ಕಂಟ್ರೋಲ್‌ ರೂಂ ನಿರಂತರ ಕಾರ್ಯ


Team Udayavani, Mar 25, 2020, 4:47 PM IST

25-March-26

ಬಳ್ಳಾರಿ: ಕೊರೊನಾ ವೈರಸ್‌ ಹಿನ್ನೆಲೆ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್‌ ರೂಂ ಈಗಾಗಲೇ ಸ್ಥಾಪಿಸಲಾಗಿದ್ದು, ಅದು ನಿರಂತರವಾಗಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ ಮತ್ತು ಹಂಟಿಂಗ್‌ ಸೌಲಭ್ಯಗಳನ್ನು ಇನ್ನಷ್ಟು ಜಾಸ್ತಿ ಮಾಡಲಾಗುವುದು ಎಂದು ಐಇಸಿ ಮತ್ತು ಕಂಟ್ರೋಲ್‌ ರೂಂ ತಂಡದ ಸಹ ಮುಖ್ಯಸ್ಥ, ಯೋಜನಾ ನಿರ್ದೇಶಕ ರಮೇಶ ಹೇಳಿದರು.

ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಐಇಸಿ ಮತ್ತು ಕಂಟ್ರೋಲ್‌ ರೂಂ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಗಾಗಲೇ ಕಂಟ್ರೋಲ್‌ ರೂಂ (ದೂ:08392- 277100, ಮೊ:8277888866) ಸ್ಥಾಪಿಸಲಾಗಿದೆ. ಇಂದು ಸಂಜೆಯೊಳಗೆ ಅವುಗಳ ಹಂಟಿಂಗ್‌ ಸೌಲಭ್ಯ ಹೆಚ್ಚಿಸಲಾಗುವುದು. ಅಲ್ಲಿಗೆ ಬರುವ ದೂರುಗಳನ್ನು ಸಂಬಂಸಿದವರಿಗೆ ತುರ್ತಾಗಿ ಕಳುಹಿಸಿಕೊಡಲಾಗುವುದು. ಈ ಕಂಟ್ರೋಲ್‌ ರೂಂನಲ್ಲಿ ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿಗಳ ಜತೆಗೆ ಒಬ್ಬರು ಕೌನ್ಸಿಲರ್‌ ಇರಲಿದ್ದು, ಅವರು ಕೊರೋನಾ ಕುರಿತು ಆತಂಕ-ದುಗುಡಗಳನ್ನು ತೋರ್ಪಡಿಸಿಕೊಂಡು ಕಂಟ್ರೋಲ್‌ ರೂಂಗೆ ಸಂಪರ್ಕಿಸುವವರಿಗೆ ಅಗತ್ಯ ಟೆಲಿಪೋನಿಕ್‌ ಕೌನ್ಸೆಲಿಂಗ್‌ ಮಾಡಲಿದ್ದಾರೆ ಎಂದರು.

ರ್ಯಾಪಿಡ್‌ ರೆಸ್ಪಾನ್ಸ್‌ ತಂಡದೊಂದಿಗೆ ಸಮನ್ವಯಕಾರರಾಗಿ ಕೆಲಸ ಮಾಡುವುದರ ಜತೆಗೆ ಜನರಿಂದ ದೂರುಗಳನ್ನು ಸ್ವೀಕರಿಸುವ ಮತ್ತು ರವಾನಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದ ರಮೇಶ ಅವರು, ಇದಕ್ಕೆ ಅಗತ್ಯ ಸಿಬ್ಬಂದಿ ಒದಗಿಸುವ ನಿಟ್ಟಿನಲ್ಲಿ ಸಮಿತಿ ಸದಸ್ಯರಾಗಿರುವವರ ಇಲಾಖೆಗಳ ಸಿಬ್ಬಂದಿಯ ಮಾಹಿತಿಯನ್ನು ಒದಗಿಸುವಂತೆ ಅವರು ಕೋರಿದರು.

ಇಂದು ಸಂಜೆಯೊಳಗೆ ಈ ಸಮಿತಿಗೆ ಸಂಬಂಧಿಸಿದ ಕ್ರಿಯಾಯೋಜನೆ ಸಲ್ಲಿಸಬೇಕಾಗಿದ್ದು, ಈ ತಂಡಕ್ಕೆ ಅವಶ್ಯ ಮತ್ತು ಅಗತ್ಯವಾದವುಗಳನ್ನು ತಿಳಿಸಿದಲ್ಲಿ ಸೇರಿಸಲಾಗುವುದು. ಅಲ್ಲದೇ, ಈಗಾಗಲೇ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕರೋನಾ ಕುರಿತು ಸಾಕಷ್ಟು ಪ್ರಮಾಣದಲ್ಲಿ ಐಇಸಿ ಚಟುವಟಿಕೆಗಳನ್ನು ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಡಾ| ಸುನೀತಾ ಸಿದ್ರಾಮ್‌, ಬಿ.ಕೆ. ರಾಮಲಿಂಗಪ್ಪ, ಡಾ| ಕೃಷ್ಣಸ್ವಾಮಿ, ಡಾ| ಬಿ.ಕೆ.ಎಸ್‌.ಸುಂದರ್‌, ಅಶೋಕ್‌, ರಾಜಶೇಖರಪ್ಪ, ಈಶ್ವರ್‌ ದಾಸಪ್ಪನವರ್‌, ರಮೇಶ, ಸೈಯದ್‌ ಹುಸೇನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.