ಟ್ರೊಮಾಕೇರ್‌ ಸೆಂಟರ್‌ಗೆ ಕೋವಿಡ್‌ ಆಸತ್ರೆ ಸ್ಥಳಾಂತರಕ್ಕೆ ಚಿಂತನೆ

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ನಕುಲ್‌ ಸ್ಪಷ್ಟನೆ ವಿಮ್ಸ್‌ ಆಸ್ಪತ್ರೆ ಮೇಲೆ ಒತ್ತಡ ಕಡಿಮೆ ಮಾಡಲು ಈ ಕ್ರಮ

Team Udayavani, Jun 10, 2020, 4:13 PM IST

10-June-20

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಳ್ಳಾರಿ: ನಗರ ಹೃದಯಭಾಗದಲ್ಲಿನ ಜಿಲ್ಲಾಸ್ಪತ್ರೆಯಲ್ಲಿನ ಕೋವಿಡ್‌-19 ಆಸ್ಪತ್ರೆಯನ್ನು ಹೊರವಲಯದ ಟಿಬಿ ಸ್ಯಾನಿಟೋರಿಯಂ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಟ್ರೊಮಾಕೇರ್‌ ಸೆಂಟರ್‌ಗೆ ಸ್ಥಳಾಂತರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಹೊರವಲಯದ ಟಿಬಿಸ್ಯಾನಿಟೋರಿಯಂ (ವೆಲ್ಲೆಸ್ಲಿ) ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟ್ರಾಮಾಕೇರ್‌ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಇದ್ದ ವಿದ್ಯುತ್‌ ಇತರೆ ಕಾಮಗಾರಿಗಳು ಸಹ ಪೂರ್ಣಗೊಂಡಿವೆ. ಕ್ಲಿನೀಕ್‌ಗೆ ಸಂಬಂಧಿಸಿದ ಕಾಮಗಾರಿಗಳನ್ನು ಸಹ ಕೈಗೊಳ್ಳಲಾಗಿದ್ದು, ಆರೋಗ್ಯ ಇಲಾಖೆಯವರು ಪರಿಶೀಲಿಸಿದ ಬಳಿಕ ಜಿಲ್ಲಾಸ್ಪತ್ರೆಯಲ್ಲಿನ ಕೋವಿಡ್‌ ಸೋಂಕಿತರನ್ನು ಟ್ರಾಮಾಕೇರ್‌ ಸೆಂಟರ್‌ಗೆ ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುವುದು ಎಂದವರು ಸ್ಪಷ್ಟಪಡಿಸಿದರು.

ವಿಮ್ಸ್‌ಗೆ ಹೆಚ್ಚಿದ ಒತ್ತಡ: ಈ ಮೊದಲು ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಮತ್ತು ಮಕ್ಕಳ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಹೆಚ್ಚಿನ ಪ್ರಮಾಣದಲ್ಲಿ ಹೆರಿಗೆಗಳು ಸಹ ನಡೆಯುತ್ತಿದ್ದವು. ಜತೆಗೆ ಹೊರ ರೋಗಿಗಳಿಗೂ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕೋವಿಡ್‌ ಆಸ್ಪತ್ರೆಯನ್ನಾಗಿ ಮಾಡಿದ್ದರಿಂದ ಇವರಿಗೆಲ್ಲ ತೊಂದರೆಯಾಗಿದ್ದು, ವಿಮ್ಸ್‌ ಆಸ್ಪತ್ರೆ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್‌ ಆಸ್ಪತ್ರೆಯನ್ನು ಸ್ಥಳಾಂತರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಜಿಂದಾಲ್‌ ಸಂಸ್ಥೆಯ ನೌಕರರಿಗೆ ಕೋವಿಡ್‌ ಸೋಂಕು ಆವರಿಸಿದೆ. ಸೋಂಕು ಬಂದ ಕಾರಣಕ್ಕೆ ಕೈಗಾರಿಕೆಯನ್ನು ಬಂದ್‌ ಮಾಡುವ ಅಗತ್ಯವಿಲ್ಲ ಎಂದ ಡಿಸಿ ನಕುಲ್‌, ಕೈಗಾರಿಕೆಯಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗ ಜಿಂದಾಲ್‌ನ 3 ಕಾರ್ಮಿಕರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಂಸ್ಥೆಯ ಕೊರೆಕ್ಸ್‌ ಘಟಕದ ಮೂರು ಪಾಳೆಯಲ್ಲಿ 207 ಕಾರ್ಮಿಕರು, 60 ಜನ ಯೂನಿಟ್‌ ಮುಖ್ಯಸ್ಥರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಸೋಂಕು ಕಾಣಿಸಿಕೊಂಡವರ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸಂಸ್ಥೆಯಲ್ಲಿ ಒಟ್ಟು 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಅಂತರ ರಾಜ್ಯದಿಂದ ಬರುವವರಿಗೆ ಮೂರು ಕಡೆ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಯುತ್ತಿದೆ. ಆಂಧ್ರದಿಂದ ಬರುವವರಿಗೆ ಹೋಂ ಕ್ವಾರಂಟೈನ್‌, ಮಹಾರಾಷ್ಟ್ರದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 11,010 ಜನರ ಗಂಟಲು ದ್ರವ ಪರೀಕ್ಷೆ ಮಾಡಿದ್ದು, 68 ಜನರಿಗೆ ಪಾಸಿಟಿವ್‌ ಬಂದಿದೆ. ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಕೋವಿಡ್‌ ಪ್ರಕರಣಗಳು ಬರುವ ಸಾಧ್ಯತೆ ಇದೆ ಎಂದು ಭಾವಿಸಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿನ ಆಸ್ಪತ್ರೆಗಳಲ್ಲಿ ಐಸೋಲೇಷನ್‌ ವಾರ್ಡ್‌ಗಳನ್ನು ಸಿದ್ಧಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಹೇಳಿದರು.

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.