![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ವಲಸಿಗರಿಗೆ 2 ತಿಂಗಳ ಉಚಿತ ಪಡಿತರ
Team Udayavani, May 23, 2020, 6:23 PM IST
![23-May-27](https://www.udayavani.com/wp-content/uploads/2020/05/23-May-27-620x352.gif)
ಸಾಂದರ್ಭಿಕ ಚಿತ್ರ
ಬಳ್ಳಾರಿ: ರಾಜ್ಯದಲ್ಲಿ ಲಾಕ್ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ವಲಸಿಗರಿಗೆ ಆಹಾರ ಭದ್ರತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಪ್ರತಿ ವಲಸಿಗರಿಗೆ ಅಕ್ಕಿ ಮತ್ತು ಕಡಲೆ ಕಾಳನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ವಲಸಿಗರು ದೇಶದ ಯಾವುದೇ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರದ ಹಾಗೂ ಪಡಿತರ ಪಡೆಯದ ವಲಸಿಗರಿಗೆ ಈ ಯೋಜನೆ ಅನ್ವಯಿಸುತ್ತದೆ. 2020ರ ಮೇ ಹಾಗೂ ಜೂನ್ ಮಾಹೆಯಲ್ಲಿ ಪ್ರತಿ ವಲಸಿಗರಿಗೆ ತಲಾ 5ಕೆ.ಜಿ ಅಕ್ಕಿ ಹಾಗೂ ಜೂನ್ ತಿಂಗಳಲ್ಲಿ ಪ್ರತಿ ಕುಟುಂಬಕ್ಕೆ ಕಡಲೆ ಕಾಳು ಸಹ ಉಚಿತವಾಗಿ ವಿತರಿಸಲಾಗುವುದು. ಮೇ ತಿಂಗಳಲ್ಲಿ ಪಡಿತರ ಪಡೆಯಲಾಗದ ವಲಸಿಗರಿಗೆ ಜೂನ್ ತಿಂಗಳಲ್ಲಿ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ಸೇರಿಸಿ ಪ್ರತಿಯೊಬ್ಬರಿಗೆ 10ಕೆ.ಜಿ ಅಕ್ಕಿ ಮತ್ತು ಕಡಲೆಕಾಳು ಸೇರಿಸಿ ನೀಡಲಾಗುವುದು. ಮೇ ತಿಂಗಳ ಪಡಿತರವನ್ನು ಮೇ 26 ರಿಂದ ಮೇ 31 ರವರೆಗೆ ಹಾಗೂ ಜೂನ್ತಿಂಗಳ ಪಡಿತರವನ್ನು ಜೂ.01 ರಿಂದ ಜೂ.10 ರವರೆಗೆ ವಿತರಿಸಲಾಗುವುದು. ವಲಸಿಗರಿಗೆ ತಾಲೂಕಿನ ನಗರ, ಪಟ್ಟಣ, ಹೋಬಳಿ, ಪಂಚಾಯತ್ ಮಟ್ಟದ ಆಯ್ದ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ತಾಲೂಕಿನ ತಹಶೀಲ್ದಾರ್ ಕಚೇರಿ (ಆಹಾರ ವಿಭಾಗ) ಹಾಗೂ ಕಾರ್ಮಿಕ ಇಲಾಖೆ ಸಂಪರ್ಕಿಸಬಹುದು.
ಈ ಯೋಜನೆ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಉಚಿತ ಸಹಾಯವಾಣಿ ಸಂ. 1967 ಅಥವಾ ಬಳ್ಳಾರಿ ಆಹಾರ ಇಲಾಖೆ ದೂ.ಸಂ.08392-272557 ಅಥವಾ ಜಿಲ್ಲಾ ಕೋವಿಡ್-19 ನಿಯಂತ್ರಣ ಕೊಠಡಿ ದೂ.ಸಂ. 08392-277102 / 08392-277103 ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.