ರೆಡ್ಡಿ, ಲಾಡ್‌ ನಡುವೆ ಕದನ ಕುತೂಹಲ


Team Udayavani, May 10, 2018, 6:45 AM IST

Anil.jpg

ಬಳ್ಳಾರಿ: 2008ರ ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಪ್ರತಿಸ್ಪರ್ಧಿಗಳಾಗಿದ್ದ ಬಿಜೆಪಿಯ ಜಿ.ಸೋಮಶೇಖರ ರೆಡ್ಡಿ, ಕಾಂಗ್ರೆಸ್‌ನ ಅನಿಲ್‌ ಲಾಡ್‌ ಈ ಬಾರಿ ಮತ್ತೂಮ್ಮೆ ಚುನಾವಣಾ ಅಖಾಡಕ್ಕಿಳಿದಿದ್ದು, ಅಂದಿನ “ಹೈವೋಲ್ಟೆàಜ್‌ ಕದನ’ ನೆನಪಿಸಿದೆ. ಈ ಇಬ್ಬರಿಗೆ ಸೆಡ್ಡು ಹೊಡೆಯಲು ಜೆಡಿಎಸ್‌ ಅಭ್ಯರ್ಥಿ ಮಹ್ಮದ್‌ ಇಕ್ಬಾಲ್‌ ಸದ್ದಿಲ್ಲದೆ ಸಜ್ಜಾಗುತ್ತಿದ್ದು, ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

2008ರಲ್ಲಿ ಕ್ಷೇತ್ರ ಮರುವಿಂಗಡಣೆಯಿಂದಾಗಿ ಬಳ್ಳಾರಿ ಮಹಾನಗರ ಪಾಲಿಕೆಯ 26 ವಾರ್ಡ್‌ಗಳನ್ನು ಸೇರಿಸಿ ಮೊದಲ ಬಾರಿಗೆ ಬಳ್ಳಾರಿ ನಗರ ಕ್ಷೇತ್ರವನ್ನಾಗಿ ರಚಿಸಲಾಯಿತು. ಮೊದಲ ಚುನಾವಣೆಯಲ್ಲೇ ಬಿಜೆಪಿಯಿಂದ ಜಿ. ಸೋಮಶೇಖರ ರೆಡ್ಡಿ, ಕಾಂಗ್ರೆಸ್‌ನಿಂದ ಅನಿಲ್‌ ಲಾಡ್‌ ಸ್ಪರ್ಧಿಸಿ  ಮುಖಾಮುಖೀಯಾಗಿದ್ದರು. ಸೋಮಶೇಖರ ರೆಡ್ಡಿಯವರು ಕೇವಲ 1022 ಮತಗಳ ಅಂತರದಿಂದ ಪ್ರಯಾಸದ ಜಯ ದಾಖಲಿಸಿದ್ದರು. ಬಳಿಕ ಕೆಎಂಎಫ್‌ ರಾಜ್ಯಾಧ್ಯಕ್ಷರೂ ಆಗಿದ್ದರು. ಬದಲಾದ ರಾಜಕೀಯದಿಂದಾಗಿ 2011ರಲ್ಲಿ ಬಿಜೆಪಿಯಿಂದ ಹೊರಬಂದ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಸ್ವಂತ ಬಿಎಸ್‌ಆರ್‌ ಪಕ್ಷ ಸ್ಥಾಪಿಸಿದರು. ಪರಿಣಾಮ 2013ರ ವಿಧಾನಸಭೆ ಚುನಾವಣೆಯಲ್ಲಿ ಸೋಮಶೇಖರ ರೆಡ್ಡಿ ಸ್ಪರ್ಧಿಸದೆ ದೂರ ಉಳಿದಿದ್ದು, ಬಿಎಸ್‌ಆರ್‌ ಪಕ್ಷದಿಂದ ಎಸ್‌.ಮುರಳಿಕೃಷ್ಣ ಅವರನ್ನು ಕಣಕ್ಕಿಳಿಸಲಾಗಿತ್ತು. ಇದು ಕಾಂಗ್ರೆಸ್‌ ಅಭ್ಯರ್ಥಿ ಅನಿಲ್‌ ಲಾಡ್‌ 18 ಸಾವಿರ ಮತಗಳ ಅಂತರದಿಂದ ಗೆಲ್ಲಲು ಕಾರಣವಾಯಿತು. ಇದೀಗ 2018ರ ವಿಧಾನಸಭೆ ಚುನಾವಣೆಯಲ್ಲಿ 2008ರ ಪ್ರತಿಸ್ಪರ್ಧಿಗಳೇ ಪರಸ್ಪರ ಎದುರಾಳಿಗಳಾಗಿದ್ದಾರೆ. ಸೋಮಶೇಖರ ರೆಡ್ಡಿ ವಿರುದ್ಧ ಅನಿಲ್‌ ಲಾಡ್‌ ಅಂದಿನ ಸೋಲಿನ ಸೇಡು ತೀರಿಸಿಕೊಳ್ಳಲಿದ್ದಾರೆಯೇ ಎಂಬುದು  ಕುತೂಹಲ ಮೂಡಿಸಿದೆ.ಇನ್ನು, 2013ರ ಚುನಾವಣೆಯಲ್ಲಿ ನಗರ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಗಣಿ ಉದ್ಯಮಿ ಮಹ್ಮದ್‌ ಇಕ್ಬಾಲ್‌ ಹೊತೂರ್‌ ಈ ಬಾರಿ ಜೆಡಿಎಸ್‌ನಿಂದ ಅಖಾಡಕ್ಕಿಳಿದಿದ್ದು, ರೆಡ್ಡಿ, ಲಾಡ್‌ಗೆ ಪೈಪೋಟಿ ನೀಡಲು ಸಜ್ಜಾಗುತ್ತಿದ್ದಾರೆ.

