ಬಣ್ಣದ ಲೋಕ ಅನಾವರಣಗೊಳಿಸಿದ ರಂಗೋಲಿ ಚಿತ್ತಾರ

ಎಂಎಂಟಿಸಿ ಉದ್ಯಾನವನದಲ್ಲಿ ಮೇಳೈಸಿದ ಸಂಕ್ರಾಂತಿ ಸೊಗಡು

Team Udayavani, Jan 16, 2020, 6:43 PM IST

16-January-33

ಬಳ್ಳಾರಿ: ನಗರದ ಸತ್ಯನಾರಾಯಣ ಪೇಟೆಯಲ್ಲಿನ ಎಂಎಂಟಿಸಿ ಉದ್ಯಾನವನದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಂಕ್ರಾಂತಿ ಸೊಗಡು ಮೇಳೈಸಿತ್ತು. ಹಬ್ಬದ ನಿಮಿತ್ತ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳೆಯರು, ಯುವತಿಯರು ರಸ್ತೆಗಳಲ್ಲಿ ಹಾಕಿದ್ದ ಬಣ್ಣ ಬಣ್ಣದ ರಂಗೋಲಿಗಳು ಬಣ್ಣದ ಲೋಕವನ್ನೇ ಅನಾವರಣಗೊಳಿಸಿತ್ತು.

ಪಾಲಿಕೆ ಮಾಜಿ ಸದಸ್ಯ ಕೆ.ಎಸ್‌. ದಿವಾಕರ್‌ ಮತ್ತು ಬಿಜೆಪಿ ಯುವ ಮುಖಂಡ ಕೆ.ಎಸ್‌. ಅಶೋಕ್‌ ನೇತೃತ್ವದಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ದೇಶದ ಸಂಸ್ಕೃತಿ, ಹಳ್ಳಿಯ ಸೊಗಡನ್ನು ಬಿಂಬಿಸುವಂತೆ ಆಯೋಜಿಸಲಾಗಿದ್ದ ಸಂಕ್ರಾಂತಿ ಹಬ್ಬದಲ್ಲಿ ರಸ್ತೆಬದಿಯ ಮನೆಗಳ ಗೋಡೆಗಳ ಮೇಲೆ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಗಳನ್ನು ಬಿಡಿಸಲಾಗಿತ್ತು. ಎತ್ತಿನ ಬಂಡಿಯ ಗಾಲಿಗಳಿಗೆ ಬಣ್ಣಗಳಿಂದ ಅಲಂಕರಿಸಲಾಗಿತ್ತು. ಉದ್ಯಾನವನದಲ್ಲಿ ಹಳ್ಳಿ ಪದ್ಧತಿಯನ್ನು ಬಿಂಬಿಸುವ ಕೃತಕ ಗುಡಿಸಲನ್ನು ನಿರ್ಮಿಸಲಾಗಿತ್ತು. ಬಾಳೆಗಂಬ, ತೆಂಗಿನಗೆರೆ, ಕಬ್ಬು ಮತ್ತು ಹೂವುಗಳಿಂದ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶವನ್ನು ಸಿಂಗಾರಗೊಳಿಸುವ ಮೂಲಕ ನಗರದಲ್ಲೂ ಸಂಕ್ರಾಂತಿ ಹಬ್ಬವನ್ನು ಗ್ರಾಮೀಣ ಸೊಗಡಿನಿಂದ ಅತ್ಯಂತ ವಿಜೃಂಭಣೆಯಿಂದ ಬುಧವಾರ ಆಚರಿಸಲಾಯಿತು.

ಹಬ್ಬದ ವಿಶೇಷವಾದ ಎತ್ತುಗಳು, ಕುರಿ, ಕೋಳಿ, ನವಿಲುಗಳನ್ನು ತರಿಸಲಾಗಿತ್ತು. ಕುಂಬಾರರ ಮಡಿಕೆಗಳು, ಕೃಷಿಯ ಚಿತ್ರಣಗಳು ಹಬ್ಬದಲ್ಲಿ ಮೇಳೈಸಿದವು. ರಂಗೋಲಿ ಸ್ಪರ್ಧೆ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ರಂಗೋಲಿ ಬಿಡಿಸುವವರಿಗೆ ಮನೆ ಮಂದಿಯೂ ಹುರಿದುಂಬಿಸುತ್ತಿದ್ದರು. ನಾನಾ ಬಗೆಯ ವರ್ಣಮಯ ರಂಗೋಲಿಗಳು ನೆರೆದವರನ್ನು ಸೆಳೆಯುತ್ತಿದ್ದವು. ಸ್ಪರ್ಧೆಯಲ್ಲಿ 20 ಮಕ್ಕಳು 268 ಮಹಿಳೆಯರು ಸೇರಿ ಒಟ್ಟು 288 ಜನರು ತಮ್ಮ ಹೆಸರುಗಳನ್ನು ನೋಂದಾಯಿಸಿ, ವಿವಿಧ ರೀತಿಯ ರಂಗೋಲಿಗಳನ್ನು ಹಾಕಿ ಅದಕ್ಕೆ ಬಣ್ಣಗಳನ್ನು ತುಂಬುವಲ್ಲಿ ನಿರತರಾಗಿದ್ದರು.

