ಭತ್ತ ಉಳಿಸಲು ಬಸಿ ನೀರೇ ಗತಿ


Team Udayavani, Feb 25, 2019, 6:53 AM IST

bell-1.jpg

ಸಿರುಗುಪ್ಪ: ತಾಲೂಕಿನಲ್ಲಿ ಹರಿಯುವ ವೇದಾವತಿ ಹಗರಿ ನದಿ ಬತ್ತಿ ಹೋಗಿರುವುದರಿಂದ ನದಿ ಪಾತ್ರದ ಲ್ಲಿ ಬಾಡಿ ಹೋಗುತ್ತಿರುವ ಭತ್ತದ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ.

ಭತ್ತ ಬೆಳೆದ ರೈತರು ನದಿಯಲ್ಲಿ ಸಣ್ಣ ಸಣ್ಣ ಬಸಿ ನೀರಿನ ಒಡ್ಡು ಮತ್ತು ಕಾಲುವೆ ನಿರ್ಮಿಸಿಕೊಳ್ಳುವ ಮೂಲಕ ಗದ್ದೆಗಳಿಗೆ ನೀರೆತ್ತಿ ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ತಾಲೂಕಿನ ಬಲಕುಂದಿ, ಮುದೇನೂರು, ಬಗ್ಗೂರು, ಕೆ.ಸೂಗೂರು, ಚಾಣಕನೂರು, ಕರ್ಚಿಗನೂರು, ರಾರಾವಿ,
ಬಂಡ್ರಾಳು, ಕುರುವಳ್ಳಿ, ನಾಗಲಾಪುರ, ಕುಡುದರಹಾಳು, ಹೊನ್ನಾರಹಳ್ಳಿ, ಶ್ರೀಧರಗಡ್ಡೆ, ಚಿಕ್ಕಬಳ್ಳಾರಿ, 25-ಹಳೇಕೋಟೆ, ನಂದಿಪುರ ಕ್ಯಾಂಪ್‌ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ನೂರಾರು ರೈತರು ಹೇಗಾದರೂ ಸರಿ ಭತ್ತ ಉಳಿಸಿಕೊಳ್ಳುವ ಉದ್ದೇಶದಿಂದ ವೇದಾವತಿ ಹಗರಿ ನದಿಯಲ್ಲಿಯೇ ಸಣ್ಣ ಸಣ್ಣ ಒಡ್ಡು ಹಾಗೂ ಕಾಲುವೆ ನಿರ್ಮಿಸಿಕೊಂಡು, ಒಡ್ಡುಗಳಲ್ಲಿ ಶೇಖರಣೆಯಾಗುವ ಬಸಿನೀರನ್ನು ಮೋಟಾರ್‌ ಮೂಲಕ ನೀರೆತ್ತಿ ಗದ್ದೆಗಳಿಗೆ ಹರಿಸಿಕೊಳ್ಳುತ್ತಿದ್ದಾರೆ.
 
ಈ ಭಾಗದ ರೈತರು ಕಳೆದ ಹಲವಾರು ವರ್ಷಗಳಿಂದ ಮುಖ್ಯಬೆಳೆಯಾಗಿ ಭತ್ತ ಬೆಳೆಯುತ್ತಿದ್ದಾರೆ. ಆದರೆ ಈ ವರ್ಷ ವೇದಾವತಿ, ಹಗರಿ ನದಿಯಲ್ಲಿ ಡಿಸೆಂಬರ್‌ ತಿಂಗಳಲ್ಲಿ ನೀರು ಹರಿಯುತ್ತಿದ್ದರಿಂದ ರೈತರು ಭತ್ತ ನಾಟಿ ಮಾಡಿದ್ದರು. ಆದರೆ ಜನವರಿ ಕೊನೆ ವಾರದಲ್ಲಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಹೇಗಾದರೂ ಫೆಬ್ರವರಿ ಕೊನೆಯವರೆಗೆ ಭತ್ತ ಉಳಿಸಿಕೊಂಡರೆ ಮಾರ್ಚ್‌ನಲ್ಲಿ ತುಂಗಭದ್ರಾ ಜಲಾಶಯದಿಂದ ನದಿಗೆ ಕುಡಿಯಲು ನೀರು ಹರಿಸುತ್ತಾರೆ ಎಂಬ ನಂಬಿಕೆಯಿಂದ ಭತ್ತ ಬೆಳೆದ ರೈತರಿಗೆ ನೀರಿನ ಕೊರತೆ ಶಾಕ್‌ ನೀಡಿದೆ. ಆದರೂ ಭತ್ತ ಬೆಳೆದ ರೈತರು ಬೆಳೆ ಉಳಿಸಿಕೊಳ್ಳಲು ಮೊದಲು ಬಸಿ ನೀರಿನ ಕಾಲುವೆ ತೆಗೆದು ಬೆಳೆಗೆ ನೀರು ಹರಿಸಲು ಮುಂದಾಗಿದ್ದಾರೆ.

