ಭೀಕರ ಅಪಘಾತ: ಐವರು ಸಾವು
Team Udayavani, Jun 16, 2018, 6:00 AM IST
ಬಳ್ಳಾರಿ/ಕುರುಗೋಡು: ತಾಲೂಕಿನ ಕೋಳೂರು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದು ಮೂರು ವರ್ಷದ ಮಗು ಸಹಿತ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಕುರುಗೋಡು ಮೂಲದ ಚಾಲಕ ಸಂತೋಷ್(32) ಮತ್ತವರ ಮಗ ಪ್ರೀತಮ್ (4), ವಿನಯ್(23), ಗುರು(28), ದಾದಾ ಖಲಂದರ್(16) ಮೃತಪಟ್ಟವರು. ಇಂಡಿಕಾ ಕಾರಿನಲ್ಲಿ ಸಿರುಗುಪ್ಪದಿಂದ ಕುರುಗೋಡಿಗೆ ಹೋಗುತ್ತಿದ್ದಾಗ, ಬಳ್ಳಾರಿ ಕಡೆಯಿಂದ ಸಿರುಗುಪ್ಪ ಕಡೆಗೆ ಹೊರಟಿದ್ದ ಸಾರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಘಟನೆಯಿಂದ ಕಾರಿನಲ್ಲಿ ಸಿಲುಕಿಕೊಂಡ ಮೃತರ ದೇಹಗಳನ್ನು ಸ್ಥಳೀಯರು ಮತ್ತು ಪೊಲೀಸರು ಹೊರ ತೆಗೆದು ವಿಮ್ಸ್ ಆಸ್ಪತ್ರೆಗೆ ರವಾನಿಸಿದರು. ಘಟನಾ ಸ್ಥಳಕ್ಕೆ ಎಸ್ಪಿ ಅರುಣ್ ರಂಗರಾಜನ್, ಡಿವೈಎಸ್ಪಿ ಟಿ.ವಿ.ಸುರೇಶ್, ಸಿಪಿಐ ಮಂಜುನಾಥ್, ಕುರುಗೋಡು ಠಾಣೆ ಪಿಎಸ್ಐ ಮಹೇಶ್ಗೌಡ, ಅಗ್ನಿ ಶಾಮಕ ದಳದ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ಅರುಣ್ ರಂಗರಾಜನ್, ಪ್ರಾಥಮಿಕ ಮಾಹಿತಿ ಪ್ರಕಾರ ವೇಗದ ನಿಯಂತ್ರಣ ಕಳೆದುಕೊಂಡ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿರಬಹುದೆಂದು ತಿಳಿದು ಬಂದಿದೆ ಎಂದರು. ಈ ಕುರಿತು ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್