ಸ್ಪರ್ಧೆಯಲ್ಲಿ ವಿಜೇತರಿಗೆ ಮೊದಲನೇ ಬಹುಮಾನ 42 ಇಂಚಿನ ಎಲ್‌ ಇಡಿ ಟಿವಿ, ಎರಡನೇ ಬಹುಮಾನ ರೆಫ್ರಿಜಿರೇಟರ್‌, ತೃತೀಯ ಬಹುಮಾನ ಗ್ರೈಂಡರ್ ಹಾಗೂ ಆಕರ್ಷಕ ಬಹುಮಾನ ಮಿಕ್ಸರ್‌ಗ್ರೈಂಡರ್
ಇಡಲಾಗಿತ್ತು.

ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿದ ಕಮ್ಮರಚೇಡು ಮಠದ ಕಲ್ಯಾಣಸ್ವಾಮೀಜಿ ಮಾತನಾಡಿ, ಸಂಕ್ರಾಂತಿ ಭಾರತೀಯ ಸಂಸ್ಕೃತಿಯ ಪ್ರತೀಕವಾದ ಹಬ್ಬ. ಭಾರತ ದೇಶ ವಿಶ್ವಗುರು ಆಗಲು ನಮ್ಮ ಸಂಸ್ಕೃತಿಯೇ ಕಾರಣ. ಸಂಕ್ರಾಂತಿ ಹಬ್ಬದಲ್ಲಿ ವಿಶೇಷವಾಗಿ ಎಳ್ಳುಬೆಲ್ಲವನ್ನು ಸೇವಿಸಲಾಗುತ್ತದೆ. ನಮ್ಮ ಪೂರ್ವಜರು ಹಾಕಿಕೊಟ್ಟಿರುವ ಇದೊಂದು ವೈಜ್ಞಾನಿಕ ಪದ್ಧತಿ ಎಂದರು.

ಪಾಲಿಕೆ ಮಾಜಿ ಸದಸ್ಯ ಕೆ.ಎಸ್‌. ದಿವಾಕರ್‌ ಮಾತನಾಡಿ, ಹೊಸವರ್ಷದ ಮೊದಲ ದೊಡ್ಡ ಹಬ್ಬ ಸಂಕ್ರಾಂತಿ. ಎಲ್ಲರೂ ಒಂದಾಗಿ ಅಣ್ಣತಮ್ಮಂದಿರಂತೆ ಕೂಡಿ ಬಾಳಬೇಕು ಎಂಬ ಉದ್ದೇಶದಿಂದ ಪ್ರತಿವರ್ಷದಂತೆ ಈ ಬಾರಿಯೂ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದರು.

ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರು ರಂಗೋಲಿ ಬಿಡಿಸುವುದರ ಜತೆಗೆ ಕೆಳಗೆ ಐ ಸಪೋರ್ಟ್‌ ಸಿಎಎ ಎಂದು ಅಡಿಬರಹ ಬರೆದಿದ್ದು ಎಲ್ಲರ ಗಮನ ಸೆಳೆಯಿತು.

ಶಾಸಕ ಜಿ.ಸೋಮಶೇಖರರೆಡ್ಡಿ ಭೇಟಿ ನೀಡಿ, ರಂಗೋಲಿ ವೀಕ್ಷಿಸಿದರು. ಈ ವೇಳೆ ಪಾಲಿಕೆ ಸದಸ್ಯ ಮಲ್ಲನಗೌಡ, ಕೃಷ್ಣಮೂರ್ತಿ, ಎಪಿಎಂಸಿ ಪಾಲಣ್ಣ, ರಾಮಲಿಂಗಪ್ಪ, ಪ್ರಕಾಶ್‌, ವೆಂಕಟೇಶ್‌, ರಾಮಾಂಜಿನಿ, ಗಿರೀಶ್‌, ನೇಮಕಲ್‌ರಾವ್‌ ಸೇರಿದಂತೆ
ಹಲವರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.