ಬಾಲ್ಯವಿವಾಹಗಳಿಗೆ ತಡೆ
Team Udayavani, Jun 27, 2020, 9:19 AM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುನ್ನಾ ದಿನ ವಿದ್ಯಾರ್ಥಿನಿಯ ಬಾಲ್ಯವಿವಾಹ ತಡೆದಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ಮತ್ತೂಬ್ಬ ವಿದ್ಯಾರ್ಥಿನಿ ಸೇರಿ ಮೂರು ಬಾಲ್ಯ ವಿವಾಹಗಳನ್ನು ಶುಕ್ರವಾರ ತಡೆದಿದ್ದು, ಈ ಮೂಲಕ ಎರಡು ದಿನದಲ್ಲಿ ನಾಲ್ಕು ಬಾಲ್ಯವಿವಾಹಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಹೊರವಲಯದ ಅಲ್ಲಿಪುರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ (16) ಶುಕ್ರವಾರ ನಡೆಯಲಿದ್ದ ಬಾಲ್ಯವಿವಾಹವನ್ನು ತಡೆದು ಪರೀಕ್ಷೆ ಬರೆಯಲು ಅನುವು ಮಾಡಲಾಗಿತ್ತು. ಕಂಪ್ಲಿ ಸಮೀಪದ ಮುದ್ದಾಪುರ ಗ್ರಾಮದ ಸಂಬಂಧಿಕರ ಯುವಕನೊಂದಿಗೆ ನಿಶ್ಚಯಿಸಿದ್ದ ಮದುವೆಯನ್ನು ತಡೆದು ವಿದ್ಯಾರ್ಥಿನಿಯನ್ನು ರಕ್ಷಿಸಿ, ಎರಡು ದಿನ ಬಾಲಮಂದಿರದಲ್ಲಿ ಆಶ್ರಯ ನೀಡಿದ್ದರು. ಪರೀಕ್ಷಾ ಸಿದ್ಧತೆಗೆಂದು ವಿದ್ಯಾರ್ಥಿನಿಯನ್ನು ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡು ಶುಕ್ರವಾರ ಮನೆಗೆ ಕಳಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಲಾಲಪ್ಪ ತಿಳಿಸಿದರು.
ಇಲ್ಲಿನ ವಿನಾಯಕ ನಗರದಲ್ಲಿ 14 ವರ್ಷದ ಮತ್ತು ಗುಗ್ಗರಹಟ್ಟಿ ಪ್ರದೇಶದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ (17) ಸಂಬಂಧಿಕರ ಯುವಕನೊಂದಿಗೆ ಹಾಗೂ 16 ವರ್ಷದ ಬಾಲಕಿಯರಿಗೆ ಶುಕ್ರವಾರ ನಡೆಯಲಿದ್ದ ಮೂರು ಬಾಲ್ಯ ವಿವಾಹಗಳನ್ನು ಶುಕ್ರವಾರ ತಡೆದು ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ ಎಂದು ಸಿಡಿಪಿಒ ಜಲಾಲಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