ಬಳ್ಳಾರಿ: ಆಸ್ಪತ್ರೆಯಿಂದ ವಿಚಾರಣಾಧೀನ ಖೈದಿ ಪರಾರಿ
Team Udayavani, May 6, 2022, 9:54 PM IST
ಬಳ್ಳಾರಿ: ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಖೈದಿ ಶುಕ್ರವಾರ ಬೆಳಗಿನ ಜಾವ ಪರಾರಿಯಾಗಿದ್ದಾನೆ.
ಚಂದ್ರಕಾಂತ್ (೨೨) ಪರಾರಿಯಾದ ವಿಚಾರಣಾಧೀನ ಖೈದಿ. ನೆರೆಯ ಕೊಪ್ಪಳ ಜಿಲ್ಲೆಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಚಂದ್ರಕಾಂತ್ಗೆ ಗುರುವಾರ ತಲೆಗೆ ಎನೋ ಪೆಟ್ಟುಬಿದ್ದಂತಾಗಿದ್ದು ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಎಚ್ಚರಗೊಂಡಿದ್ದಾನೆ. ಆದರೂ, ಆ ಆಸ್ಪತ್ರೆಯಲ್ಲಿ ಸಿಟಿ ಸ್ಕಾನ್, ನರರೋಗ ತಜ್ಞವೈದ್ಯರು ಇಲ್ಲದ ಕಾರಣ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯುವಂತೆ ವೈದ್ಯರು ನೀಡಿದ ಸಲಹೆ ಮೇರೆಗೆ, ಕೊಪ್ಪಳದಿಂದ ಗುರುವಾರ ರಾತ್ರಿ ೮.೩೦ರ ಸುಮಾರಿಗೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದ ಖೈದಿ ಚಂದ್ರಕಾಂತ್ ನನ್ನ ನೋಂದಾಯಿಸಿಕೊಂಡು ತಕ್ಷಣ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಅಲ್ಲಿಂದ ಸಮೀಪದ ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆಗೆ ದಾಖಲಿಸಿ ಅಲ್ಲೂ ಚಿಕಿತ್ಸೆ ನೀಡಲಾಗಿದೆ.
ಶುಕ್ರವಾರ ಬೆಳಗಿನ ಜಾವ ಬಹಿರ್ದೆಸೆಗೆ ಹೋಗುವ ನೆಪದಲ್ಲಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ಕಾರಾಗೃಹದ ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ್ದ ಕಾರಾಗೃಹದ ಅಧಿಕಾರಿಗಳು, ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಕುರಿತು ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