ಮತದಾರರ ಸಂಖ್ಯೆ
ಪುರುಷರು – 1,15,130
ಮಹಿಳೆಯರು – 1,18,130
ಒಟ್ಟು : 2,33,260 ಮತದಾರರು
ಜಾತಿವಾರು ಲೆಕ್ಕಾಚಾರ
ಲಿಂಗಾಯತರು- 40 ಸಾವಿರ
ಮುಸ್ಲಿಂ- 39 ಸಾವಿರ
ಎಸ್ಸಿ- 35 ಸಾವಿರ
ಎಸ್‌ಟಿ- 35 ಸಾವಿರ
ಕುರುಬ – 30 ಸಾವಿರ
ಬಲಿಜ, ರೆಡ್ಡಿ, ಕಮ್ಮಾ-27 ಸಾವಿರ
ಬ್ರಾಹ್ಮಣ, ಜೈನ, ವೈಶ್ಯ-27 ಸಾವಿರ

2008ಕ್ಕೂ 2018ರ ಚುನಾವಣೆಗೂ ತುಂಬ ವ್ಯತ್ಯಾಸಗಳಿವೆ. ಅನಿಲ್‌ ಲಾಡ್‌ ಸಾರ್ವಜನಿಕ ಸೇವೆಯಲ್ಲಿದ್ದರೂ ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ನನ್ನ ಗೆಲುವು ಶೇ.100ರಷ್ಟು ಖಚಿತ.
– ಜಿ. ಸೋಮಶೇಖರ ರೆಡ್ಡಿ, ಬಿಜೆಪಿ ಅಭ್ಯರ್ಥಿ

ನಾನು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆ. ಈ ಬಾರಿಯೂ ಕ್ಷೇತ್ರದ ಮತದಾರರು ನನ್ನ ಮೇಲೆ ವಿಶ್ವಾಸವಿರಿಸಿ, ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವಿದೆ.
– ಅನಿಲ್‌ ಲಾಡ್‌, ಕಾಂಗ್ರೆಸ್‌ ಅಭ್ಯರ್ಥಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.