ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
Team Udayavani, Jun 1, 2020, 3:27 PM IST
ಬಳ್ಳಾರಿ: ಬಾಲ ಆಂಜನೇಯ ದೇವಸ್ಥಾನ ಬಳಿಯ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಜಿ. ಸೋಮಶೇಖರರೆಡ್ಡಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಭೂಮಿಪೂಜೆ ನೆರವೇರಿಸಿದರು.
ಬಳ್ಳಾರಿ: ನಗರದ ಶ್ರೀ ಬಾಲಾಂಜಿನೇಯ ಸ್ವಾಮಿ ದೇವಸ್ಥಾನದಿಂದ ಬೆಂಗಳೂರು ರಸ್ತೆವರೆಗೆ ಜಿಲ್ಲಾ ಖನಿಜ ನಿಧಿಯಡಿಯಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಬಳ್ಳಾರಿ ನಗರ ಶಾಸಕರಾದ ಜಿ. ಸೋಮಶೇಖರ್ ರೆಡ್ಡಿ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಮ್ಮೂರು ಶೇಖರ್ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ಸೋಮಶೇಖರ್ ರೆಡ್ಡಿ, ಸಿಸಿ ರಸ್ತೆ ಕಾಮಗಾರಿಯು ಡಿಎಂಎಫ್ ಅನುದಾನದನದ ಆಡಿಯಲ್ಲಿ ಅನುಮೋದನೆ ಗೊಂಡಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿಬುಡಾ ಪ್ರಾಧಿಕಾರದ ಆಯುಕ್ತರಾದ ಈರಪ್ಪ ಬಿರಾದಾರ, ಬುಡಾ ಎಇಇ ಜಿ.ಕೆ ರವಿಶಂಕರ್, ಮುಖಂಡರಾದ ವೀರಶೇಖರ ರೆಡ್ಡಿ, ಶ್ರೀನಿವಾಸ್ ಮೊತ್ಕರ್, ಬೆಣಕಲ್ ಬಸವರಾಜ್ ಗೌಡ ಮತ್ತು ನಿವಾಸಿಗಳು ಉಪಸ್ಥಿತರಿದ್ದರು.