್ದು, 32 ವರ್ಷಗಳ ಒಕ್ಕೂಟದ ಇತಿಹಾಸದಲ್ಲೇ ಅತಿಹೆಚ್ಚು ಆದಾಯವಾಗಿದೆ. ಹಾಗಾಗಿ ಕೋವಿಡ್‌ ಸಂದರ್ಭದಲ್ಲೂ ಒಕ್ಕೂಟದ ಕೈಹಿಡಿದಿರುವ ರೈತರಿಗೆ ಮಾರ್ಚ್‌ ತಿಂಗಳ ಹಾಲಿಗೆ ಪ್ರತಿ ಲೀಟರ್‌ಗೆ 6 ರೂ. ಬೋನಸ್‌ ನೀಡಲಾಗಿದೆ ಎನ್ನುತ್ತಾರೆ ಒಕ್ಕೂಟದ ಅಧ್ಯಕ್ಷ ಭೀಮಾನಾಯ್ಕ.

ವೇತನ, ಭತ್ಯೆ ಪಡೆಯದ ಭೀಮಾನಾಯ್ಕ: ಹಲವರ ಅಡೆತಡೆಗಳ ನಡುವೆಯೂ ಬಳ್ಳಾರಿ, ರಾಯಚೂರು, ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಶಾಸಕ ಭೀಮಾನಾಯ್ಕ, ಒಕ್ಕೂಟದಿಂದ ನೀಡುವ ತಿಂಗಳ ವೇತನ, ಭತ್ಯೆಯನ್ನು ಈವರೆಗೆ ಒಮ್ಮೆಯೂ ಪಡೆದಿಲ್ಲ. ಇದನ್ನು ವಾಪಸ್‌ ನೀಡಿದ್ದು, ಒಕ್ಕೂಟದ ಲಾಭಾಂಶಕ್ಕೆ ಸೇರಿಸಿ ರೈತರಿಗೆ ಪ್ರತಿವರ್ಷದಂತೆ ಬೋನಸ್‌ ನೀಡುವ ಮೂಲಕ ರೈತರಿಗೆ ನೆರವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ.

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಅವರು ಅಡವಿ ಆನಂದದೇವನಹಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ನಿರ್ದೇಶಕರಾಗಿ ನೇಮಕವಾಗಿ ಎರಡು ವರ್ಷಗಳ ಹಿಂದೆ ಬಳ್ಳಾರಿ, ರಾಯಚೂರು, ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಒಕ್ಕೂಟಕ್ಕೆ ಬರುವ ಎಲ್ಲ ನಿರ್ದೇಶಕರಂತೆ ಅಧ್ಯಕ್ಷರಿಗೂ ಪ್ರತಿ ಕಿಮೀಗೆ 10 ರೂ. ಭತ್ಯೆ, 10 ಸಾವಿರ ರೂ. ತಿಂಗಳ ವೇತನ ನೀಡಲಾಗುತ್ತದೆ.

ಹೀಗೆ ಪ್ರತಿ ತಿಂಗಳ ವೇತನ, ಭತ್ಯೆ ಸೇರಿ ಸುಮಾರು 15 ಸಾವಿರ ರೂ. ಗಳಷ್ಟಾಗಲಿದ್ದು, ಒಂದು ವರ್ಷದ ಸುಮಾರು 1.50 ಲಕ್ಷಕ್ಕೂ ಹೆಚ್ಚು ಹಣವನ್ನು ಒಕ್ಕೂಟಕ್ಕೆ ವಾಪಸ್‌ ನೀಡಿದ್ದಾರೆ. ಒಕ್ಕೂಟದ ನಿರ್ದೇಶಕರ ಸಭೆಯಲ್ಲಿ ವಾಪಸ್‌ ನೀಡುತ್ತಿರುವ ಚೆಕ್‌ನ್ನು ಪ್ರದರ್ಶಿಸಿ ಎಲ್ಲರ ಗಮನಕ್ಕೆ ತಂದು ಒಕ್ಕೂಟಕ್ಕೆ ನೀಡಲಾಗುತ್ತದೆ. ಈ ಹಣವನ್ನು ಒಕ್ಕೂಟದ ಲಾಭಾಂಶಕ್ಕೆ ಸೇರಿಸಿ ರೈತರಿಗೆ ನೆರವಾಗುವಂತೆ ಮಾಡಲಾಗುತ್ತದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.