ಈ ಭಾಗದಲ್ಲಿ ಸುಮಾರು 700ರಿಂದ 800ಎಕರೆ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, 2 ಬಾರಿ ರಸಗೊಬ್ಬರ ಹಾಕಿ ಕಳೆ ಕಿತ್ತು ಗದ್ದೆ ಹಸನು ಮಾಡಿದ್ದಾರೆ. ಆದರೆ ನದಿಯಲ್ಲಿ ನೀರು ಬತ್ತಿರುವುದರಿಂದ ಹೇಗಾದರೂ ಮಾಡಿ ಬೆಳೆ ಉಳಿಸಿಕೊಳ್ಳಲು ನದಿಯಲ್ಲಿ ರೈತರು ತಮ್ಮ ಜಮೀನಿಗೆ ಅನುಗುಣವಾಗಿ ಒಡ್ಡುಗಳನ್ನು ತೆಗೆದಿದ್ದಾರೆ. ಒಡ್ಡುಗಳ ಹತ್ತಿರ ಡೀಸೆಲ್‌ ಮತ್ತು ವಿದ್ಯುತ್‌ ಮೋಟಾರ್‌ ಅಳವಡಿಸಿಕೊಂಡಿದ್ದು, ಇದರಿಂದ ನೀರೆತ್ತಿ ಗದ್ದೆಗಳಿಗೆ ಹರಿಸಿಕೊಳ್ಳುತ್ತಿದ್ದಾರೆ.

ಜಮೀನುಗಳಿಗನುಗುಣವಾಗಿ ನೀರು ಹರಿಸಲು ತೆಗೆದಿರುವ ಒಡ್ಡುಗಳಲ್ಲಿ ತುಂಬುವ ನೀರು ಒಂದರಿಂದ 2 ಎಕರೆಗೆ ಹರಿಸಬಹುದು. ಹೆಚ್ಚು ಜಮೀನು ಇರುವ ರೈತರು ಆಳ ಮತ್ತು ಉದ್ದದ ಒಡ್ಡು ನಿರ್ಮಿಸಿಕೊಂಡರೆ ಸಣ್ಣ ರೈತರು ತಮ್ಮ ಜಮೀನಿಗೆ ನೀರು ಹರಿಸಲು ಬೇಕಾಗುವಷ್ಟು ಆಳ ಮತ್ತು ಉದ್ದದ ಒಡ್ಡನ್ನು ನಿರ್ಮಿಸಿಕೊಂಡು ಒಣಗುತ್ತಿರುವ ಭತ್ತದ ಗದ್ದೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ಭತ್ತದ ಬೆಳೆ ಉಳಿಸಿಕೊಳ್ಳಲು ನದಿಯಲ್ಲಿ ಒಡ್ಡು ನಿರ್ಮಿಸಿಕೊಂಡು ಗದ್ದೆಗೆ ನೀರು ಹರಿಸುವ ಪ್ರಯತ್ನ ಮಾಡುತ್ತಿದ್ದೇವೆ. ನದಿಯಲ್ಲಿ ಒಡ್ಡು ನಿರ್ಮಿಸಿಕೊಳ್ಳಲು ನದಿ ಪಾತ್ರದ ಹಳ್ಳಿಗಳ ರೈತರು 20ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ.
 ನರಸಪ್ಪ, ಶ್ರೀಧರಗಡ್ಡೆ ಗ್ರಾಮದ ರೈತ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.