ಬಳ್ಳಾರಿ ನಗರ: ಫಲಿತಾಂಶಕ್ಕೂ ಮುನ್ನ ಭವಿಷ್ಯ ನಿರ್ಧರಿಸಿಕೊಂಡ ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್
Team Udayavani, May 8, 2023, 12:58 PM IST
ಬಳ್ಳಾರಿ: ವಿಧಾನಸಭೆ ಚುನಾವಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳು ಲಭಿಸಲಿವೆ ಎಂದಿರುವ ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್, ಅಧಿಕೃತ ಫಲಿತಾಂಶ ಹೊರಬೀಳುವ ಮುನ್ನವೇ ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸಿಕೊಂಡು ಕ್ಷೇತ್ರದ ಮತದಾರರಲ್ಲಿ ಅಚ್ಚರಿ ಮೂಡಿಸಿದರು.
ನಗರದ ಮರ್ಚೇಡ್ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶದಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಮತಬ್ಯಾಂಕ್ ಇಲ್ಲ. ಕುಮಾರಣ್ಣ ಅವರ ಸಾಲಮನ್ನಾ, ಪಂಚರತ್ನ ಯೋಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗಲಿವೆ. ಹಾಗಾಗಿ ನಗರ ಪ್ರದೇಶದ ಜನರಿಗೆ ಅಷ್ಟಾಗಿ ಯೋಜನೆಗಳಿಲ್ಲ. ಕಳೆದ 2013 ರಲ್ಲಿ ಅಂದಿನ ಜೆಡಿಎಸ್ ಅಭ್ಯರ್ಥಿ ಮುನ್ನಾ ಗೆ 16 ಸಾವಿರಕ್ಕೂ ಹೆಚ್ಚು, ಕಳೆದ 2018 ರಲ್ಲಿ ಮಹ್ಮದ್ ಇಕ್ಬಾಲ್ ಹೊತೂರ್ ಅವರಿಗೆ 6 ಸಾವಿರಕ್ಕೂ ಹೆಚ್ಚು ಮತಗಳು ಲಭಿಸಿವೆ. ಈ ಬಾರಿಯ 2023 ನೇ ಚುನಾವಣೆಯಲ್ಲಿ ನನಗೆ ಸುಮಾರು 30 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆಯುವೆ. ಅದಕ್ಕಿಂತ ಕಡಿಮೆ ಪಡೆದಲ್ಲಿ ಜನರ ಸೇವೆಗೆ ನಾನು ಅನರ್ಹ ಎಂದಹ ನಿರ್ಧರಿಸುತ್ತೇನೆ ಎಂದು ತಮ್ಮ ಭವಿಷ್ಯವನ್ನು ತಾವೇ ಬಹಿರಂಗ ಪಡಿಸಿಕೊಂಡರು.
ಇದನ್ನೂ ಓದಿ:ಪ್ರವಾಸಿಗರೇ ಗಮನಿಸಿ.. ಮತದಾನ ದಿನದಂದು ಕವಿಶೈಲ, ಕವಿಮನೆ ಬಂದ್
ಈ ವೇಳೆ ಜಿಲ್ಲಾಧ್ಯಕ್ಷ ಸೋಮಲಿಂಗನಗೌಡ, ವಾದಿರಾಜ್ ಶೆಟ್ಟಿ, ರೋಷನ್ ಬಾಷ ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್