ಶಾಲಾ-ಕಾಲೇಜು ಶುಲ್ಕ ಸರ್ಕಾರವೇ ಭರಿಸಲಿ
Team Udayavani, May 27, 2020, 4:59 PM IST
ಬಳ್ಳಾರಿ: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು
ಬಳ್ಳಾರಿ: ವಿದ್ಯಾರ್ಥಿಗಳ ಶಾಲಾ, ಕಾಲೇಜು ಶುಲ್ಕವನ್ನು ಸರ್ಕಾರವೇ ಭರಿಸಬೇಕು. ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಪರೀಕ್ಷಾ ರೂಪುರೇಷೆಗಳನ್ನು ಸಿದ್ಧಪಡಿಸಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಎಲ್ಲ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ವಿವಿ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕು. ಈಗಾಗಲೇ ಪಡೆದಿದ್ದ ಶುಲ್ಕವನ್ನು ವಾಪಸ್ ನೀಡಬೇಕು. ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್ ಪಾಸ್ಗಳನ್ನು ನೀಡಬೇಕು. ಎಲ್ಲ ವಿದ್ಯಾರ್ಥಿಗಳ ಶಿಷ್ಯ ವೇತನಗಳನ್ನು (ಸ್ಕಾಲರ್ಶಿಪ್) ಹೆಚ್ಚಿಸಬೇಕು. ಆನ್ಲೈನ್ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸಬಾರದು.ಕ್ವಾರಂಟೈನ್ ಕೇಂದ್ರಗಳಾಗಿ ಬಳಸಿದ್ದ ಶಾಲೆ, ಕಾಲೇಜು, ಹಾಸ್ಟೆಲ್ ಕಟ್ಟಡಗಳನ್ನು ಸಂಪೂರ್ಣವಾಗಿ ಶುದ್ಧೀಕರಿಸಿ ಸ್ಯಾನಿಟೈಸ್ ಮಾಡಿದ ನಂತರವೇ ವಿದ್ಯಾರ್ಥಿಗಳಿಗೆ ಅದನ್ನು ತೆರೆಯಬೇಕು. ವಿದ್ಯಾರ್ಥಿಗಳಿಗೂ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿಯಲ್ಲಿ ಅವರು ಆಗ್ರಹಿಸಿದ್ದಾರೆ. ಈ ವೇಳೆ ಜಿಲ್ಲಾ ಕಾರ್ಯದರ್ಶಿ ಜೆ.ಪಿ. ರವಿಕಿರಣ್ ಸೇರಿ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